ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋ‍ಷಿ

Date:

ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಜ್ಞಾನಶೇಖರನ್ ದೋಷಿ ಎಂದು ಚೆನ್ನೈ ಮಹಿಳಾ ನ್ಯಾಯಾಲಯ ತೀರ್ಪು ನೀಡಿದೆ. ಈ ಘಟನೆ ನಡೆದ ಕೇವಲ ಐದು ತಿಂಗಳಲ್ಲಿ ತೀರ್ಪು ಹೊರಬಿದ್ದಿದೆ.

ಚೆನ್ನೈ ಮಹಿಳಾ ನ್ಯಾಯಾಲಯದ ನ್ಯಾಯಾಧೀಶೆ ರಾಜಲಕ್ಷ್ಮಿ ಬುಧವಾರ(ಮೇ 28) ಈ ತೀರ್ಪು ನೀಡಿದ್ದಾರೆ. ಜ್ಞಾನಶೇಖರನ್ ವಿರುದ್ಧ ದಾಖಲಾಗಿರುವ ಎಲ್ಲಾ 11 ಆರೋಪಗಳಲ್ಲಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ. ಜೂನ್ 2ರಂದು ಶಿಕ್ಷೆ ಪ್ರಕಟಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ರ ಡಿಸೆಂಬರ್ 23ರ ರಾತ್ರಿ ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ತನ್ನ ಗೆಳೆಯನೊಂದಿಗೆ ಇದ್ದಾಗ ಜ್ಞಾನಶೇಖರನ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜ್ಞಾನಶೇಖರನ್ ವಿದ್ಯಾರ್ಥಿನಿಯನ್ನು 40 ನಿಮಿಷಗಳ ಕಾಲ ತನ್ನ ವಶದಲ್ಲಿಟ್ಟುಕೊಂಡು ಆಕೆ ಮತ್ತು ಆಕೆಯ ಗೆಳೆಯನ ವಿಡಿಯೋ ಮಾಡಿ ಆ ದೃಶ್ಯಗಳನ್ನು ಬಳಸಿಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ.

ಲೈಂಗಿಕ ಕಿರುಕುಳ ತಡೆ(PoSH) ಸಮಿತಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಅದೇ ದಿನ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಸೆಂಬರ್ 25ರಂದು ಗ್ರೇಟರ್ ಚೆನ್ನೈ ಪೊಲೀಸರು ಜ್ಞಾನಶೇಖರನ್ ಬಂಧನ ಮಾಡಿದ್ದಾರೆ.

ಚೆನ್ನೈನ ಕೊಟ್ಟೂರುಪುರಂನ ಜ್ಞಾನಶೇಖರನ್ ವಿರುದ್ಧ ಈಗಾಗಲೇ ಭಾರತೀಯ ದಂಡ ಸಂಹಿತೆಯ(ಐಪಿಸಿ) ಅಡಿಯಲ್ಲಿ ಏಳು ಪ್ರಕರಣಗಳು ಬಾಕಿ ಉಳಿದಿವೆ. ಈ ಪ್ರಕರಣಕ್ಕೆ ಸಂಬಂಧಿಸಿ ಹೊಸ ಭಾರತೀಯ ನ್ಯಾಯ ಸಂಹಿತೆ(ಬಿಎನ್ಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡು ಸರ್ಕಾರವು ಕಠಿಣ ಗೂಂಡಾ ಕಾಯ್ದೆಯನ್ನು ಸಹ ಹಾಕಿದೆ. ಈ ಗೂಂಡಾ ಕಾಯ್ದೆಯು ಒಂದು ವರ್ಷದವರೆಗೆ ಜಾಮೀನು ಪಡೆಯಲು ಅವಕಾಶ ನೀಡುವುದಿಲ್ಲ.

ಜ್ಞಾನಶೇಖರನ್ ಬಂಧನದ ನಂತರ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಕಾರ್ಯಕರ್ತರೊಂದಿಗಿನ ಚಿತ್ರಗಳು ಹರಿದಾಡಿ ರಾಜಕೀಯ ವಿವಾದ ಎದ್ದಿತ್ತು. ಆರಂಭದಲ್ಲಿ ಆರೋಪಿ ಡಿಎಂಕೆಗೆ ಸೇರಿದವನು ಎಂಬುದನ್ನು ನಿರಾಕರಿಸಿತ್ತು. ಆದರೆ ವಿಪಕ್ಷ ಹಲವು ಚಿತ್ರಗಳನ್ನು ವೈರಲ್‌ಗೊಳಿಸಿತ್ತು. ಇದರಿಂದಾಗಿ ತೀವ್ರ ರಾಜಕೀಯ ಸಂಚಲನ ಉಂಟಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...