ಮಹಾರಾಷ್ಟ್ರ | ಭಾರೀ ಮಳೆ, ಬಿರುಗಾಳಿಗೆ ಧರೆಗುರುಳಿದ ಶತಮಾನದ ಹಳೆಯ ಮರ; 7 ಮಂದಿ ಸಾವು

Date:

  • ಮಹಾರಾಷ್ಟ್ರ ಪರಾಸ್‌ ಗ್ರಾಮದ ಬಾಬುಜಿ ದೇವಾಲಯದಲ್ಲಿ ಘಟನೆ
  • ಮೃತರಿಗೆ ಡಿಸಿಎಂ ದೇವೇಂದ್ರ ಫಡ್ನಾವಿಸ್ ಆರ್ಥಿಕ ನೆರವು ಘೋಷಣೆ

ಮಹಾರಾಷ್ಟ್ರದಲ್ಲಿ ಭಾನುವಾರ (ಏಪ್ರಿಲ್ 9) ಬೀಸಿದ ಗಾಳಿ ಸಹಿತ ಭಾರೀ ಮಳೆಗೆ ಅಕೋಲ ಜಿಲ್ಲೆಯ ದೇವಾಲಯವೊಂದರ ಆವರಣದಲ್ಲಿದ್ದ ಟಿನ್ ಶೆಡ್ ಮೇಲೆ ಶತಮಾನದ ಹಳೆಯ ಬೃಹತ್ ಮರವೊಂದು ಉರುಳಿ ಬಿದ್ದು, ಶೆಡ್‌ನಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಲಾಪುರ್ ತಾಲೂಕಿನ ಪರಾಸ್ ಗ್ರಾಮದ ಬಾಬುಜಿ ಮಹಾರಾಜ್ ದೇವಾಲಯದಲ್ಲಿ ಭಾನುವಾರ ರಾತ್ರಿ 7.30ರ ಹೊತ್ತಿಗೆ ಧಾರ್ಮಿಕ ಕಾರ್ಯಕ್ರಮವೊಂದು ಜರುಗಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಈ ಬಗ್ಗೆ ಸ್ಥಳೀಯ ಆಡಳಿತ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

ಪೂಜಾ ಕಾರ್ಯಕ್ರಮದ ಸಲುವಾಗಿ ಜನರು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಭಾರೀ ಗಾಳಿ ಸಹಿತ ಮಳೆ ಸುರಿದಿದೆ. ಪರಿಣಾಮ ಶತಮಾನದಷ್ಟು ಹಳೆಯ ಬೃಹತ್ ಬೇವಿನ ಮರ ಟಿನ್ ಶೆಡ್ ಮೇಲೆ ಉರುಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 35ರಿಂದ 40 ಜನರು ಶೆಡ್‌ನಲ್ಲಿ ಆಶ್ರಯ ಪಡೆದಿದ್ದರು. ಈ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. 23 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಮ್ಮು ಮತ್ತು ಕಾಶ್ಮೀರ | ಪಾಕಿಸ್ತಾನ ಗಡಿಯಲ್ಲಿ ಒಳ ನುಸುಳುಕೋರನ ಹತ್ಯೆ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಅಕೋಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರು ಮೃತರಿಗೆ ಸಂತಾಪ ಸೂಚಿಸಿದರು. ಮೃತರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವ ಭರವಸೆ ನೀಡಿದರು.

ಮಾಹಿತಿ ದೊರೆತ ಕೂಡಲೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದರು. ಪರಿಸ್ಥಿತಿ ಮೇಲೆ ನಿಗಾ ಇರಿಸುವಂತೆ ಪೊಲೀಸರಿಗೆ ನಿರ್ದೇಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...