ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿ ಟಕ್ಕರ್‌ | ದೇವದಾಸ್‌ಗೆ ರಾಹುಲ್‌ ಗಾಂಧಿ ಹೋಲಿಸಿ ಪೋಸ್ಟರ್

Date:

  • ಪಾಟ್ನಾದ ಬಿಜೆಪಿ ಕಚೇರಿ ಹೊರಗೆ ರಾಹುಲ್‌ ಗಾಂಧಿ ಪೋಸ್ಟರ್
  • ವಿಷ್ಣುವಿನ ಪಕ್ಕ ರಾಹುಲ್‌ ಫೋಟೋವಿನ ಪೋಸ್ಟ್‌ ಹಾಕಿದ ಆರ್‌ಜೆಡಿ

ಬಿಹಾರದ ಪಾಟ್ನಾದ ಬೀದಿಗಳಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ಪೋಸ್ಟರ್‌ಗಳು ರಾರಾಜಿಸುತ್ತಿದ್ದು ಇದಕ್ಕೆ ವಿರುದ್ಧವಾಗಿ ಬಿಜೆಪಿಯು ರಾಜ್ಯದ ತನ್ನ ಕಚೇರಿ ಹೊರಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ‘ದೇವದಾಸ್’ ಪಾತ್ರಕ್ಕೆ ಹೋಲಿಕೆ ಮಾಡಿ ಪೋಸ್ಟರ್‌ವೊಂದನ್ನು ಹಾಕಿದೆ ಎಂದು ಶುಕ್ರವಾರ (ಜೂನ್‌ 23) ವರದಿಯಾಗಿದೆ.

ನಾನಾ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಟ್ನಾದಲ್ಲಿ ಈ ಪೋಸ್ಟರ್ ಗಳನ್ನು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಬಿಜೆಪಿ ಪೋಸ್ಟರ್‌ ಮೂಲಕ ರಾಹುಲ್‌ ಅವರನ್ನು ಟೀಕಿಸಿದೆ.

ಪೋಸ್ಟರ್‌ನಲ್ಲಿ ರಾಹುಲ್‌ ಗಾಂಧಿ ಅವರನ್ನು ದೇವದಾಸ್‌ ಪಾತ್ರಕ್ಕೆ ಹೋಲಿಕೆ ಮಾಡಿ ಬಿಜೆಪಿ ಟೀಕಿಸಿದೆ. ಪೋಸ್ಟರ್ ಮೇಲ್ಭಾಗದಲ್ಲಿ ಶಾರೂಖ್ ಖಾನ್ ಚಿತ್ರ ಇರಿಸಲಾಗಿದ್ದು, ಕೆಳಭಾಗದಲ್ಲಿ ರಾಹುಲ್ ಅವರ ಚಿತ್ರ ಇದೆ. ರೀಲ್ ಲೈಫ್ ದೇವದಾಸ್ ಶಾರೂಖ್ ಖಾನ್, ರಿಯಲ್ ಲೈಫ್ ದೇವದಾಸ್ ರಾಹುಲ್ ಗಾಂಧಿ ಎಂದು ಬರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳವನ್ನು ತೊರೆಯಿರಿ ಎಂದು ಹೇಳಿದರು, ಕೇಜ್ರಿವಾಲ್ ದೆಹಲಿ ಹಾಗೂ ಪಂಜಾಬ್ ಬಿಡಿ ಎಂದು ಹೇಳಿದರು, ಲಾಲು, ನಿತೀಶ್ ಬಿಹಾರ, ಅಖಿಲೇಶ್ ಉತ್ತರ ಪ್ರದೇಶ, ಸ್ಟಾಲಿನ್ ತಮಿಳುನಾಡು ಬಿಡಿ ಎಂದರು. ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಹಾಗೂ ರಾಜಕೀಯ ಎರಡನ್ನೂ ಬಿಡಿ ಎಂದು ಹೇಳುವ ಸಮಯ ಸನ್ನಿಹಿತವಾಗಿದೆ” ಎಂದು ಬರೆಯುವ ಮೂಲಕ ಬಿಜೆಪಿ ರಾಹುಲ್‌ ಅವರನ್ನು ಕುಟುಕಿದೆ.

ರಾಹುಲ್‌ ಗಾಂಧಿ ಕುರಿತ ಬಿಜೆಪಿ ಪೋಸ್ಟರ್‌ ಅನ್ನು ಆರ್‌ಜೆಡಿ ಟೀಕಿಸಿದೆ. ಆರ್‌ಜೆಡಿ ಕಚೇರಿಯ ಹೊರಗೆ ವಿಷ್ಣುವಿನ ಪೋಸ್ಟರ್ ಹಾಕಲಾಗಿದೆ. ವಿಷ್ಣು ದೇವರ ಚಿತ್ರದ ಸುತ್ತ 18 ನಾಯಕರ ಚಿತ್ರವನ್ನು ಇರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶ | ಬದಲಾದ ಬಿಜೆಪಿ ತಂತ್ರಗಾರಿಕೆ; ಜಗನ್‌ ಜೊತೆ ಕುಸ್ತಿ, ಚಂದ್ರಬಾಬು ಜೊತೆ ದೋಸ್ತಿ

ಆರ್‌ಜೆಡಿ ಪೋಸ್ಟರ್‌ನಲ್ಲಿ ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್, ಫಾರೂಕ್ ಅಬ್ದುಲ್ಲಾ, ಮಲ್ಲಿಕಾರ್ಜುನ ಖರ್ಗೆ, ದೀಪಾಂಕರ್ ಭಟ್ಟಾಚಾರ್ಯ, ಸೀತಾರಾಮ್ ಯೆಚೂರಿ, ಶರದ್ ಪವಾರ್ ಅವರ ಜೊತೆ ವಿಷ್ಣು ದೇವರ ಚಿತ್ರ ಹಾಕಲಾಗಿದೆ.

ಇನ್ನೊಂದು ಕಡೆ ವಿಷ್ಣು ದೇವರ ಪಕ್ಕದಲ್ಲಿ ರಾಹುಲ್ ಗಾಂಧಿ, ತೇಜಸ್ವಿ ಯಾದವ್, ಮಮತಾ ಬ್ಯಾನರ್ಜಿ, ಸ್ಟಾಲಿನ್, ಹೇಮಂತ್ ಸೊರೆನ್, ಉದ್ಧವ್ ಠಾಕ್ರೆ ಅವರ ಚಿತ್ರಗಳನ್ನು ಹಾಕಲಾಗಿದೆ.

3fc71c934f523957b32c0dd3d0e48cbcbd9cdd59923741ff837bb405a2b7ba0f?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...