ಸತೀಶ್ ಆಚಾರ್ಯ, ಮಂಜುಲ್ ಕಾರ್ಟೂನ್‌ಗಳಿಂದ ಭಾರತದ ಕಾನೂನು ಉಲ್ಲಂಘನೆ: ಮುಂಬೈ ಪೊಲೀಸರಿಂದ ನೋಟಿಸ್

Date:


ಕಳೆದ ವಾರ ಭಾರತೀಯ ವ್ಯಂಗ್ಯಚಿತ್ರಕಾರರಾದ ಸತೀಶ್ ಆಚಾರ್ಯ ಮತ್ತು ಮಂಜುಲ್ ಅವರಿಗೆ ತಮ್ಮ ವ್ಯಂಗ್ಯ ಚಿತ್ರಗಳು ಭಾರತದ ಮಾಹಿತಿ ತಂತ್ರಜ್ಞಾನದ ಕಾನೂನುಗಳನ್ನು ಉಲ್ಲಂಘಿಸುತ್ತವೆ ಎಂದು ತಿಳಿಸಲಾಗಿದೆ.

ವಾಷಿಂಗ್ಟನ್‌ ಪೋಸ್ಟ್ ನ ಮಾಲೀಕ ಜೆಫ್ ಬೆಜೋಸ್ ಮತ್ತು ಬಿಲಿಯನರ್ ಮಾರ್ಕ್ ಝುಕರ್ಬರ್ಗ್ ಟ್ರಂಪ್ ಗೆ ತಲೆಬಾಗುವ ತನ್ನ ವ್ಯಂಗ್ಯಚಿತ್ರವನ್ನು ವಾಷಿಂಗ್ಟನ್‌ ಪೋಸ್ಟ್ ತಿರಸ್ಕರಿಸಿದ ಬೆನ್ನಲ್ಲೇ ಪುಲಿಟ್ಜರ್ ವಿಜೇತ ವ್ಯಂಗ್ಯಚಿತ್ರಕಾರ್ತಿ ಆನ್ ಟೆಲ್ನೇಸ್ ರಾಜೀನಾಮೆ ಘೋಷಿಸಿದ್ದರು. ಇದರ ಬೆನ್ನಲ್ಲೇ ಭಾರತದಲ್ಲಿ ಈ ಬೆಳವಣಿಗೆ ಬೆಳಕಿಗೆ ಬಂದಿದೆ ಎಂದು ಟೆಲಿಗ್ರಾಪ್‌ ಇಂಡಿಯಾ ವರದಿ ಮಾಡಿದೆ.

ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ವೇದಿಕೆ ʼಎಕ್ಸ್ʼ ಭಾರತೀಯ ವ್ಯಂಗ್ಯಚಿತ್ರಕಾರರಾದ ಸತೀಶ್ ಆಚಾರ್ಯ ಮತ್ತು ಮಂಜುಲ್ ಅವರಿಗೆ ತಮ್ಮ ವ್ಯಂಗ್ಯ ಚಿತ್ರಗಳಿಗೆ ಮುಂಬೈನ ಪೊಲೀಸರಿಂದ ಆಕ್ಷೇಪಣೆ ಬಂದಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವ್ಯಂಗ್ಯ ಚಿತ್ರಕಾರ ಸತೀಶ್ ಆಚಾರ್ಯ ತನಗೆ ಎಕ್ಸ್ ನಿಂದ ಬಂದ ನೋಟಿಸ್ ಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ನೋಟಿಸ್‌ನ ಸ್ಕ್ರೀನ್ ಶಾಟ್‌ಗಳನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ʼನಿಮ್ಮ ಎಕ್ಸ್ ಖಾತೆ @safishacharya ಭಾರತದ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಮುಂಬೈ ಪೊಲೀಸರು ನಮಗೆ ಮಾಹಿತಿ ನೀಡಿದ್ದಾರೆ. ಖಾತೆಯಿಂದ ವಿಷಯವನ್ನು ತೆಗೆದುಹಾಕಲು ಕಾನೂನು ಜಾರಿ ಅಥವಾ ಸರ್ಕಾರಿ ಸಂಸ್ಥೆಗಳಿಂದ ಸೂಚನೆ ಸ್ವೀಕರಿಸಿದರೆ ನಮ್ಮ ಬಳಕೆದಾರರಿಗೆ ತಿಳಿಸುವುದು ನಮ್ಮ ನೀತಿಯಾಗಿದೆ. ಈ ರೀತಿಯ ಸೂಚನೆಯನ್ನು ಸ್ವೀಕರಿಸುವುದರಿಂದ ನಿಮಗೆ ಗೊಂದಲದ ಅನುಭವವಾಗಿರಬಹುದು. ನಿಮ್ಮ ಹಿತಾಸಕ್ತಿಗಳನ್ನು ಕಾಪಾಡಲು ನೀವು ಪರ್ಯಾಯ ಹಾದಿಯನ್ನು ಕಂಡುಕೊಳ್ಳಬಹುದು. ನ್ಯಾಯಾಲಯದಲ್ಲಿ ಸೂಚನೆಯನ್ನು ಪ್ರಶ್ನಿಸಬಹುದು, ನಾಗರಿಕ ಸಮಾಜ ಸಂಸ್ಥೆಗಳನ್ನು ಸಂಪರ್ಕಿಸಬಹುದು. ವಿಷಯವನ್ನು ಸ್ವಯಂಪ್ರೇರಣೆಯಿಂದ ಅಳಿಸಬಹುದು ಅಥವಾ ಬೇರೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಬಹುದಾಗಿದೆ’ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಮಂಜುಲ್ ಅವರಿಗೆ ಕೂಡ ಇದೇ ರೀತಿಯ ನೋಟಿಸ್ ನೀಡಲಾಗಿದೆ. ಸತೀಶ್ ಆಚಾರ್ಯ ಅಥವಾ ಮಂಜುಲ್ ವಿರುದ್ಧ ಈ ಬಗ್ಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ. ಅವರ ಪೋಸ್ಟ್ ಹೇಗೆ ಕಾನೂನುಗಳನ್ನು ಉಲ್ಲಂಘಿಸಿದೆ ಎಂಬುದನ್ನು ತಿಳಿಯಲು ಎಕ್ಸ್ ಅನ್ನು ಕೂಡ ಅವರು ಸಂಪರ್ಕಿಸಿಲ್ಲ. ಆದರೆ, ಇಬ್ಬರೂ ನಾವು ಈ ಬಗ್ಗೆ ಭಯಪಡುವುದಿಲ್ಲಎಂದು ಹೇಳಿರುವುದಾಗಿ ಟೆಲಿಗ್ರಾಪ್ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ, ಭಾರತದ ಸಂವಿಧಾನವು ವ್ಯಂಗ್ಯಚಿತ್ರಗಳ ಮೂಲಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ನನಗೆ ನೀಡಿದೆ. ಅಧಿಕಾರದಲ್ಲಿರುವ ಜನರು ಕಾರ್ಟೂನ್ ಗಳನ್ನು ಒಪ್ಪಬಹುದು ಅಥವಾ ಒಪ್ಪದಿರಬಹುದು. ಆದರೆ, ಅವರು ವ್ಯಂಗ್ಯಚಿತ್ರಕಾರರ ಪ್ರಶ್ನಿಸುವ, ವಿಮರ್ಶೆಯ ಹಕ್ಕನ್ನು
ಕಸಿದುಕೊಳ್ಳಲು ಸಾಧ್ಯವಿಲ್ಲ ಮತ್ತು ಕಾರ್ಟೂನ್‌ ಗಳ ಮೂಲಕ ಅಭಿಪ್ರಾಯ ವ್ಯಕ್ತಪಡಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತರು, ವ್ಯಂಗ್ಯಚಿತ್ರಕಾರರು ಆಕ್ಷೇಪಣೆಗಳನ್ನು ಎದುರಿಸುವುದು ಸರ್ವೆ ಸಾಮಾನ್ಯವಾಗಿದೆ. ಸಂಪಾದಕೀಯ ವ್ಯಂಗ್ಯಚಿತ್ರಗಳ ಮೂಲಕ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸುವ ವ್ಯಂಗ್ಯಚಿತ್ರಕಾರರ ಶ್ರೀಮಂತ ಪರಂಪರೆಯನ್ನು ಭಾರತ ಹೊಂದಿದೆ. ಸರ್ಕಾರ, ಸ್ಥಾಪನೆ, ನೀತಿಗಳನ್ನು, ನಾಯಕರನ್ನು ಪ್ರಶ್ನಿಸುವುದು ವ್ಯಂಗ್ಯಚಿತ್ರಕಾರನ ಕೆಲಸ ಮತ್ತು ಕರ್ತವ್ಯ. ವೃತ್ತಿಪರ ವ್ಯಂಗ್ಯಚಿತ್ರಕಾರನಾಗಿ ಕಳೆದ ಎರಡು ದಶಕಗಳಿಂದ ನಾನು ಅದೇ ಕೆಲಸವನ್ನು ಮಾಡುತ್ತಿದ್ದೇನೆ. ಅಧಿಕಾರದಲ್ಲಿರುವ ಪಕ್ಷ, ಅಧಿಕಾರದಲ್ಲಿರುವ ಜನರು ಬದಲಾಗಬಹುದು. ಆದರೆ ಸರ್ಕಾರವನ್ನು ಪ್ರಶ್ನಿಸುವ ವ್ಯಂಗ್ಯಚಿತ್ರಕಾರನ ನಿಲುವು ಬದಲಾಗುವುದಿಲ್ಲ ಎಂದು ಸತೀಶ್ ಆಚಾರ್ಯ ಹೇಳಿದ್ದಾರೆ.

ವ್ಯಂಗ್ಯಚಿತ್ರಕಾರ ಮಂಜುಲ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾವು ಭಯಪಡುವುದಿಲ್ಲ. ಈ ಸೂಚನೆಯು ಪಾರದರ್ಶಕತೆ ಮತ್ತು ಪ್ರಕ್ರಿಯೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ. ಇಂತಹ ಸೂಚನೆಗಳು ಮುಕ್ತ ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕೋದ್ಯಮದ ಮೇಲೆ ಪರಿಣಾಮ ಬೀರುತ್ತದೆ. ಅನೇಕ ವ್ಯಂಗ್ಯಚಿತ್ರ ರಚನೆಕಾರರು ಮತ್ತು ಪತ್ರಕರ್ತರು ಸೂಕ್ಷ್ಮ ವಿಷಯಗಳಿಂದ ದೂರ ಸರಿಯುತ್ತಾರೆ. ಸೂಕ್ಷ್ಮ ವಿಷಯಗಳಿಂದಾಗುವ ಪರಿಣಾಮಗಳ ಬಗ್ಗೆ ಭಯಪಡುತ್ತಾರೆ ಎಂದು ಮಂಜುಲ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...