ಮಧ್ಯಪ್ರದೇಶ | ಕ್ಷುಲ್ಲಕ ಕಾರಣಕ್ಕೆ ಹಸೆಮಣೆಯಲ್ಲಿ ವಿಷ ಕುಡಿದ ಜೋಡಿ; ವರ ಸಾವು, ವಧು ಗಂಭೀರ

Date:

  • ಮಧ್ಯಪ್ರದೇಶ ಇಂದೋರ್‌ ನಗರ ಕನಾಡಿಯಾದಲ್ಲಿ ಘಟನೆ
  • ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿರುವ ವಧು

ಬಹಳ ವರ್ಷಗಳ ಕಾಯುವಿಕೆ ನಂತರ ವಿವಾಹ ಆಗುತ್ತಿರುವುದಕ್ಕೆ ನವ ಜೋಡಿಯೊಂದು ತಾಳಿ ಕಟ್ಟುವ ಮುನ್ನವೇ ಹಸೆಮಣೆ ಮೇಲೆ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶ ಇಂದೋರ್‌ ನಗರದಲ್ಲಿ ನಡೆದಿರುವುದಾಗಿ ಗುರುವಾರ (ಮೇ 18) ವರದಿಯಾಗಿದೆ.

ವಿಷ ಸೇವನೆಯಿಂದ 21 ವರ್ಷದ ವರ ಮೃತಪಟ್ಟಿದ್ದಾರೆ. 20 ವರ್ಷದ ವಧು ಸ್ಥಿತಿ ಗಂಭೀರವಾಗಿದೆ. ಘಟನೆ ಮಂಗಳವಾರ (ಮೇ 16) ನಡೆದಿದೆ.

ಮಧ್ಯಪ್ರದೇಶ ಇಂದೋರ್‌ನ ಈ ಘಟನೆಯಲ್ಲಿ ವಿಷ ಸೇವಿಸಿದ ವಧು, ವರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ವರ ಮೃತಪಟ್ಟಿದ್ದಾರೆ. ವಧು ಇನ್ನೂ ಜೀವನ್ಮರಣ ಹೋರಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಾಲಯದಲ್ಲಿ ವಿವಾಹ ಸಮಾರಂಭ ನಡೆಯುವ ವೇಳೆ ವಧು, ವರರ ನಡುವೆ ವಿವಾಹ ಸಂಬಂಧ ವಾಗ್ವಾದ ನಡೆದಿದೆ. ಬಳಿಕ ವರ ತಾನು ವಿಷ ಸೇವಿಸಿರುವುದಾಗಿ ವಧುವಿಗೆ ತಿಳಿಸಿದ್ದಾನೆ. ಆಗ ವಧು ಸಹ ವಿಷ ಸೇವಿಸಿದ್ದಾಳೆ” ಎಂದು ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ (ಎಎಸ್‌ಐ) ರಂಜಾನ್ ಖಾನ್‌ ಸುದ್ದಿಗಾರರಿಗೆ ತಿಳಿಸಿದರು.

“ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ವರ ಮೃತಪಟ್ಟಿರುವುದಾಗಿ ಘೋಷಿಸಿದರು. ವಧು ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ” ಎಂದು ಅವರು ಹೇಳಿದರು.

ಯುವತಿಯು ಯುವಕನನ್ನು ಮದುವೆಯಾಗುವಂತೆ ಹಲವು ದಿನಗಳಿಂದ ಪೀಡಿಸುತ್ತಿದ್ದಳು. ತನ್ನ ವೃತ್ತಿಯ ಏಳ್ಗೆಯ ಕಾರಣ ಎರಡು ವರ್ಷ ಕಾಲಾವಕಾಶ ಬೇಕು ಎಂದು ಯುವಕ ಹೇಳಿದ್ದ. ಈ ಸಂಬಂಧ ಯುವತಿ ಯುವಕನ ಮೇಲೆ ಪೊಲೀಸರಿಗೆ ದೂರು ನೀಡಿದ್ದಳು.

ಈ ಸುದ್ದಿ ಓದಿದ್ದೀರಾ? ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ಗೆ ಸುಪ್ರೀಂನಿಂದ ನಿರೀಕ್ಷಣಾ ಜಾಮೀನು ಮಂಜೂರು

ಈ ವಿಚಾರ ಮದುವೆ ವೇಳೆ ಮತ್ತೆ ಪ್ರಸ್ತಾಪವಾಗಿ ವಾಗ್ವಾದ ಉಂಟಾಯಿತು ಎಂದು ವರನ ಕುಟುಂಬ ಸದಸ್ಯರು ತಿಳಿಸಿದರು ಎಂದು ಪೊಲೀಸರು ಮಾಹಿತಿ ನೀಡಿದರು.

ಮಧ್ಯಪ್ರದೇಶ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ವಧು ಮತ್ತು ವರನ ಕಡೆಯವರ ವಿಚಾರಣೆ ನಡೆಸಿದ್ದಾರೆ. ಶೀಘ್ರ ಇಬ್ಬರ ಆತ್ಮಹತ್ಯೆಗೆ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...