ರಾಜ್ಯಸಭೆ ಅಧ್ಯಕ್ಷರಾದ ಜಗದೀಪ್ ಧನಕರ್ ಅವರು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನಿರಾಕರಿಸಿದ್ದಾರೆ.
ದೆಹಲಿ ಮಾಜಿ ಸಚಿವರು ಆಗಿರುವ ಸಂಜಯ್ ಸಿಂಗ್ ದೆಹಲಿ ಅಬಕಾರಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನವಾಗಿ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ.
ಕಳೆದ ಜನವರಿಯಲ್ಲಿ ರಾಜ್ಯಸಭೆಗೆ ಮತ್ತೊಂದು ಅವಧಿಗೆ ಮರು ನಾಮಕರಣವಾಗಿದ್ದ ಸಂಜಯ್ ಅವರಿಗೆ ದೆಹಲಿ ಹೈಕೋರ್ಟ್ ಫೆ.5ರೊಳಗಾಗಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸಂಜಯ್ ಅವರಿಗೆ ಸೂಚನೆ ನೀಡಿತ್ತು.
ಆದರೆ ಪ್ರಕರಣವು ಪ್ರಸ್ತುತ ಹಕ್ಕು ಭಾದ್ಯತಾ ಸಮಿತಿಯಲ್ಲಿರುವ ಕಾರಣ ಪ್ರಮಾಣ ವಚನ ಸ್ವೀಕರಿಸದಂತೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಸೂಚನೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?
ದೆಹಲಿ ಹೈಕೋರ್ಟ್ನ ವಿಶೇಷ ನ್ಯಾಯಾಧೀಶರಾದ ಎಂ ಕೆ ನಾಗಪಾಲ್ ಅವರು ಸಂಸತ್ತಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಯೊಳಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ಆದೇಶ ನೀಡಿದ್ದರು.
ಸಂಜಯ್ ಸಿಂಗ್ ಅವರಲ್ಲದೆ ಎಎಪಿಯಿಂದ ಸ್ವಾತಿ ಮಲಿವಾಲ್ ಹಾಗೂ ನರೈನ್ ದಾಸ್ ಗುಪ್ತ ಅವರು ರಾಜ್ಯಸಭೆಗೆ ನಾಮ ನಿರ್ದೇಶಿತರಾಗಿದ್ದರು.
ಸಂಜಯ್ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಡಿ ಕಳೆದ ವರ್ಷ ಜಾರಿ ನಿರ್ದೇಶನಾಲಯ ಬಂಧಿಸಿತ್ತು.





