ಹಾಡು ಹಾಡಿ ಸಂಚಾರ ನಿಯಮಗಳ ಜಾಗೃತಿ ಮೂಡಿಸುವ 10ರ ಬಾಲಕ!

Date:

ಮಧ್ಯಪ್ರದೇಶದ ಇಂದೋರ್‌ನಲ್ಲಿ ಆದಿತ್ಯ ತಿವಾರಿ ಎಂಬ 10 ವರ್ಷದ ಬಾಲಕ ತಾನೇ ಹಾಡು ಸಂಯೋಜನೆ ಮಾಡಿ ಆ ಹಾಡುಗಳನ್ನು ಹಾಡುವ ಮೂಲಕ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾನೆ.

ಟ್ರಾಫಿಕ್ ಸಿಗ್ನಲ್‌ನಲ್ಲಿಯೇ ನಿಂತು ಸಂಚಾರ ಪೊಲೀಸರಂತೆ ಓಡಾಡಿಕೊಂಡು, ಹಾಡುತ್ತಾ, ನಿಯಮ ಉಲ್ಲಂಘಿಸುವವರಿಗೆ ಬುದ್ದಿ ಹೇಳುತ್ತಾ ಜನರಿಗೆ ಸಂಚಾರ ನಿಯಮಗಳ ಬಗ್ಗೆ ಬಾಲಕ ಜಾಗೃತಿ ಮೂಡಿಸುತ್ತಿದ್ದಾನೆ.

ಸಿನಿಮಾ ಹಾಡುಗಳಿಗೆ ಸಂಚಾರ ನಿಯಮಕ್ಕೆ ಸಂಬಂಧಿಸಿದ ಸಾಹಿತ್ಯವನ್ನು ಸೇರಿಸಿ ಈ ಬಾಲಕ ಹಾಡುತ್ತಾನೆ. ಹಾಗೆಯೇ ಹೆಲ್ಮೆಟ್ ಧರಿಸದೆ ಸಂಚರಿಸುವವರ ಬಳಿ ಹೋಗಿ ಸಂಚಾರಿ ನಿಯಮ ಪಾಲಿಸುವಂತೆ ಮನವಿ ಮಾಡುವ ಚೀಟಿಯೊಂದನ್ನು ನೀಡುತ್ತಾನೆ. ಜೊತೆಗೆ ಚಾಕೊಲೇಟ್ ನೀಡಿ ನಿಯಮ ಪಾಲಿಸುವಂತೆ ಮನವಿ ಮಾಡುತ್ತಾನೆ ಈ ಬಾಲಕ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಆದಿತ್ಯ ತಿವಾರಿ, “ನಾನು ಕಳೆದ ಮೂರು ವರ್ಷಗಳಿಂದ ಟ್ರಾಫಿಕ್ ಅನ್ನು ನಿರ್ವಹಿಸುತ್ತಿದ್ದೇನೆ. ನನ್ನ ಸಹೋದರಿ ‘ನೋ ಸ್ಮೋಕಿಂಗ್’ ಅಭಿಯಾನವನ್ನು ನಡೆಸುತ್ತಿದ್ದಳು. ಅವಳನ್ನು ನೋಡಿ ನನಗೂ ದೇಶ ಸೇವೆ ಮಾಡುವ ಮನೋಭಾವ ಬಂದಿದೆ. ಅದರಿಂದಾಗಿ ನಾನು ರಸ್ತೆಗಳಿದು ಸಂಚಾರ ನಿಯಮ ಹೇಳುತ್ತಿದ್ದೇನೆ” ಎಂದು ತಿಳಿಸಿದ್ದಾನೆ.

ಇದನ್ನು ಓದಿದ್ದೀರಾ? ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಮನೆಗೆ ಬರಲಿದೆ ನೋಟಿಸ್ ಜತೆಗೆ ಕ್ಯೂಆರ್‌ ಕೋಡ್‌

“ನಾನು ರಚಿಸಿದ ಹಾಡುಗಳನ್ನು ಹಾಡುವ ಮೂಲಕ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತೇನೆ. ಸ್ವಚ್ಛತೆಯಲ್ಲಿ ಇಂದೋರ್ ಮೊದಲ ಸ್ಥಾನದಲ್ಲಿದ್ದಂತೆ ಸಂಚಾರ ನಿಯಮಗಳ ಅನುಸರಣೆಯಲ್ಲಿ ಇಂದೋರ್ ಮೊದಲ ಸ್ಥಾನದಲ್ಲಿರಬೇಕೆಂದು ನಾನು ಬಯಸುತ್ತೇನೆ. ನಾನು ದೊಡ್ಡವನಾದಾಗ ಅಂತಹ ಸೈನಿಕನಾಗಲು ಬಯಸುತ್ತೇನೆ” ಎಂದು ಆದಿತ್ಯ ತಿವಾರಿ ಹೇಳಿದ್ದಾನೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...