ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ ಸಮನ್ಸ್‌ | ವಿಚಾರಣೆಗೆ ಹಾಜರಾಗುವುದಿಲ್ಲ ಎಂದ ಟಿಎಂಸಿ ನಾಯಕ

Date:

  • ಪ್ರಾಥಮಿಕ ಶಾಲಾ ನೇಮಕಾತಿ ಹಗರಣದಲ್ಲಿ ಅಭಿಷೇಕ್‌ ಬ್ಯಾನರ್ಜಿ ಪ್ರಶ್ನಿಸಿದ್ದ ಸಿಬಿಐ
  • ಪಂಚಾಯತ್‌ ಚುನಾವಣೆಯ ನಂತರ ವಿಚಾರಣೆಗೆ ಹಾಜರು ಎಂದ ಅಭಿಷೇಕ್

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ನೀಡಿದ್ದು ಜೂನ್‌ 13 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎಂದು ಶುಕ್ರವಾರ (ಜೂನ್‌ 9) ಮಾಧ್ಯಮಗಳು ವರದಿ ಮಾಡಿವೆ.

ಪಶ್ಚಿಮ ಬಂಗಾಳದ ಪ್ರಾಥಮಿಕ ಶಾಲೆಗಳ ಸಿಬ್ಬಂದಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಇ.ಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಭಿಷೇಕ್‌ ಅವರನ್ನು ಪ್ರಶ್ನಿಸಲು ಇ.ಡಿ ಮುಂದಾಗಿದೆ.

ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಅವರನ್ನು ಕಲ್ಲಿದ್ದಲು ಕಳವು ಪ್ರಕರಣದಲ್ಲಿ ಇ.ಡಿ ಗುರುವಾರ 4 ತಾಸು ವಿಚಾರಣೆಗೆ ಒಳಪಡಿಸಿತ್ತು. ಇದರ ಬೆನ್ನಲ್ಲೇ ಅಭಿಷೇಕ್ ಅವರಿಗೆ ಇ.ಡಿ ಗುರುವಾರ ಸಮನ್ಸ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಭಿಷೇಕ್ ಅವರನ್ನು ಜೂನ್‌ 13 ರಂದು ಬೆಳಿಗ್ಗೆ 11 ಗಂಟೆಗೆ ಇ.ಡಿ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ” ಎಂದು ಇ.ಡಿ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದರು.

ಕೋಲ್ಕತ್ತದ ದಕ್ಷಿಣ ಭಾಗದಲ್ಲಿರುವ ಹರೀಶ್‌ ಮುಖರ್ಜಿ ರಸ್ತೆಯಲ್ಲಿ ಇರುವ ಅಭಿಷೇಕ್‌ ಬ್ಯಾನರ್ಜಿ ಇರುವ ಶಾಂತಿನಿಕೇತನ ನಿವಾಸಕ್ಕೆ ತೆರಳಿ ಸಮನ್ಸ್‌ ನೀಡಲಾಯಿತು ಎಂದು ಇ.ಡಿ ಅಧಿಕಾರಿ ಹೇಳಿದರು.

‘ವಿಚಾರಣೆಗೆ ಹಾಜರಾಗುವುದಿಲ್ಲ’

ರಾಜ್ಯದಲ್ಲಿ ಪಂಚಾಯತ್‌ ಚುನಾವಣೆ ಹಿನ್ನೆಲೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಪರ ಬೃಹತ್‌ ಪ್ರಚಾರ ಸಭೆಯಲ್ಲಿ ಭಾಗವಾಗಿರುವ ಕಾರಣ ಜೂನ್‌ 13ರ ಇ.ಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಅಭಿಷೇಕ್‌ ಶುಕ್ರವಾರ (ಜೂನ್‌ 9) ಹೇಳಿದ್ದಾರೆ.

