ಹಿಂಡನ್‌ಬರ್ಗ್ ಸ್ಪೋಟಕ ವರದಿ; ಅದಾನಿ ಗ್ರೂಪ್‌ನಿಂದ ಹೇಳಿಕೆ ಬಿಡುಗಡೆ

Date:

ಅದಾನಿ ಗ್ರೂಪ್‌ನ ಹಗರಣಗಳಲ್ಲಿ ಸೆಬಿ ಮುಖ್ಯಸ್ಥೆ ಮಾಧವಿ ಬುಚ್ ಮತ್ತು ಪತಿ ಧವಲ್ ಬುಚ್ ಭಾಗಿಯಾಗಿರುವ ಹಿಂಡನ್‌ಬರ್ಗ್ ವರದಿಯ ಬಗ್ಗೆ ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. “ಹಿಂಡನ್‌ಬರ್ಗ್‌ನ ಇತ್ತೀಚಿನ ಆರೋಪಗಳು ದುರುದ್ದೇಶಪೂರಿತ, ಕಿಡಿಗೇಡಿತನದ್ದು ಮತ್ತು ತಿರುಚಿರುವುದು, ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ” ಎಂದು ಅದಾನಿ ಗ್ರೂಪ್ ಹೇಳಿದೆ.

“ಈ ವರದಿಯು ಸತ್ಯ ಮತ್ತು ಕಾನೂನನ್ನು ನಿರ್ಲಕ್ಷಿಸುವುದರೊಂದಿಗೆ ವೈಯಕ್ತಿಕ ಲಾಭಕ್ಕಾಗಿ ಪೂರ್ವನಿರ್ಧರಿತ ತೀರ್ಮಾನಳನ್ನು ಕೈಗೊಂಡಿದೆ” ಎಂದೂ ಅದಾನಿ ಗ್ರೂಪ್ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

“ಅದಾನಿ ಗ್ರೂಪ್ ವಿರುದ್ಧದ ಈ ಆರೋಪಗಳನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ. ಈ ಆರೋಪವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದ್ದು ಆಧಾರರಹಿತವೆಂದು ಸಾಬೀತುಪಡಿಸಲಾಗಿದೆ. ಈ ಪ್ರಕರಣವನ್ನು 2024ರ ಜನವರಿಯಲ್ಲಿ ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಅದಾನಿ ಗ್ರೂಪ್‌ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಪತಿ ಭಾಗಿ: ಹಿಂಡನ್‌ಬರ್ಗ್ ಸ್ಪೋಟಕ ವರದಿ

“ನಮ್ಮ ಸಾಗರೋತ್ತರ ವ್ಯವಹಾರಗಳುಸಂಪೂರ್ಣ ಪಾರದರ್ಶಕವಾಗಿದೆ ಎಂದು ಪುನರುಚ್ಚರಿಸುತ್ತೇವೆ. ಎಲ್ಲಾ ಸಂಬಂಧಿತ ವಿವರಗಳನ್ನು ಹಲವಾರು ಸಾರ್ವಜನಿಕ ದಾಖಲೆಗಳಲ್ಲಿ ನಿಯಮಿತವಾಗಿ ಬಹಿರಂಗಪಡಿಸಲಾಗುತ್ತದೆ” ಎಂದು ತಿಳಿಸಿದೆ.

“ಉಲ್ಲೇಖಿಸಲಾದ ವ್ಯಕ್ತಿಗಳು (ಸೆಬಿಯ ಅಧ್ಯಕ್ಷೆ, ಪತಿ) ಅಥವಾ ವಿಷಯಗಳೊಂದಿಗೆ ಅದಾನಿ ಗ್ರೂಪ್ ಯಾವುದೇ ವಾಣಿಜ್ಯ ಸಂಬಂಧವನ್ನು ಹೊಂದಿಲ್ಲ. ಎಲ್ಲಾ ಕಾನೂನು ಮತ್ತು ನಿಯಂತ್ರಕ ಅಗತ್ಯತೆಗಳ ಪಾರದರ್ಶಕತೆ ಮತ್ತು ಅನುಸರಣೆಗೆ ನಾವು ದೃಢವಾಗಿ ಬದ್ಧರಾಗಿದ್ದೇವೆ” ಎಂದು ಹೇಳಿದೆ.

ಭಾರತೀಯ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿರುವ ಅಪಖ್ಯಾತಿ ಪಡೆದ ಶಾರ್ಟ್-ಸೆಲ್ಲರ್‌ ಹಿಂಡನ್‌ಬರ್ಗ್‌ ಆರೋಪಗಳು ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಅಥವಾ ಅಪ್ರಸ್ತುತ, ಅಸಂಬದ್ಧ ವಿಚಾರ ಎಂದಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...