ಎಂಬಿಬಿಎಸ್ ಇಂಟರ್ನ್‌ಗಳಿಗೆ ರೂ. 25 ಸಾವಿರ ಶಿಷ್ಯವೇತನ ಪಾವತಿಸಲು ಎನ್ಎಂಸಿಗೆ ಸುಪ್ರೀಂ ನಿರ್ದೇಶನ

Date:

ಶೇ.70 ರಷ್ಟು ವೈದ್ಯಕೀಯ ಕಾಲೇಜುಗಳು ಎಂಬಿಬಿಎಸ್‌ ಇಂಟರ್ನ್‌ಶಿಪ್ ಮಾಡುತ್ತಿರುವ ವೈದ್ಯರಿಗೆ ಯಾವುದೇ ಶಿಷ್ಯವೇತನ ನೀಡುತ್ತಿಲ್ಲ ಅಥವಾ ಕನಿಷ್ಠ ಶಿಷ್ಯವೇತನ ಪಾವತಿಸುತ್ತಿಲ್ಲ ಎಂಬ ದೂರಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 15) ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆರ್ಮಿ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ (ಎಸಿಎಂಎಸ್) ಶಿಷ್ಯ ವೇತನ ಪಾವತಿಸಲು ಕೋರಿ ವೈದ್ಯಕೀಯ ಇಂಟರ್ನಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ವಿಚಾರಣೆ ನಡೆಸುತ್ತಿದ್ದ ವೇಳೆ ಈ ಬೆಳವಣಿಗೆ ನಡೆದಿದೆ.

ಎಸಿಎಂಎಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ನಿವೃತ್ತ ಕರ್ನಲ್ ಆರ್ ಬಾಲಸುಬ್ರಮಣ್ಯಂ ಅವರು, ಸಶಸ್ತ್ರ ಸಿಬ್ಬಂದಿಯ ಮಕ್ಕಳಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ (ಎಡಬ್ಲ್ಯೂಇಎಸ್) ಸಂಸ್ಥೆಯು ಯಾವುದೇ ಲಾಭರಹಿತ ಆಧಾರದ ಮೇಲೆ ಕಾಲೇಜುಗಳನ್ನು ನಡೆಸುತ್ತಿದೆ. ಸಂಸ್ಥೆಯು ಯಾವುದೇ ಸರ್ಕಾರಿ ನೆರವು ಪಡೆಯುತ್ತಿಲ್ಲ ಎಂದು ನ್ಯಾಯಾಲಯದ ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾಭೋಲ್ಕರ್ ಹತ್ಯೆ ಪ್ರಕರಣ: ಅಂತಿಮ ವರದಿಯಲ್ಲಿ ಮೂವರು ಆರೋಪಿಗಳ ಬಿಡುಗಡೆಗೆ ಸಿಬಿಐ ಶಿಫಾರಸ್ಸು

ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂ ಕೋರ್ಟ್, ನಾವು ಲಾಭರಹಿತವಾಗಿರುವುದರಿಂದ ಸಫಾಯಿ ಕರ್ಮಚಾರಿಗಳಿಗೆ ಹಣ ನೀಡುವುದಿಲ್ಲ ಎಂದು ನೀವು ಹೇಳಬಹುದೆ? ಇದು ನಿಮಗೆ ಲಾಭ ಆದರೆ ಅವರಿಗೆ ಜೀವನಾಧಾರವಾಗಿದೆ. ನಾವು ಶಿಕ್ಷಕರಿಗೆ ವೇತನ ನೀಡುವುದಿಲ್ಲ ಎಂದು ನೀವು ಹೇಳಬಹುದೇ? ಎಲ್ಲರಿಗೂ ಪೋಷಕರ ಬೆಂಬಲ ಇಲ್ಲದಿರಬಹುದು. ಕಾನೂನು ಗುಮಾಸ್ತರಿಗೆ ಮಾಸಿಕ 80,000 ರೂ.ಗಳನ್ನು ಸುಪ್ರೀಂ ಕೋರ್ಟ್ ಪಾವತಿಸುತ್ತದೆ ಎಂದು ಸೂಚಿಸಿದ ಮುಖ್ಯ ನ್ಯಾಯ ಮೂರ್ತಿಗಳು ಎಸಿಎಂಎಸ್ ಕನಿಷ್ಠ 1 ಲಕ್ಷ ರೂ. ಪಾವತಿಸಬೇಕು ಎಂದು ಕೇಳಿದರು.

ಈ ಹಂತದಲ್ಲಿ ಪೀಠವು ಇತರ ಸರ್ಕಾರಿ ಕಾಲೇಜುಗಳಲ್ಲಿ ಪಾವತಿಸುವ ಶಿಷ್ಯವೇತನ ದರವನ್ನು ಹೋಲಿಸಿತು ಮತ್ತು ಅರ್ಜಿದಾರರಿಗೆ ಅವರು ಎಷ್ಟು ನಿರೀಕ್ಷಿಸುತ್ತಿದ್ದಾರೆ ಎಂದು ಕೇಳಿತು. ಅರ್ಜಿದಾರರ ಪರ ವಕೀಲ ಚಾರು ಮಾಥುರ್, 25,000 ರೂ. ಎಂದು ಹೇಳಿದರು.

ನಂತರದಲ್ಲಿ ಪೀಠವು ಪ್ರಸ್ತುತ ನೂರು ಇಂಟರ್ನಿಗಳಿದ್ದು ವೈದ್ಯಕೀಯ ಇಂಟರ್ನ್‌ಗಳಿಗೆ ಶಿಷ್ಯ ವೇತನವಾಗಿ ತಿಂಗಳಿಗೆ ರೂ.25,000 ಪಾವತಿಸಲು ಎಸಿಎಂಎಸ್‌ಗೆ ಸೂಚಿಸಿತು.

“ಇಂಟರ್ನ್‌ಶಿಪ್ ಅವಧಿಯಲ್ಲಿ ಇಂಟರ್ನ್‌ಗಳಿಗೆ ಶಿಷ್ಯವೇತನ ಪಾವತಿಸಬೇಕಾಗುತ್ತದೆ. ಎನ್‌ಎಂಸಿ ಅಳವಡಿಸಿಕೊಂಡಿರುವ ನಿಯಮಾವಳಿಗಳ ಆದೇಶವನ್ನು ಉಲ್ಲಂಘಿಸಲಾಗುವುದಿಲ್ಲ” ಎಂದು ಪೀಠವು ತನ್ನ ತನ್ನ ಆದೇಶದಲ್ಲಿ ಹೇಳಿದೆ.

ಈ ಹಂತದಲ್ಲಿ ವಕೀಲ ವೈಭವ್ ಗಗ್ಗರ್ ಅವರು ಶೇ. 70 ರಷ್ಟು ಕಾಲೇಜುಗಳು ಶಿಷ್ಯ ವೇತನ ಪಾವತಿಸುತ್ತಿಲ್ಲ ಎಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕೋರ್ಟ್ ಅಫಿಡವಿಟ್ ಸಲ್ಲಿಸುವಂತೆ ಎನ್‌ಎಂಸಿ ಪರ ವಕೀಲ ಗೌರವ್ ಶರ್ಮಾ ಅವರಿಗೆ ಸೂಚಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...