ಪಂಚಾಯತಿ ಚುನಾವಣೆಯ ನಂತರ ಇ.ಡಿ ವಿಚಾರಣೆಗೆ ಹಾಜರಾಗುವುದಾಗಿ ಅಭಿಷೇಕ್‌ ಸುದ್ದಿಗಾರರಿಗೆ ತಿಳಿಸಿದರು.

ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆಯು ಜುಲೈ 8ಕ್ಕೆ ನಿಗದಿಯಾಗಿದೆ.

ಅಭಿಷೇಕ್ ಬ್ಯಾನರ್ಜಿ ಈ ಕುರಿತು ಹೇಳಿಕೆ ನೀಡಿದ್ದಾರೆ. “ಜೂನ್ 13 ರಂದು ಇ.ಡಿ ವಿಚಾರಣೆಗೆ ನಾನು ಹಾಜರಾಗುವುದಿಲ್ಲ. ನಿರ್ಣಾಯಕ ಪಂಚಾಯತ್ ಚುನಾವಣೆ ಜುಲೈ 9 ರ ಹೊತ್ತಿಗೆ ಚುನಾವಣೆ ಕೊನೆಗೊಳ್ಳಲಿದೆ. ಬಳಿಕ ನಾನು ಯಾವ ಸಮಯವಾದರೂ ವಿಚಾರಣೆ ಎದುರಿಸಲು ಸಿದ್ಧ” ಎಂದು ಹೇಳಿದ್ದಾರೆ.

ಅಭಿಷೇಕ್‌ ಅವರು ಇ.ಡಿ ತಮಗೆ ಸಮನ್ಸ್‌ ನೀಡಿರುವುದು ಬಿಜೆಪಿ ಉದ್ದೇಶಪೂರ್ವಕ ಕೃತ್ಯ ಎಂದು ಕರೆದಿದ್ದಾರೆ. ತಮ್ಮನ್ನು ಪಂಚಾಯತ್‌ ಚುನಾವಣೆಯ ಪ್ರಚಾರದಿಂದ ಹೊರಗಿಡಲು ಬಿಜೆಪಿ ಈ ತಂತ್ರ ರೂಪಿಸಿದೆ ಎಂದು ಅಭಿಷೇಕ್‌ ಆರೋಪಿಸಿದರು.

ಈ ಸುದ್ದಿ ಒದಿದ್ದೀರಾ? ಒಡಿಶಾ | ದುರ್ಗ್-ಪುರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ; ತಪ್ಪಿದ ಪ್ರಾಣಹಾನಿ

ಪ್ರಾಥಮಿಕ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಮೇ 20 ರಂದು ತಮ್ಮ ಕೋಲ್ಕತ್ತ ಕಚೇರಿಯಲ್ಲಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಸುಮಾರು 9 ತಾಸುಗಳ ಕಾಲ ವಿಚಾರಣೆ ನಡೆಸಿದ್ದರು.

ಕಳೆದ ವರ್ಷ ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ಮತ್ತು ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿಯಿಂದ 2014 ಮತ್ತು 2021ರ ನಡುವೆ ಬೋಧಕೇತರ ಸಿಬ್ಬಂದಿ (ಗುಂಪು ಸಿ ಮತ್ತು ಡಿ) ಮತ್ತು ಬೋಧಕ ಸಿಬ್ಬಂದಿಯ ನೇಮಕಾತಿ ಪರೀಕ್ಷೆ ನಡೆದಿತ್ತು.

ಪರೀಕ್ಷೆಯಲ್ಲಿ ಅನುತ್ತೀರ್ಣದ ನಂತರ ಉದ್ಯೋಗ ಪಡೆಯಲು ಅಭ್ಯರ್ಥಿಗಳಿಂದ ₹5 ಲಕ್ಷದಿಂದ ₹15 ಲಕ್ಷದವರೆಗೆ ಲಂಡ ಪಡೆಯಲಾಗಿದೆ ಎಂದು ಆರೋಪಿಸಲಾಗಿತ್ತು. ಇದನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...