ನಟ ಧನುಷ್ ವಿರುದ್ಧ ಬಹಿರಂಗ ಪತ್ರ ಬರೆದ ನಟಿ ನಯನತಾರಾ

Date:

ತಮ್ಮ ಸಿನಿಮಾದ ದೃಶ್ಯಗಳನ್ನು ಬಳಸಿಕೊಂಡಿದ್ದಾರೆಂದು ಆರೋಪಿಸಿ ನಟಿ ನಯನತಾರಾ ಅವರಿಗೆ ನಟ ಧನುಷ್ ಲೀಗಲ್‌ ನೋಟಿಸ್‌ ಕಳಿಸಿದ್ದಾರೆ. ಪರಿಹಾರವಾಗಿ 10 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ತಮಗೆ ನೋಟಿಸ್ ಕಳಿಸಿರುವ ಧನುಷ್ ವಿರುದ್ಧ ನಯನತಾರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟಿ ನಯನತಾರಾ ನಿರ್ಮಾಣ ಮಾಡಿರುವ ‘Nayanthara: Beyond the Fairytale’ ಸಾಕ್ಷ್ಯಚಿತ್ರದಲ್ಲಿ ಧನುಷ್ ಅವರ ‘ನಾನುಮ್ ರೌಡಿ ಧಾನ್’ ಸಿನಿಮಾದ ಮೂರು ಸೆಕೆಂಡ್‌ ದೃಶ್ಯವನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಧನುಷ್ ನೋಟಿಸ್ ಕಳಿಸಿದ್ದಾರೆ.

ನೋಟಿಸ್ ಕಳಿಸಿರುವ ಧನುಷ್ ವಿರುದ್ಧ ನಯನತಾರಾ ಸುದೀರ್ಘ ಪತ್ರ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “2015ರಲ್ಲಿ ಬಿಡುಗಡೆಯಾದ ‘ನಾನುಮ್ ರೌಡಿ ಧಾನ್’ ಚಿತ್ರದ ದೃಶ್ಯವನ್ನು ನಮ್ಮ ಸಿನಿಮಾದಲ್ಲಿ ಬಳಸಿಕೊಳ್ಳಲು ಧನುಷ್ ಅವರ ಅನುಮತಿ ಕೇಳಿದ್ದೆ. ಆದರೆ, ಅವರು ಅನುಮತಿ ನೀಡಲು ನೀಡಲು ನಿರಾಕಸಿದರು. ಬಳಿಕ, ಸಾಕ್ಷ್ಯಚಿತ್ರವನ್ನು ಮರು ಚಿತ್ರೀಕರಣ ಮಾಡಿದ್ದೇವೆ” ಎಂದು ನಯನತಾರಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರೀತಿ ಮತ್ತು ಮದುವೆ ಸೇರಿದಂತೆ ಜೀವನದ ಅಮೂಲ್ಯ ಕ್ಷಣಗಳ ಕುರಿತ ದೃಶ್ಯಗಳನ್ನು ಸಾಕ್ಷ್ಯಚಿತ್ರದಲ್ಲಿ ಬಳಸಲಾಗಿದೆ. ಆ ದೃಶ್ಯಗಳು ಜನರ ಫೋನ್‌ಗಳಲ್ಲಿ ಸೆರೆಹಿಡಿದವುಗಳಾಗಿವೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

“ಅಭಿಮಾನಿಗಳು ನೋಡುವ ಧನುಷ್‌ಗೂ, ಅಸಲಿ ಧನುಷ್‌ಗೂ ವ್ಯತ್ಯಾಸಗಳಿವೆ. ಅವರು ಇಷ್ಟು ಕೀಳುಮಟ್ಟಕ್ಕೆ ಇಳಿದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಯಾವುದೇ ಹಿನ್ನೆಲೆಯಿಲ್ಲದೆ, ಅಭಿಮಾನಿಗಳ ಬೆಂಬಲದಿಂದ ಒಂಟಿ ಮಹಿಳೆಯಾಗಿ ಈ ಮಟ್ಟಕ್ಕೆ ಬೆಳೆದು ಬಂದಿದ್ದೇನೆ. ಧನುಷ್ ಅವರ ನೋಟಿಸ್‌ಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ” ಎಂದು ನಯನತಾರಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...