2016ರಿಂದ ಅದಾನಿ ಸಮೂಹದ ತನಿಖೆ ಮಾಡಿಲ್ಲ; ಸುಪ್ರೀಂ ಕೋರ್ಟ್‌ಗೆ ಸೆಬಿ ಮಾಹಿತಿ

Date:

2016ರಿಂದ ಅದಾನಿ ಸಮೂಹದ ಮೇಲೆ ನಿಗಾ ಇಟ್ಟಿಲ್ಲ ಎನ್ನುವ ವಿವರವನ್ನು ಸೆಬಿ ಸುಪ್ರೀಂ ಕೋರ್ಟ್‌ ಮುಂದೆ ಬಹಿರಂಗಪಡಿಸಿದೆ.

ಸೋಮವಾರ ಸುಪ್ರೀಂ ಕೋರ್ಟ್‌ಗೆ ನೀಡಿದ ಉತ್ತರದಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ)ಯು, 201 ರಿಂದ ಯಾವುದೇ ಅದಾನಿ ಸಮೂಹದ ಯಾವುದೇ ಕಂಪನಿಯನ್ನು ತನಿಖೆ ಮಾಡಿಲ್ಲ ಮತ್ತು ತಮ್ಮ ಹಿಂದಿನ ಹೇಳಿಕೆಯು ತಪ್ಪಾಗಿದೆ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠವು, ಅದಾನಿ ಗುಂಪಿನ ವಿರುದ್ಧ ಹಿಂಡೆನ್‌ಬರ್ಗ್ ಸಂಶೋಧನೆಯ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ವಿಸ್ತರಣೆಯನ್ನು ಕೋರಿ ಮಾರುಕಟ್ಟೆ ನಿಯಂತ್ರಕ ಸೆಬಿಯ ಅರ್ಜಿಯನ್ನು ಶೀಘ್ರದಲ್ಲೇ ಪರಿಗಣಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ತನ್ನ ಉತ್ತರದಲ್ಲಿ, ಸೆಬಿ ತನ್ನ ತನಿಖೆ ಪೂರ್ಣಗೊಳಿಸಲು ಸಮಯ ವಿಸ್ತರಣೆಯ ಅಗತ್ಯವಿದೆ ಎಂದು ಪುನರುಚ್ಚರಿಸಿತು. ಆದರೆ ಕಳೆದ ಶುಕ್ರವಾರದಂದು, ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ಮಾರುಕಟ್ಟೆ ನಿಯಂತ್ರಕರು ಕೋರಿರುವ ಆರು ತಿಂಗಳ ವಿಸ್ತರಣೆಯ ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

“ನಾವು ಈಗ 6 ತಿಂಗಳು ಸಮಯ ನೀಡಲು ಸಾಧ್ಯವಿಲ್ಲ. ಕೆಲಸದಲ್ಲಿ ಸ್ವಲ್ಪ ಎಚ್ಚರ ಅಗತ್ಯ. ಒಂದು ತಂಡವನ್ನು ಒಟ್ಟುಗೂಡಿಸಿ. ನಾವು ಆಗಸ್ಟ್ ಮಧ್ಯದಲ್ಲಿ ಪ್ರಕರಣವನ್ನು ಪಟ್ಟಿ ಮಾಡಬಹುದು ಮತ್ತು ನಂತರ ವರದಿಯ ಬಗ್ಗೆ ವಿಚಾರಣೆ ನಡೆಸಬಹುದು. ಇದಕ್ಕೆ ಕನಿಷ್ಠ ಸಮಯ 6 ತಿಂಗಳು ನೀಡಲಾಗುವುದಿಲ್ಲ. ಸೆಬಿ ಅನಿರ್ದಿಷ್ಟ ಅವಧಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತು ನಾವು ಅವರಿಗೆ 3 ತಿಂಗಳ ಕಾಲಾವಕಾಶ ನೀಡುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ತನ್ನ ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಕಾಲ ವಿಸ್ತರಣೆ ಕೋರಿ ಸೆಬಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಜ್ಞಾನವಾಪಿ ಮಸೀದಿ | ಶಿವಲಿಂಗದ ಆಕೃತಿಯ ಕಾರ್ಬನ್ ಡೇಟಿಂಗ್‌ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಗೌತಮ್ ಅದಾನಿ ನೇತೃತ್ವದ ವ್ಯವಹಾರ ಸಂಸ್ಥೆಯು ಹಲವು ದಶಕಗಳಿಂದ ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿ ವಂಚಿಸುತ್ತಿದೆ” ಎಂದು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಆರೋಪಿಸಿತ್ತು.

ಇನ್ನೊಂದೆಡೆ, ಹಿಂಡೆನ್‍ಬರ್ಗ್ ರಿಸರ್ಚ್‍ನ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅದರ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು. ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಸೆಬಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಮನವಿ ಮಾಡಿದ್ದಾರೆ.

ಲೋಕಸಭೆಯಲ್ಲೂ ಕೂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವು ವಿಪಕ್ಷ ನಾಯಕರು ಅದಾನಿ ಪ್ರಕರಣವನ್ನು ಜಂಟಿ ಸಂಸದೀಯ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...