ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ ಆರೋಪ

Date:

ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಬೋರ್ಡ್‌ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಯಿಳಿ ಆರೋಪಿಸಿದ್ದಾರೆ.

ಚೆನ್ನೈನ ಶಾಲಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾಷಾ ಕಲಿಕೆ ವಿದ್ಯಾರ್ಥಿಗಳ ಆಯ್ಕೆಯಾಗಿರಬೇಕು. ಮೂರನೇ ಭಾಷೆ ಕಡ್ಡಾಯವಲ್ಲ, ಅದು ಒಂದು ಆಯ್ಕೆಯಾಗಿರಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರವು ತಮಿಳುನಾಡು ಮತ್ತು ಕೇರಳದಂತಹ ಉತ್ತಮ ಸಾಧನೆ ಮಾಡಿದ ರಾಜ್ಯಗಳಿಗೆ ಶಿಕ್ಷಣದ ನಿಧಿಯನ್ನು ತಡೆಹಿಡಿಯುತ್ತಿದೆ. ಕೇಂದ್ರ ಸರ್ಕಾರವು ಶಿಕ್ಷಣ ನಿಧಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯಗಳಿಗೆ ಬೆದರಿಕೆ ಹಾಕುತ್ತಿದೆ. ಆದರೆ ಮುಖ್ಯಮಂತ್ರಿ ಸ್ಟಾಲಿನ್ ಅವರು ಶಿಕ್ಷಣ ನಿಧಿಯ ಪೂರ್ಣ ವೆಚ್ಚವನ್ನು ತಮ್ಮ ರಾಜ್ಯ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅನ್ಬಿಲ್ ಮಹೇಶ್ ಹೇಳಿದರು.

ಒಂದು ದಿನದ ಹಿಂದಷ್ಟೆ ಭಾಷಾ ವಿಚಾರವಾಗಿ ಮಾತನಾಡಿದ್ದ ಡಿಎಂಕೆ ಸಂಸದೆ ಕನಿಮೋಳಿ, ಹಿಂದಿ ಯಾವುದೇ ಭಾಷೆಯ ಶತ್ರು ಅಲ್ಲದಿದ್ದರೆ, ತಮಿಳು ಕೂಡ ಅಲ್ಲ ಎಂದು ಹೇಳಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಯಾವುದೇ ಭಾಷೆಯ ಶತ್ರುವಲ್ಲ ಎಂದು ಹೇಳಿದ್ದಾರೆ. ಅದೇ ರೀತಿ ತಮಿಳು ಕೂಡ ಯಾವುದೇ ಭಾಷೆಯ ಶತ್ರುವಲ್ಲ. ಉತ್ತರ ಭಾರತದ ಜನರು ದಕ್ಷಿಣ ಭಾರತದ ಭಾಷೆಗಳನ್ನು ಕಲಿಯಬೇಕು ಎಂದು ಕನಿಮೋಳಿ ಒತ್ತಾಯಿಸಿದ್ದರು.

“ಹಿಂದಿ ಯಾವುದೇ ಭಾಷೆಯ ಶತ್ರುವಲ್ಲದಿದ್ದರೆ, ತಮಿಳು ಕೂಡ ಯಾವುದೇ ಭಾಷೆಯ ಶತ್ರುವಲ್ಲ. ಅವರು ತಮಿಳನ್ನು ಕಲಿಯಲಿ. ಉತ್ತರ ಭಾರತದ ಜನರು ಕನಿಷ್ಠ ಒಂದು ದಕ್ಷಿಣ ಭಾರತದ ಭಾಷೆಯನ್ನಾದರೂ ಕಲಿಯಲಿ. ಅದೇ ನಿಜವಾದ ರಾಷ್ಟ್ರೀಯ ಏಕೀಕರಣ” ಎಂದು ಕನಿಮೋಳಿ ಹೇಳಿದ್ದರು.

ಇತ್ತೀಚೆಗೆ ಅಮಿತ್ ಶಾ ಅವರು ಹಿಂದಿ ಯಾವುದೇ ಭಾರತೀಯ ಭಾಷೆಯ ವಿರೋಧಿಯಲ್ಲ, ಬದಲಿಗೆ ಎಲ್ಲರ ಸ್ನೇಹಿತ. ದೇಶದಲ್ಲಿ ಯಾವುದೇ ಭಾಷೆಗೆ ವಿರೋಧ ಇರಬಾರದು ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...