ಆರೋಪಿಗಳ ಖುಲಾಸೆ ನಮಗೆ ಮಾಡಿದ ಕಪಾಳಮೋಕ್ಷ: ಬುಡಕಟ್ಟು ಮಹಿಳೆಯರು

Date:

  • ಬುಡಕಟ್ಟು ಮಹಿಳೆಯರು ಸಂತ್ರಸ್ತರೆಂದು ಪರಿಗಣಿಸಿ ಪರಿಹಾರಕ್ಕೆ ಆದೇಶಿಸಿದ ನ್ಯಾಯಾಲಯ
  • 2007ರಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಗ್ರಾಮದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ

ಆಂಧ್ರ ಪ್ರದೇಶದ 21 ಮಂದಿ ಅತ್ಯಾಚಾರ ಆರೋಪಿ ಪೊಲೀಸರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪು ತಮಗೆ ಮಾಡಿದ ಕಪಾಳಮೋಕ್ಷ ಎಂದು ಸಂತ್ರಸ್ತ 11 ಬುಡಕಟ್ಟು ಮಹಿಳೆಯರು ನೋವು ತೋಡಿಕೊಂಡಿದ್ದಾರೆ.

ಕೋಂಧ್ ಬುಡಕಟ್ಟಿಗೆ ಸೇರಿದ 11 ಮಂದಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗಳಾದ 21 ಮಂದಿ ಪೊಲೀಸರನ್ನು ಆಂಧ್ರ ಪ್ರದೇಶದ ವಿಶಾಖಪಟ್ಟಣದ ವಿಶೇಷ ನ್ಯಾಯಾಲಯ ಗುರುವಾರ (ಏಪ್ರಿಲ್ 7) ಖುಲಾಸೆಗೊಳಿಸಿದೆ.

ಈ ಕುರಿತು ಬುಡಕಟ್ಟು ಮಹಿಳೆಯರು ಪ್ರತಿಕ್ರಿಯೆ ನೀಡಿದ್ದು, ಪ್ರಬಲರನ್ನು ರಕ್ಷಿಸುವ ವ್ಯವಸ್ಥೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಬ್ಬ ಪೊಲೀಸ್‌ ಮತ್ತೊಬ್ಬ ಪೊಲೀಸ್ ವಿರುದ್ಧದ ಅಪರಾಧ ಪ್ರಕರಣವನ್ನು ತನಿಖೆ ಮಾಡುವುದಿಲ್ಲ. ನಮ್ಮ ಪ್ರಕರಣದಲ್ಲಿ ನ್ಯಾಯವು ನಮ್ಮ ತೆಕ್ಕೆಯಿಂದ ಜಾರಿಕೊಂಡಿದೆ. ನಮ್ಮನ್ನು ಸಂತ್ರಸ್ತರು ಎಂದು ನ್ಯಾಯಾಲಯ ಪರಿಗಣಿಸಿದೆ. ಅದಕ್ಕಾಗಿ ನಮಗೆ ಪರಿಹಾರ ನೀಡಿರುವ ಆದೇಶವೊಂದೇ ಪ್ರಕರಣದಲ್ಲಿ ನಮಗೆ ದೊರೆತಿರುವ ಆಶಾಕಿರಣ” ಎಂದು ಸಂತ್ರಸ್ತ ಬುಡಕಟ್ಟು ಮಹಿಳೆಯೊಬ್ಬರು ಹೇಳಿದರು.

“ಅತ್ಯಾಚಾರದ ನಂತರ ನನ್ನ ಗಂಡ ಎರಡು ತಿಂಗಳ ಹಿಂದೆ ನನ್ನನ್ನು ತೊರೆದು ಹೊರಟು ಹೋದ. ಈಗ ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದೇನೆ” ಎಂದು ಮತ್ತೊಬ್ಬ ಬುಡಕಟ್ಟು ಮಹಿಳೆ ಮಾಧ್ಯಮಗಳ ಮುಂದೆ ಕಂಬನಿ ಮಿಡಿದಿದ್ದಾರೆ.

“ನಮ್ಮ ಗಂಡಂದಿರು ಮತ್ತು ಗ್ರಾಮಸ್ಥರು ಹಿಂಸಾತ್ಮಕ ಮತ್ತು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಬಹಳ ದಿನಗಳ ಕಾಲ ನಮ್ಮ ಕುಟುಂಬ ನಮ್ಮಿಂದ ದೂರ ಉಳಿದಿದೆ. ಮಕ್ಕಳನ್ನೂ ನಮ್ಮ ಬಳಿ ಬಿಡುತ್ತಿರಲಿಲ್ಲ” ಎಂದು ಇನ್ನೊಬ್ಬ ಸಂತ್ರಸ್ತ ಬುಡಕಟ್ಟು ಮಹಿಳೆ ಬೇಸರ ವ್ಯಕ್ತಪಡಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯ ವಿಶೇಷ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ. ಅತ್ಯಾಚಾರ ಸಂತ್ರಸ್ತೆಯರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪರಿಹಾರ ನೀಡಬೇಕು ಎಂದೂ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ. ಅವರಲ್ಲಿ ಕೆಲವರು ಈಗಾಗಲೇ ನಿವೃತ್ತರಾಗಿದ್ದಾರೆ, ಇನ್ನು ಕೆಲವರು ನಿಧನರಾಗಿದ್ದಾರೆ ಎಂದು ಮಾನವ ಹಕ್ಕುಗಳ ವೇದಿಕೆಯ (ಎಚ್ಆರ್ಎಫ್) ಆಂಧ್ರ ಪ್ರದೇಶ ರಾಜ್ಯ ಸಮಿತಿಯ ಉಪಾಧ್ಯಕ್ಷ ಎಂ ಶರತ್ ಹೇಳಿದ್ದಾರೆ.

ವಕಪಲ್ಲಿ ಗ್ರಾಮಕ್ಕೆ ಶೋಧ ಕಾರ್ಯಾಚರಣೆಗೆ ತೆರಳಿದ್ದ 21 ಮಂದಿ ಪೊಲೀಸರು ರಸ್ತೆಯಲ್ಲಿ ಸಾಗುತ್ತಿದ್ದ 11 ಮಂದಿ ಬುಡಕಟ್ಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಹೊತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾಗತಿಕವಾಗಿ ಅಮಿತ್‌ ಶಾ ಟ್ವೀಟ್‌ ತಡೆ ಹಿಡಿದ ಟ್ವಿಟರ್ !

ನಿಷ್ಪಕ್ಷಪಾತ ಮತ್ತು ನ್ಯಾಯಯುತವಾದ ತನಿಖೆ ನಡೆಸಲು ಇಬ್ಬರು ಅಧಿಕಾರಿಗಳನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿತ್ತು. ಅಧಿಕಾರಿಗಳು ತನಿಖೆಯಲ್ಲಿ ವಿಫಲರಾದ ಕಾರಣ ಆರೋಪಿಗಳನ್ನು ಪ್ರಾಥಮಿಕವಾಗಿ ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಗ್ರೇಹೌಂಡ್ಸ್ ವಿಶೇಷ ತಂಡದ ಪೊಲೀಸರು 2007ರ ಆಗಸ್ಟ್‌ನಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಗ್ರಾಮವೊಂದರಲ್ಲಿ ಬುಡಕಟ್ಟು ಮಹಿಳೆಯರು ಸಾಗುತ್ತಿದ್ದಾಗ ಅವರ ಮೇಲೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಆರೋಪಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...