ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

Date:

  • ಒಂದು ದಿನದ ಹಿಂದಷ್ಟೆ ಸತ್ಯೇಂದ್ರ ಜೈನ್‌ ಜೈಲಿನ ಸ್ಥಾನದ ಕೋಣೆಯಲ್ಲಿ ಕುಸಿದು ಬಿದ್ದಿದ್ದರು
  • ಕಳೆದ ವರ್ಷ ಮೇನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಇಡಿ

ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ವೈದ್ಯಕೀಯ ಕಾರಣಗಳಿಂದಾಗಿ ಸುಪ್ರೀಂ ಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.

ಒಂದು ದಿನದ ಹಿಂದಷ್ಟೆ ಸತ್ಯೇಂದ್ರ ಜೈನ್‌ ಅವರು ತಿಹಾರಿ ಜೈಲಿನ ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಅಸ್ವಸ್ಥಗೊಂಡ ಕಾರಣ ನವದೆಹಲಿಯ ಲೋಕನಾಯಕ ಜಯಪ್ರಕಾಶ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಜೈನ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸೋಮವಾರ, ಜೈಲಿನ ಸ್ನಾನದ ಕೋಣೆಯಲ್ಲಿ ಬಿದ್ದು ಬೆನ್ನುಮೂಳೆ ಗಾಯವಾಗಿರುವ ಕಾರಣ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಪರೀಕ್ಷಿಸಲಾಯಿತು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ₹20,000 ಕೋಟಿಯ ನೂತನ ಸಂಸತ್ ಭವನ; ಭಾರತದಲ್ಲಿ ಚರಿತ್ರೆ ಸೃಷ್ಟಿಯಾಗುತ್ತಿದೆ!

ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಎಎಪಿ ನಾಯಕನನ್ನು ಬಂಧಿಸಿದಾಗಿನಿಂದ ತಿಹಾರ್ ಜೈಲಿನಲ್ಲಿದ್ದಾರೆ.

ಸತ್ಯೇಂದ್ರ ಜೈನ್ ಅವರು ಶೆಲ್ ಕಂಪನಿಗಳ ಮೂಲಕ ಹಣ ಸಂಪಾದಿಸಿದ್ದಾರೆ ಮತ್ತು ಅಕ್ರಮ ಹಣದಿಂದ ಭೂಮಿ ಖರೀದಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಆದರೆ ದೆಹಲಿಯ ಮಾಜಿ ಸಚಿವರು ತನಿಖಾ ಸಂಸ್ಥೆಯ ಆರೋಪಗಳನ್ನು ನಿರಾಕರಿಸಿದ್ದು, ಇದನ್ನು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದ್ದಾರೆ.

ಸತ್ಯೇಂದ್ರ ಜೈನ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಸಂಪುಟದಲ್ಲಿ ಆರೋಗ್ಯ, ಗೃಹ ಮತ್ತು ನಗರಾಭಿವೃದ್ಧಿ ಸೇರಿದಂತೆ ಹಲವಾರು ಖಾತೆಗಳನ್ನು ಹೊಂದಿದ್ದರು. ಜೈಲಿನಲ್ಲಿರುವಾಗಲೇ ಈ ವರ್ಷದ ಜನವರಿಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...