ರಾಜಸ್ಥಾನ | ನಾಪತ್ತೆಯಾದ ವಧುವಿಗಾಗಿ ಮಂಟಪದಲ್ಲೇ 13 ದಿನ ಕಾದು ವಿವಾಹವಾದ ವರ

Date:

  • ರಾಜಸ್ಥಾನ ಗ್ರಾಮದಲ್ಲಿ ಮೇ 3ರಂದು ನಿಶ್ಚಯವಾಗಿದ್ದ ವಿವಾಹ
  • ಮೇ 15ರಂದು ವಧು ದೊರಕಿದ ನಂತರ ಆಕೆಯೊಂದಿಗೆ ವಿವಾಹ

ರಾಜಸ್ಥಾನ ಗ್ರಾಮವೊಂದರಲ್ಲಿ ವಿವಾಹದ ದಿನದ ಶಾಸ್ತ್ರಗಳು ಆರಂಭವಾದ ನಂತರ ವಧು ತನ್ನ ಪ್ರಿಯಕರನೊಂದಿಗೆ ಪರಾರಿಯಾದ ಮೇಲೆ ವರ ವಧುವಿಗಾಗಿ 13 ದಿನಗಳ ಕಾಲ ಮಂಟಪದಲ್ಲೇ ಕಾದಿದ್ದಾನೆ.

13 ದಿನಗಳ ನಂತರ ಕೊನೆಗೂ ಮಂಟಪಕ್ಕೆ ಆಗಮಿಸಿದ ವಧುವಿನೊಂದಿಗೆ ವಿವಾಹ ನೆರವೇರಿದೆ. ಇಂತಹ ವಿಚಿತ್ರ ಮದುವೆ ಇದೀಗ ರಾಜಸ್ಥಾನ ಸೇರಿದಂತೆ ದೇಶವಿಡೀ ಸುದ್ದಿಯಾಗಿದೆ.

ರಾಜ್ಯದ ಸೈನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೇ 3ರಂದು ವಿವಾಹ ನಿಶ್ಚಯವಾಗಿತ್ತು. ಆದರೆ ವಧು ಸೃಷ್ಟಿಸಿದ ಗೊಂದಲದಿಂದ ವಿವಾಹ ಮೇ 15ಕ್ಕೆ ನೆರವೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಿದ್ದೇನು?

ಮೇ 3ರಂದು ವಿವಾಹ ನೆರವೇರಿಸಲು ನಿಶ್ಚಯಿಸಲಾಗಿದ್ದು, ವಧು, ವರ ಹಾಗೂ ಅವರ ಕುಟುಂಬದವರು ಮದುವೆ ಮಂಟಪಕ್ಕೆ ತಲುಪಿದ್ದರು.

ಮದುವೆ ಶಾಸ್ತ್ರಗಳು ನಡೆಯುತ್ತಿದ್ದಂತೆ ವಧು ಹೊಟ್ಟೆ ನೋವು, ವಾಕರಿಕೆ ಬರುತ್ತಿರುವುದಾಗಿ ಹೇಳಿ ತೆರಳಿದಾಕೆ, ಎಷ್ಟು ಸಮಯವಾದರೂ ಹಿಂತಿರುಗಿ ಬರಲಿಲ್ಲ. ಅನುಮಾನದಿಂದ ವಧುವಿನ ಪೋಷಕರು ಮಂಟಪ ಹುಡುಕಿದರು.

ಸ್ವಲ್ಪ ಸಮಯದ ಬಳಿ ಆಕೆ ತನ್ನ ಪ್ರಿಯಕರನೊಂದಿಗೆ ಮಂಟಪ ಬಿಟ್ಟು ತೆರಳಿರುವುದಾಗಿ ತಿಳಿದು ಬಂದಿದೆ. ಆದರೆ ವರ ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು 13 ದಿನಗಳವರೆಗೆ ಮದುವೆ ಮಂಟಪದಲ್ಲೇ ಕುಳಿತಿದ್ದ.

ಈ ಸುದ್ದಿ ಓದಿದ್ದೀರಾ? ಸಂಸತ್ ಭವನ ಉದ್ಘಾಟನೆ ಪಟ್ಟಾಭಿಷೇಕ ಅಲ್ಲ; ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಟೀಕೆ

ವಧುವಿನ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ನಡೆಸಿದ್ದರು. ರಾಜಸ್ಥಾನ ಪೊಲೀಸರು ಮೇ 15ರಂದು ವಧುವನ್ನು ಪತ್ತೆಹಚ್ಚಿದ್ದಾರೆ. ನಂತರ ಮಗಳ ಮನಸ್ಸು ಒಲಿಸುವಲ್ಲಿ ಆಕೆಯ ಪೋಷಕರು ಯಶಸ್ವಿಯಾದರು. ಮಂಟಪದಲ್ಲೇ ಕಾದು ಕುಳಿತಿದ್ದ ವರನೊಂದಿಗೆ ಎಲ್ಲ ವಿಧಿವಿಧಾನಗಳೊಂದಿಗೆ ವಿವಾಹ ನೆರವೇರಿಸಲಾಯಿತು.

ವಧು ಹಿಂತಿರುಗಿ ಬಂದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ವಿವಾಹದ ನಂತರ ವಧು-ವರ ಸಂತಸವಾಗಿದ್ದಾರೆ ಎಂದು ಹೇಳಲಾಗಿದೆ. ಮಂಟಪದಲ್ಲಿದ್ದ ವಧು ಇಷ್ಟು ದಿನಗಳ ಕಾಲ ಎಲ್ಲಿ ಹೋಗಿದ್ದಳು ಎಂದು ಚರ್ಚೆ ಆರಂಭವಾಗಿತ್ತು.

ಬಳಿಕ ವಧು ಮತ್ತು ವರನ ಮನೆಯವರು ಮಾತುಕತೆ ನಡೆಸಿ ವಿವಾಹಕ್ಕೆ ಅನುಮತಿ ನೀಡಿದರು. ಬಳಿಕ ವಿವಾಹ ನೆರವೇರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...