ಇದು ನಮ್ಮ ಕಾಶ್ಮೀರ, ದ್ವೇಷವು ಪ್ರೀತಿಗೆ ಸೋತಿದೆ; ದಾಳಿಯ ನಂತರ ಪಹಲ್ಗಾಮ್‌ಗೆ ನಟ ಅತುಲ್ ಕುಲಕರ್ಣಿ ಭೇಟಿ

Date:

ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯ ಕೆಲವೇ ದಿನಗಳ ನಂತರ ಬಹುಭಾಷಾ ನಟ ಅತುಲ್ ಕುಲಕರ್ಣಿ ಪಹಲ್ಗಾಮ್‌ಗೆ ಭೇಟಿ ನೀಡಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ‘ಯಾರೊಬ್ಬರು ಕಾಶ್ಮೀರದ ಬಗ್ಗೆ ಭಯಪಡಬೇಡಿ. ಇದು ನಮ್ಮ ಕಾಶ್ಮೀರ, ಇದು ನಮ್ಮ ದೇಶ, ನಾವು ಬರುತ್ತೇವೆ” ಎಂದು ದೇಶದ ಜನತೆಗೆ ಸಂದೇಶ ನೀಡಿದ್ದಾರೆ.

“ಇದು ಭಾರತದ ಆಸ್ತಿ. ಧೈರ್ಯ ಭಯಕ್ಕಿಂತ ತೂಕ ಹೊಂದಿರುತ್ತದೆ. ದ್ವೇಷವು ಪ್ರೀತಿಗೆ ಸೋತಿದೆ. ಕಾಶ್ಮೀರಕ್ಕೆ ಹೋಗೋಣ. ಸಿಂಧ್, ಝೀಲಂ ತೀರಕ್ಕೆ ಹೋಗೋಣ. ನಾನು ಬಂದಿದ್ದೇನೆ, ನೀವು ಕೂಡ ಬನ್ನಿ. ಜಗತ್ತಿಗೆ ಸಂದೇಶ ಕಳುಹಿಸಲು ಪಹಲ್ಗಾಮ್‌ಗೆ ಭೇಟಿ ನೀಡಲು ಬಯಸಿದ್ದೇನೆ’ ಎಂದು ಪ್ರವಾಸಿಗರನ್ನು ಆಹ್ವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏಪ್ರಿಲ್ 22 ರಂದು ನಡೆದ ಘಟನೆ ಇಡೀ ದೇಶವನ್ನೇ ದುಃಖಮಯವಾಗಿಸಿದೆ. ಇಲ್ಲಿ ಶೇ. 90 ರಷ್ಟು ಬುಕಿಂಗ್ ರದ್ದಾಗಿದೆ ಎಂದು ನಾನು ಓದಿದ್ದೇನೆ. ಭಯೋತ್ಪಾದಕರು ಕಾಶ್ಮೀರಕ್ಕೆ ಬರಬೇಡಿ ಎಂಬ ಸಂದೇಶ ನೀಡುತ್ತಿದ್ದಾರೆ. ಇದು ಆಗುವುದಿಲ್ಲ. ಇದು ನಮ್ಮ ಕಾಶ್ಮೀರ, ನಮ್ಮ ದೇಶ, ನಾವು ಇಲ್ಲಿಗೆ ಬರುತ್ತೇವೆ. ಭಯೋತ್ಪಾದಕರ ಸಿದ್ಧಾಂತಕ್ಕೆ ನಾವು ನೀಡಬೇಕಾದ ಉತ್ತರ ಇದು. ಮುಂಬೈನಲ್ಲಿಯೇ ಇದ್ದು ಈ ಸಂದೇಶವನ್ನು ನೀಡಲು ನನಗೆ ಸಾಧ್ಯವಾಗಲಿಲ್ಲ, ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಾನು ಬರಲು ಸಾಧ್ಯವಾದರೆ, ದೇಶದ ಉಳಿದವರು ಸಹ ಇಲ್ಲಿಗೆ ಬರಬಹುದು. ನಾವು ಇಲ್ಲಿಗೆ ಬರಬೇಕು ಮತ್ತು ಭಯಪಡಬಾರದು” ಎಂದು ಅತುಲ್ ಕುಲಕರ್ಣಿ ಸಾರ್ವಜನಿಕರಿಗೆ ಸಂದೇಶ ರವಾನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಏಪ್ರಿಲ್ 27 ರಂದು, ಅತುಲ್ ಕುಲಕರ್ಣಿ ಅವರು ಪಹಲ್ಗಮ್‌ಗೆ ಭೇಟಿ ನೀಡುತ್ತಿರುವುದನ್ನು ಮತ್ತು ಅಂಗಡಿಯಲ್ಲಿ ಸ್ಥಳೀಯ ಖಾದ್ಯಗಳನ್ನು ಆನಂದಿಸುತ್ತಿರುವ ಒಂದೆರಡು ಭಾವಚಿತ್ರಗಳು ಮತ್ತು ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ. ಒಂದು ಭಾವಚಿತ್ರದಲ್ಲಿ, ಅವರು “ಐ ಲವ್ ಪಹಲ್ಗಾಮ್” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಭಾವಚಿತ್ರದಲ್ಲಿ ಅವರು ಕಾಶ್ಮೀರಿ ಅಂಗಡಿಯಿಂದ ಕ್ರಿಕೆಟ್ ಬ್ಯಾಟ್ ಖರೀದಿಸುತ್ತಿರುವುದನ್ನು ತೋರಿಸಲಾಗಿದೆ. ಅಂಗಡಿಯ ಮಾಲೀಕರು ನಟನಿಗೆ ಕಷ್ಟದ ಸಮಯದಲ್ಲಿ ಆ ಸ್ಥಳಕ್ಕೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅವರ ಒಂದು ಪೋಸ್ಟ್‌ಗೆ ನೆಟ್ಟಿಗರೊಬ್ಬರು ಪ್ರತಿಕ್ರಿಯೆ ನೀಡಿದ್ದು, ‘ಅತುಲ್ ಸರ್, ನೀವು ನಮ್ಮೂರಿನಲ್ಲಿ ಆತಿಥ್ಯ ವಹಿಸಿದ್ದು ತುಂಬಾ ಸಂತೋಷವಾಯಿತು. ಈ ಕಷ್ಟದ ಸಮಯದಲ್ಲಿ ಆಗಮಿಸಿ ಶತ್ರುಗಳಿಗೆ ನಾವು ಹೆದರುವುದಿಲ್ಲ ಎಂದು ತೋರಿಸಿದ್ದಕ್ಕಾಗಿ ತುಂಬಾ ಧನ್ಯವಾದಗಳು. ನಾವು ಒಟ್ಟಾಗಿ ಇದನ್ನು ಜಯಿಸುತ್ತೇವೆ” ಎಂದು ಹೇಳಿದ್ದಾರೆ.

Atul Kulkarni 1
https://www.instagram.com/reel/DI9d957TEbR/?utm_source=ig_embed&ig_rid=7a85082c-f0e5-453d-8b5b-85798d4ef10b
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...