ನರ್ಮದಾ ನದಿ ಮೇಲಿವೆ 9 ‘ಅಪಾಯಕಾರಿ’ ಸೇತುವೆಗಳು; 5 ಬಂದ್‌

Date:

ಗುಜರಾತ್‌ನಲ್ಲಿ ಹರಿಯುವ ನರ್ಮದಾ ನದಿಯ ಮೇಲೆ 9 ಅಪಾಯಕಾರಿ ಸೇತುವೆಗಳಿದ್ದು, ಅವುಗಳಲ್ಲಿ 5 ಗಂಭೀರ ಪರಿಸ್ಥಿತಿಯಲ್ಲಿವೆ. ಆ 5 ಸೇತುವೆಗಳನ್ನು ಬಳಕೆಯಿಂದ ನಿರ್ಬಂಧಿಸಲಾಗಿದೆ. ಉಳಿದ 4 ಸೇತುವೆಗಳಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಾಯಕಾರಿ ಸ್ಥಿತಿಯಲ್ಲಿರುವ 9 ಸೇತುವೆಗಳು ಮಾತ್ರವಲ್ಲದೆ, ತಕ್ಷಣದ ದುರಸ್ತಿ ಕಾರ್ಯಗಳಿಗಾಗಿ ಈಗಿನಿಂದಲೇ ಜಾರಿಗೆ ಬರುವಂತೆ 36 ಇತರ ಸೇತುವೆಗಳನ್ನು ಮುಚ್ಚಲು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಗುಜರಾತ್ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸೇತುವೆಗಳು ಕೂಡ ನರ್ಮದಾ ನದಿ ಭಾಗವಾಗಿವೆ ಎಂಬುದು ಗಮನಾರ್ಹ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ವಿವಿಧ ರಸ್ತೆಗಳು ಮತ್ತು ಸೇತುವೆಗಳ ದುರಸ್ತಿ ಹಾಗೂ ನಿರ್ವಹಣಾ ಕಾರ್ಯವನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ನಿರ್ದೇಶನದ ಮೇರೆಗೆ ನಡೆಸಲಾಗುತ್ತಿದೆ. ಅಲ್ಲದೆ, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ನರ್ಮದಾ ನದಿಯ ಜಾಲದಲ್ಲಿರುವ ವಿವಿಧ ಸೇತುವೆಗಳ ತಾಂತ್ರಿಕ ಪರಿಶೀಲನೆಯನ್ನು ಸಹ ನಡೆಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ದಾರ್ ಸರೋವರ ನರ್ಮದಾ ನಿಗಮ ಲಿಮಿಟೆಡ್ (SSNNL) ಪ್ರಕಾರ, ರಾಜ್ಯದಲ್ಲಿ ನರ್ಮದಾ ನದಿ ಜಾಲದ ಮೂಲಕ ಹಾದುಹೋಗುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಹಾಗೂ ಹಳ್ಳಿ ರಸ್ತೆಗಳನ್ನು ಸಂಪರ್ಕಿಸುವ ಸುಮಾರು 2,110 ಸೇತುವೆಗಳಿವೆ. ಈ ಸೇತುವೆಗಳ ಪ್ರಸ್ತುತ ಸ್ಥಿತಿಯನ್ನು ನಿರ್ಣಯಿಸಲು, ಸಂಭವನೀಯ ಹಾನಿಗಳನ್ನು ತಡೆಗಟ್ಟಲು ಹಾಗೂ ಸೇತುವೆಗಳ ಜೀವಿತಾವಧಿಯನ್ನು ವಿಸ್ತರಿಸಲು ಸಮಗ್ರ ದೃಶ್ಯ ಪರಿಶೀಲನಾ ಅಭಿಯಾನವನ್ನು ನಡೆಸಲಾಗಿದೆ.

ಈ ಲೇಖನ ಓದಿದ್ದೀರಾ?: ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?

ಸಂಪೂರ್ಣವಾಗಿ ಮುಚ್ಚಿದ ಐದು ಸೇತುವೆಗಳಲ್ಲಿ ಎರಡು ಮೋರ್ಬಿ ಜಿಲ್ಲೆಯಲ್ಲಿದ್ದರೆ, ಮೂರು ಸುರೇಂದ್ರನಗರ ಜಿಲ್ಲೆಯಲ್ಲಿವೆ.

ಜುಲೈ 9ರಂದು ಆನಂದ್ ಮತ್ತು ವಡೋದರಾ ಜಿಲ್ಲೆಗಳನ್ನು ಸಂಪರ್ಕಿಸುವ 40 ವರ್ಷ ಹಳೆಯ ಸೇತುವೆಯ ಒಂದು ಭಾಗವು ಗಂಭೀರಾ ಗ್ರಾಮದ ಬಳಿ ಕುಸಿದು ಬಿದ್ದಿತ್ತು. ದುರಂತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...