ಜಾಮೀನಿನ ಮೇಲೆ ಹೊರಗಿರುವ ಆರೋಪಿಗೆ ವಿದೇಶ ಪ್ರವಾಸಕ್ಕೆ ಅನುಮತಿ ಕೋರುವ ಹಕ್ಕಿಲ್ಲ: ಅಲಹಾಬಾದ್ ಹೈಕೋರ್ಟ್

Date:

ಜಾಮೀನಿನ ಮೇಲೆ ಹೊರಗಿರುವ ಆರೋಪಿಗೆ ಸಂಬಂಧಿಕರ ಮದುವೆಗಾಗಿ ಅಥವಾ ವಿದೇಶ ಪ್ರವಾಸಕ್ಕೆ ಅನುಮತಿ ಕೋರುವ ಹಕ್ಕಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ವಿಚಾರಣಾಧೀನದಲ್ಲಿರುವ ಆರೋಪಿಯೊಬ್ಬರು ಸಂಬಂಧಿಕರ ಮದುವೆಗಾಗಿ ಅಂತಾರಾಷ್ಟ್ರೀಯ ಪ್ರಯಾಣ ಮಾಡಲು ಅಥವಾ ಪ್ರವಾಸಕ್ಕಾಗಿ ಬೇರೆ ದೇಶಕ್ಕೆ ಹೋಗಲು ಅನುಮತಿ ಪಡೆಯಲಾಗದು ಎಂದು ಲಕ್ನೋ ನ್ಯಾಯಾಲಯದ ಪೀಠ ಹೇಳಿದೆ.

ಬರೇಲಿಯ ಶ್ರೀ ರಾಮ ಮೂರ್ತಿ ಸ್ಮಾರಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಲಹೆಗಾರ ಆದಿತ್ಯ ಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಈ ತೀರ್ಪು ನೀಡಿದ್ದಾರೆ. ಮೂರ್ತಿ ಅವರು ತಮ್ಮ ಸಂಬಂಧಿಕರ ಮದುವೆಗಾಗಿ ಅಮೆರಿಕಕ್ಕೆ ಮತ್ತು ನಂತರ ಮೇ 3ರಿಂದ 22ರವರೆಗೆ ಸಂಬಂಧಿತ ಆಚರಣೆಗಾಗಿ ಫ್ರಾನ್ಸ್‌ಗೆ ಪ್ರಯಾಣಿಸಲು ಅನುಮತಿ ಕೋರಿದ್ದರು.

ಇದನ್ನು ಓದಿದ್ದೀರಾ? ಮಹಿಳೆಯ ಸ್ತನಗಳನ್ನು ಹಿಡಿಯುವುದು, ಪೈಜಾಮಾ ಲಾಡಿ ಎಳೆಯುವುದು ಅತ್ಯಾಚಾರ ಯತ್ನವಲ್ಲ: ಅಲಹಾಬಾದ್ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗೆ ವೈದ್ಯಕೀಯ ಚಿಕಿತ್ಸೆ, ಅಗತ್ಯ ಅಧಿಕೃತ ಕರ್ತವ್ಯಗಳಿಗೆ ಹಾಜರಾಗುವುದು ಮುಂತಾದ ತುರ್ತು ಅಗತ್ಯಗಳಿಗಾಗಿ ವಿದೇಶ ಪ್ರವಾಸಕ್ಕೆ ಅನುಮತಿ ನೀಡಬಹುದು. ಆದರೆ ಸಂಬಂಧಿಕರ ಮದುವೆಗೆ ಹಾಜರಾಗುವುದು ತುರ್ತು ಅಗತ್ಯವಿಲ್ಲ” ಎಂದು ಪೀಠ ಸ್ಪಷ್ಟಪಡಿಸಿದೆ.

ಅನಗತ್ಯ ಉದ್ದೇಶಗಳಿಗಾಗಿ ತನಗೆ ಈ ಹಿಂದೆ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಾಲಯವು ಪರಿಗಣಿಸಿದೆ. “ವಿಚಾರಣಾ ನ್ಯಾಯಾಲಯವು ಅರ್ಜಿದಾರರಿಗೆ ಹಲವು ಸಂದರ್ಭಗಳಲ್ಲಿ ಅನಗತ್ಯ ಕಾರಣಗಳಿಗಾಗಿ ವಿದೇಶ ಪ್ರಯಾಣ ಮಾಡಲು ಅನುಮತಿ ನೀಡಿದೆ. ಈ ಬಾರಿಯೂ ಅವರು ಅನಗತ್ಯ ಕಾರಣಕ್ಕೆ ವಿದೇಶ ಪ್ರಯಾಣ ಮಾಡುವ ಹಕ್ಕನ್ನು ಹೊಂದಿಲ್ಲ” ಎಂದು ಹೇಳಿದೆ.

ಮೂರ್ತಿ ಒಂದು ದಶಕಕ್ಕೂ ಹೆಚ್ಚು ಕಾಲ ಸಿಬಿಐ ಪ್ರಕರಣದಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಸಹ ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...