ಬೆಟ್ಟಿಂಗ್ ಆ್ಯಪ್ ಪ್ರಚಾರ; ಕ್ಷಮೆ ಕೇಳಿದ ನಟ ಪ್ರಕಾಶ್ ರಾಜ್

Date:

ಬೆಟ್ಟಿಂಗ್‌ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸುತ್ತಿದೆ. ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ್ದ ಹಲವು ನಟ-ನಟಿಯನ್ನೂ ವಿಚಾರಣೆಗೆ ಒಳಪಡಿಸಿದೆ. ಅಂತೆಯೇ, ನಟ ಪ್ರಕಾಶ್‌ ರಾಜ್ ಅವರಿಗೂ ಸಿಐಡಿ ಸಮನ್ಸ್‌ ನೀಡಿತ್ತು. ಸಿಐಡಿ ಎದುರು ವಿಚಾರಣೆಗೆ ಹಾಜರಾಗಿದ್ದ ಪ್ರಕಾಶ್‌ ರಾಜ್‌, ವಿಚಾರಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ‘ನಾನು ಗೊತ್ತಿದ್ದೋ, ಗೊತ್ತಿಲ್ಲದೆಯೋ ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ್ದೇನೆ. ಅದು ತಪ್ಪು. ಅದಕ್ಕಾಗಿ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.

ಪ್ರಕಾಶ್‌ ರಾಜ್ ಅವರು ಹೈದರಾಬಾದ್‌ನಲ್ಲಿ ಸಿಐಡಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “2016ರಲ್ಲಿ ನಾನು ಒಂದು ಗೇಮಿಂಗ್ ಆ್ಯಪ್‌ಅನ್ನು ಪ್ರಚಾರ ಮಾಡಿದ್ದೆ. ಆದರೆ, ಅದು 2017ರಲ್ಲಿ ಬೆಟ್ಟಿಂಗ್ ಆ್ಯಪ್ ಆಗಿ ಮಾರ್ಪಟ್ಟಿತು. ಆಗಲೇ, ನನ್ನ ಒಪ್ಪಂದವೂ ರದ್ದಾಯಿತು. ಆದರೂ, ನಾನು ಗೊತ್ತಿದ್ದು ಮಾಡಿದ್ದರೂ ಗೊತ್ತಿಲ್ಲದೇ ಮಾಡಿದ್ದರೂ ಪ್ರಚಾರ ಮಾಡಿದ್ದು ತಪ್ಪು. ಮುಂದೆದೂ ಇಂತಹ ತಪ್ಪು ಮಾಡುವುದಿಲ್ಲ” ಎಂದು ಹೇಳಿದ್ದಾರೆ.

“ನಾನು ಬ್ಯಾಂಕ್ ಮಾಹಿತಿ ಮತ್ತು ಸಂಬಂಧಿಸಿದ ಎಲ್ಲ ವಿವರಗಳ ದಾಖಲೆಗಳನ್ನು ತನಿಖಾ ತಂಡಕ್ಕೆ ನೀಡಿದ್ದೇನೆ. ಯುವ ಜನರು ಬೆಟ್ಟಿಂಗ್ ಜಾಲಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹಣ ಕಳೆದುಕೊಳ್ಳುತ್ತಿದ್ದಾರೆ. ಕಷ್ಟಪಟ್ಟು ದುಡಿದರೆ ಮಾತ್ರವೇ ಹಣ ಮತ್ತು ಯಶಸ್ಸು ಸಿಗುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...