ಭಾರತೀಯ ವಿಮಾನಗಳಲ್ಲಿ ‘ಪವರ್ ಬ್ಯಾಂಕ್‌’ ನಿಷೇಧಕ್ಕೆ ಕ್ರಮ? ಕಠಿಣ ನಿಯಮಗಳ ಕುರಿತು ಚರ್ಚೆ

Date:

ಇತ್ತೀಚೆಗೆ, ದೆಹಲಿಯಲ್ಲಿ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿಗೆ ಪ್ರಯಾಣಿಕರೊಬ್ಬರು ಕೊಂಡೊಯ್ಯುತ್ತಿದ್ದ ‘ಪವರ್‌ ಬ್ಯಾಂಕ್‌’ ಕಾರಣವೆಂದು ಹೇಳಲಾಗಿದೆ. ಇದರ ಬೆನ್ನಲ್ಲೇ, ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ದೇಶಾದ್ಯಂತ ವಿಮಾನಗಳಲ್ಲಿ ಪವರ್ ಬ್ಯಾಂಕ್‌ಗಳ ಬಳಕೆಯ ಮೇಲೆ ಸಂಭಾವ್ಯ ನಿಷೇಧ ಅಥವಾ ಕಠಿಣ ನಿಯಮಗಳನ್ನು ರೂಪಿಸಲು ಚರ್ಚಿಸುತ್ತಿದೆ ಎಂದು ವರದಿಯಾಗಿದೆ.

ಭಾನುವಾರ, ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಾಗಲ್ಯಾಂಡ್‌ನ ದಿಮಾಪುರಕ್ಕೆ ಹೊರಟಿದ್ದ ಇಂಡಿಗೋ ವಿಮಾನವು ಹಾರಟ ಆರಂಭಿಸಲು ‘ರನ್‌ವೇ’ನಲ್ಲಿ ಹೋಗುತ್ತಿದ್ದಾಗ, ಪ್ರಯಾಣಿಕರೊಬ್ಬರ ‘ಪವರ್ ಬ್ಯಾಂಕ್’ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ‘ಪವರ್‌ ಬ್ಯಾಂಕ್‌’ನಲ್ಲಿದ್ದ ಲಿಥಿಯಂನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಾಗಿದೆ. ಹೀಗಾಗಿ, ಲಿಥಿಯಂವುಳ್ಳ ಬ್ಯಾಟರಿ ಚಾಲಿತ ಸಾಧನಗಳ ಬಳಕೆ ಮತ್ತು ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗುತ್ತಿದೆ.

ಆದ್ದರಿಂದಲೇ, ಪ್ರಯಾಣಿಕರು ಮತ್ತು ವಿಮಾನಯಾನ ಸಂಸ್ಥೆಗಳು ವಿಮಾನಗಳಲ್ಲಿ ‘ಪವರ್ ಬ್ಯಾಂಕ್‌’ಗಳನ್ನು ಹೇಗೆ ನಿರ್ವಹಿಸುತ್ತಾರೆ ಎಂಬುದರ ಕುರಿತು DGCA ಸಮಗ್ರ ಪರಿಶೀಲನೆ ಪ್ರಾರಂಭಿಸಿದೆ. ಈ ಪರಿಶೀಲನೆಯು ವಿಮಾನದಲ್ಲಿ ‘ಪವರ್‌ ಬ್ಯಾಂಕ್‌’ ಬಳಕೆಯ ಮೇಲೆ ನಿಷೇಧ, ವಿದ್ಯುತ್ ಸಾಧನಗಳ ವಿದ್ಯುತ್ ಸಾಮರ್ಥ್ಯದ ಮೇಲೆ ಕಡ್ಡಾಯ ನಿರ್ಬಂಧಗಳು ಅಥವಾ ಅಪಾಯಗಳನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಸಾಧ್ಯವಾಗದಿದ್ದರೆ ವಿದ್ಯುತ್‌ ಸಾಧನಗಳ ಸಾಗಣೆಯ ಸಂಪೂರ್ಣ ನಿಷೇಧ ಕುರಿತು ಚರ್ಚೆಗಳು ನಡೆಯುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಡಿಸಿಎ ತನ್ನ ಶಿಫಾರಸುಗಳ ಕುರಿತು ನಾಗರಿಕ ವಿಮಾನಯಾನ ಸಚಿವಾಲಯಕ್ಕೂ (MoCA) ಮಾಹಿತಿ ನೀಡಿದೆ. ಎರಡೂ ಸಂಸ್ಥೆಗಳು ಈಗ ಹೊಸ ಸುರಕ್ಷತಾ ಕ್ರಮಗಳನ್ನು ನಿರ್ಧರಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಲಾಗಿದೆ.

