ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ

Date:

ಚೆನ್ನೈ ಚಂಡಮಾರುತದಲ್ಲಿ ನೀರು, ವಿದ್ಯುತ್ ಇಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟ ಅಮೀರ್‌ ಖಾನ್‌ ಅವರನ್ನು ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ತಮ್ಮ ತಾಯಿಯ ಚಿಕಿತ್ಸೆಯ ಸಲುವಾಗಿ ಬಾಲಿವುಡ್‌ ನಟ ಅಮೀರ್‌ ಖಾನ್ ಕೆಲ ತಿಂಗಳ ಹಿಂದೆ ಚೆನ್ನೈ ನಗರದಲ್ಲಿ ಬಂದು ನೆಲಸಿದ್ದರು.

ಮಿಚಾಂಗ್ ಚಂಡಮಾರುತದಿಂದ ನೀರು ಎಲ್ಲಡೆ ನುಗ್ಗಿದ ಕಾರಣ ಬಾಲಿವುಡ್ ನಟ ಅಮೀರ್‌ ಖಾನ್ ಅವರು ಚೆನ್ನೈನ ಕರಪಾಕ್ಕಂ ಪ್ರದೇಶದಲ್ಲಿ ತಮಿಳು ಸಿನಿಮಾ ನಟರಾದ ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ಅವರ ಮನೆಯಲ್ಲಿ ಉಳಿದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸ ರೊಟ್ಟಿಯನು ಹೆಂಚಿಗೆ ಹಾಕಿದ ಮಿಜೋ ಮತದಾರರು

ಕಳೆದ 24 ಅವರಿಗೆ ವಿದ್ಯುತ್, ನೀರು, ವೈಫೈ, ಫೋನ್‌ ಸಂಪರ್ಕ ಯಾವುದು ಸಿಕ್ಕಿರದೆ ತುಂಬ ತೊಂದರೆಯಲ್ಲಿದ್ದರು.

ಈ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಅಮೀರ್‌ ಖಾನ್, ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ಸೇರಿದಂತೆ ತೊಂದರೆಯಲ್ಲಿದ್ದ ಸ್ಥಳೀಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿದ್ದಾರೆ.

“ನಮಗೆ ಸಹಾಯ ಮಾಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದಗಳು. ಕರಪಾಕ್ಕಂನಲ್ಲಿ ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿವೆ. ಈಗಾಗಲೇ 3 ಬೋಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಕಷ್ಟದ ಸಮಯದಲ್ಲಿ ತಮಿಳುನಾಡು ಸರ್ಕಾರ ಉತ್ತಮ ಕೆಲಸ ಮಾಡಿದೆ. ನಿರಂತರ ಕೆಲಸ ಮಾಡುತ್ತಿರುವ ಎಲ್ಲ ಆಡಳಿತ ಜನರಿಗೆ ಧನ್ಯವಾದಗಳು” ಎಂದು ನಟ ವಿಷ್ಣು ವಿಶಾಲ್ ಟ್ವಿಟರ್‌ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಚೆನ್ನೈನಲ್ಲಿ 8 ಸಾವು

ಭಾನುವಾರ (ಡಿ.3) ರಾತ್ರಿ ಚಂಡಮಾರುತ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಿಗೆ ಮಿಚಾಂಗ್ ಅಬ್ಬರಿಸಿದ ಕಾರಣ ಮಹಾನಗರದಾದ್ಯಂತ ಸಾವಿರಾರು ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರ ಆಸ್ತಿ ನಾಶಪಡಿಸಿದೆ. ವಿದ್ಯುತ್ ಸ್ಪರ್ಶ, ಮರ ಬೀಳುವಿಕೆ ಸೇರಿದಂತೆ ವಿವಿಧ ಕಾರಣಗಳಿಂದ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಸೋಮವಾರ ರಾತ್ರಿ ಮಿಚಾಂಗ್ ಚಂಡಮಾರುತವು ಚೆನ್ನೈ ಕರಾವಳಿಯನ್ನು ದಾಟಿದ ನಂತರವೂ ಅರುಂಬಕ್ಕಂ, ಎಂಎಂಡಿಎ, ಚೂಲೈಮೇಡು, ಅಮಿಂಜಿಕಾರಿ ಸುತ್ತಮುತ್ತಲಿನ ಪ್ರದೇಶಗಳ ವಸತಿ ಪ್ರದೇಶಗಳು ಇನ್ನೂ ಜಲಾವೃತವಾಗಿವೆ. ಕಳೆದ 2 ದಿನಗಳಲ್ಲಿ ನಗರದಲ್ಲಿ 45 ಸೆಂ.ಮೀ ಮಳೆಯಾಗಿದೆ.

ಚೆನ್ನೈನಲ್ಲಿ ಚಂಡಮಾರುತದ ಪರಿಣಾಮದಿಂದ ವಿಪರೀತ ಮಳೆ ಸುರಿದು, ರಸ್ತೆಗಳು ನದಿಯಂತಾಗಿವೆ. ವಾಹನಗಳು ಕೊಚ್ಚಿಕೊಂಡು ಹೋಗುವ ವಿಡಿಯೋಗಳು ವೈರಲ್ ಆಗಿವೆ. ಇದರಿಂದಾಗಿ ಮಳೆ ಅಪಾಯವಿರುವ ಪ್ರದೇಶಗಳಲ್ಲಿ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿ ಸುಧಾರಿಸುವವರೆಗೂ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಮಾಡುವಂತೆ ಸಂಸ್ಥೆಗಳು ಸೂಚಿಸಿದೆ.

ವಿದ್ಯುತ್ ಪೂರೈಕೆ ಮತ್ತು ಇಂಟರ್ನೆಟ್ ಸಂಪರ್ಕದ ವ್ಯತ್ಯಯದಿಂದ ದೈನಂದಿನ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ತೊಡಕಾಗಿದೆ. ಭಾರಿ ಗಾಳಿಯಿಂದಾಗಿ ಮರಗಳು, ಗೋಡೆಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ ನೀರು ನುಗ್ಗಿದ್ದರಿಂದ ಆರೋಗ್ಯ ಸೇವೆಗಳಿಗೆ ತಾತ್ಕಾಲಿಕ ತಡೆ ಬಿದ್ದಿದೆ. ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣಗಳಿಗೂ ನೀರು ನುಗ್ಗಿ ಜಲಾವೃತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...