ಉತ್ತರ ಪ್ರದೇಶ | ಕಾಲೇಜಿನಲ್ಲಿ ಟೋಪಿ ಧರಿಸಿದ್ದಕ್ಕಾಗಿ ಮುಸ್ಲಿಂ ಯುವಕನಿಗೆ ಥಳಿತ

Date:

ಟೋಪಿ ಧರಿಸಿದ್ದ ಮುಸ್ಲಿಂ ಸಮುದಾಯದ ಯುವಕನೊಬ್ಬನಿಗೆ ಇತರ ಸಮುದಾಯದ ವಿದ್ಯಾರ್ಥಿಗಳ ಗುಂಪು ಥಳಿಸಿದ ಘಟನೆ ಉತ್ತರ ಪ್ರದೇಶ ಮೀರತ್‌ನ ಎನ್ಎಎಸ್ ಕಾಲೇಜಿನ ಆವರಣದಲ್ಲಿ ಸೆ.26ರಂದು ನಡೆದಿದೆ.

ಎನ್ಎಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಹೋದರಿಯ ಶುಲ್ಕ ಪಾವತಿಸಲು ಆಗಮಿಸಿದ್ದ ಸಾಹಿಲ್‌ ಎಂಬಾತನಿಗೆ ಕಾಲೇಜಿನ ಆವರಣದಲ್ಲಿ ಓಡಾಡುತ್ತಿದ್ದ ಇತರೆ ಸಮುದಾಯದ ಒಂದು ಗುಂಪು ವಿದ್ಯಾರ್ಥಿಗಳು ಟೋಪಿ ಧರಿಸಿರುವುದನ್ನು ಆಕ್ಷೇಪಿಸಿ ಅದನ್ನು ತೆಗೆಯುವಂತೆ ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸುತ್ತಿರುವುದನ್ನು ಆಕ್ಷೇಪಿಸಿ ಸಹೋದರನ ಸಹಾಯಕ್ಕೆ ಬಂದ ವಿದ್ಯಾರ್ಥಿನಿಯ ಮೇಲೆ ಕೂಡ ಗುಂಪಿನಲ್ಲಿದ್ದ ವಿದ್ಯಾರ್ಥಿಗಳು ಥಳಿಸಲು ಮುಂದಾಗಿದ್ದಾರೆ. ಕ್ಯಾಂಪಸ್ಸಿನಲ್ಲಿ ಓಡಾಡುತ್ತಿದ್ದ ಇತರ ವಿದ್ಯಾರ್ಥಿಗಳು ಹೆಚ್ಚಿನ ಅನಾಹುತವಾಗದಂತೆ ಗಲಾಟೆಯನ್ನು ತಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಸಂಪೂರ್ಣ ದೃಶ್ಯ  ಕಾಲೇಜಿನಲ್ಲಿ ಅಳವಡಿಸಿರುವ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆ ನಡೆಸಿರುವ ಬಗ್ಗೆ ಸಾಹಿಲ್ ಪೊಲೀಸರಿಗೆ ದೂರು ನೀಡಿದ್ದು, ಸ್ಥಳೀಯ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 2023 ರಲ್ಲಿ 255 ಇಸ್ಲಾಂ ವಿರೋಧಿ ದ್ವೇಷ ಭಾಷಣ: ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಶೇ.80ಕ್ಕೂ ಹೆಚ್ಚು

ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೋಹಿತ್ ದಾಗರ್, ವಿಶಾಲ್ ದಾಗರ್, ಅತುಲ್ ಠಾಕೂರ್, ಸಾಗರ್ ಮತ್ತು 10 ಅಪರಿಚಿತ ಯುವಕರ ವಿರುದ್ಧ ಸಾಹಿಲ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ವಿದ್ಯಾರ್ಥಿಗಳನ್ನು ಬಂಧಿಸಲಾಗುವುದು ಎಂದು ಠಾಣಾಧಿಕಾರಿ ಪ್ರಭಾರಿ ಸಮರ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎನ್ಎಎಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಮನೋಜ್ ಅಗರ್ವಾಲ್ ಮುಸ್ಲಿಂ ಸಮುದಾಯದ ಯುವಕನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗುವುದು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...