ಈಗಾಗಲೇ, ಎಮಿರೇಟ್ಸ್‌ ಏರ್‌ಲೈನ್ಸ್‌ ಸಂಸ್ಥೆಯು ಅಕ್ಟೋಬರ್ ಆರಂಭದಿಂದಲೇ, ತನ್ನ ಎಲ್ಲ ವಿಮಾನಗಳಲ್ಲಿ ಪವರ್ ಬ್ಯಾಂಕ್‌ಗಳ ಬಳಕೆಯನ್ನು ನಿಷೇಧಿಸಿದೆ. 100 ವ್ಯಾಟ್‌ಗಿಂತ ಕಡಿಮೆ ಸಾಮರ್ಥ್ಯ ಹೊಂದಿರುವ ಪವರ್ ಬ್ಯಾಂಕ್‌ಗಳನ್ನು ಮಾತ್ರ ಸಾಗಿಸಲು ಅನುಮತಿಸಲಾಗಿದೆ. ಆದಾಗ್ಯೂ, ವಿಮಾನಗಳಲ್ಲಿ ಅವುಗಳನ್ನು ಚಾರ್ಜ್ ಮಾಡುವುದು ಅಥವಾ ಅವುಗಳ ಮೂಲಕ ಮೊಬೈಲ್‌ಗಳನ್ನು ಚಾರ್ಜ್‌ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಈ ಲೇಖನ ಓದಿದ್ದೀರಾ?: 50% ಮಿತಿ ದಾಟಿದ ತೆಲಂಗಾಣ ಮೀಸಲಾತಿಗೆ ಸುಪ್ರೀಮ್ ತಡೆ; ಕರ್ನಾಟಕಕ್ಕೂ ಅಡೆ-ತಡೆ?

ಅದೇ ರೀತಿ, ಸಿಂಗಾಪುರ್ ಏರ್ಲೈನ್ಸ್ ಕೂಡ ಏಪ್ರಿಲ್‌ನಿಂದಲೇ ವಿಮಾನಗಳಲ್ಲಿ ‘ಪವರ್ ಬ್ಯಾಂಕ್‌’ ಬಳಕೆ ಅಥವಾ ಚಾರ್ಜ್ ಮಾಡುವುದನ್ನು ನಿಷೇಧಿಸಿದೆ. ಕ್ಯಾಥೆ ಪೆಸಿಫಿಕ್ ಮತ್ತು ಕತಾರ್ ಏರ್ವೇಸ್ ಸೇರಿದಂತೆ ಇತರ ಅನೇಕ ಸಂಸ್ಥೆಗಳು ಕೂಡ ಪ್ರಯಾಣಿಕರು ತಮ್ಮ ಪವರ್ ಬ್ಯಾಂಕ್‌ಗಳ ಬಳಕೆ ಕುರಿತು ನಿಯಮಗಳನ್ನು ರೂಪಿಸಿವೆ.

ಪವರ್ ಬ್ಯಾಂಕ್‌ಗಳು ಲಿಥಿಯಂ-ಐಯಾನ್ ಸೆಲ್‌ಗಳನ್ನು ಒಳಗೊಂಡಿರುತ್ತವೆ. ಇವುಗಳು ಗಮನಾರ್ಹ ವಿದ್ಯುತ್‌ಅನ್ನು ಸಂಗ್ರಹಿಸಲು ಬ್ಯಾಟರಿಗಳಿಗೆ ನೆರವಾಗುತ್ತವೆ. ಆದಾಗ್ಯೂ, ಪ್ರಮಾಣೀಕರಣ ಅಥವಾ ಗುಣಮಟ್ಟದ ಪರೀಕ್ಷೆಯಿಲ್ಲದೆ ಹೆಚ್ಚಾಗಿ ಮಾರಾಟವಾಗುವ ಅಗ್ಗದ ಪವರ್‌ ಬ್ಯಾಂಕ್‌ಗಳು ಶಾರ್ಟ್-ಸರ್ಕ್ಯೂಟ್ ಅಥವಾ ತಾಪಮಾನ ನಿಯಂತ್ರಣದಂತಹ ಅಪಾಯಗಳನ್ನು ತಪ್ಪಿಸುವ ಸುರಕ್ಷತಾ ಅಂಶಗಳನ್ನು ಹೊಂದಿರುವುದಿಲ್ಲ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...