76ನೇ ಗಣರಾಜ್ಯೋತ್ಸವಕ್ಕೆ 10,000 ಗಣ್ಯರಿಗೆ ಆಹ್ವಾನ: ಮೆರವಣಿಗೆಯಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಭಾಗಿ

Date:

ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.

ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ಆಕರ್ಷಕ ಪಥ ಸಂಚಲನ ನಡೆಯಲಿದೆ. 76ನೇ ಗಣರಾಜೋತ್ಸವದ ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ. ಕರ್ನಾಟಕದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಕೂಡ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿದೆ.

ಈ ಬಾರಿ ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಘೋಷಣೆಯೊಂದಿಗೆ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ. 10,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಇದೇ ಮೊದಲಬಾರಿಗೆ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಹಾಗಾಗಿ ಕರ್ತವ್ಯ ಪಥದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ.

ಒಟ್ಟು 6 ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.

ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದರು. ಬೆಂಗಳೂರಿನ ಮಾಣಿಕ್‌ ಶಾ ಪರೇಡ್‌ನಲ್ಲಿ ಮಾತನಾಡಿದ ಅವರು “ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ. ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನದ ಪಾಲನೆಯಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿದೆ” ಎಂದು ಅರ್ಥ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...