ಆದಿಪುರುಷ್ ವಿವಾದ | ಸಂಭಾಷಣೆಕಾರ ಮನೋಜ್‌ಗೆ ಅಲಹಾಬಾದ್‌ ಹೈಕೋರ್ಟ್‌ ನೋಟಿಸ್

Date:

  • ಆದಿಪುರುಷ್ ನಿಷೇಧಿಸಬೇಕು ಎಂದು ಕೋರಿ ವಕೀಲ ಕುಲದೀಪ್‌ ತಿವಾರಿ ಅರ್ಜಿ
  • ಸಿನಿಮಾ ನಿಷೇಧ ಕುರಿತ ಅರ್ಜಿ ವಿಚಾರಣೆ ನಡೆಸುತ್ತಿರುವ ಲಖನೌ ಪೀಠ

ಆದಿಪುರುಷ್ ಚಲನಚಿತ್ರದ ಸಂಭಾಷಣೆ ಕುರಿತು ಅಲಹಾಬಾದ್‌ ಹೈಕೋರ್ಟ್‌ ಮಂಗಳವಾರ (ಜೂನ್‌ 27) ಚಿತ್ರದ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿದೆ.

ಅಲ್ಲದೆ ಆಕ್ಷೇಪಾರ್ಹ ಮಾತುಗಳ ಆರೋಪಕ್ಕೆ ಸಂಬಂಧಿಸಿ ವಾರದೊಳಗೆ ಉತ್ತರಿಸುವಂತೆ ನ್ಯಾಯಾಲಯ ಸಂಭಾಷಣೆಕಾರ ಮನೋಜ್‌ ಮುಂತಶಿರ್‌ ಶುಕ್ಲಾ ಅವರಿಗೆ ನ್ಯಾಯಾಲಯ ನೋಟಿಸ್‌ ನೀಡಿದೆ.

ಚಿತ್ರದಲ್ಲಿನ ಆಕ್ಷೇಪಾರ್ಹ ಸಂಭಾಷಣೆ ಹಿನ್ನೆಲೆ ಚಲನಚಿತ್ರ ನಿಷೇಧಿಸಬೇಕು ಎಂದು ಕೋರಿ ವಕೀಲ ಕುಲದೀಪ್‌ ತಿವಾರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಿಪುರುಷ್ ಸಿನಿಮಾ ಬಗೆಗಿನ ಅರ್ಜಿಯನ್ನು ಪೀಠ ಸೋಮವಾರದಿಂದ (ಜೂನ್‌ 26) ವಿಚಾರಣೆ ನಡೆಸುತ್ತಿದೆ.

ಸಿನಿಮಾದ ಸಂಭಾಷಣೆಗಳು ಒಂದು ದೊಡ್ಡ ವರ್ಗವನ್ನು ಕೆರಳುವಂತೆ ಮಾಡಿವೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದೆ. ಇದಕ್ಕೆ ಸಿನಿಮಾ ತಂಡ ಉತ್ತರಿಸಬೇಕು. ಅದಕ್ಕಾಗಿ ಸಂಭಾಷಣೆಕಾರ ಮನೋಜ್‌ ಮುಂತಶಿರ್‌ ಶುಕ್ಲಾ ಅವರನ್ನು ಕಕ್ಷಿದಾರರನ್ನಾಗಿ ಮಾಡಲಾಗಿದೆ. ಅವರಿಗೆ ನೋಟಿಸ್‌ ನೀಡಲಾಗಿದ್ದು ಸಂಭಾಷಣೆಗಳ ಆಕ್ಷೇಪಣೆ ಕುರಿತು ವಾರದೊಳಗೆ ಮನೋಜ್‌ ಪ್ರತಿಕ್ರಿಯೆ ನೀಡಬೇಕು ಎಂದು ಪೀಠ ಹೇಳಿದೆ.

“ರಾಮಾಯಣ ನಮಗೆ ಮಾದರಿಯಾಗಿದೆ. ಆದರೆ ಸಿನಿಮಾದಲ್ಲಿನ ಸಂಭಾಷಣೆಗಳ ಸ್ವರೂಪ ಒಂದು ಪ್ರಮುಖ ಸಮಸ್ಯೆಯಾಗಿದೆ. ಕೆಲವು ಸನ್ನಿವೇಶಗಳು ಬಾಲಿಶವಾಗಿವೆ. ಈ ನಿಟ್ಟಿನಲ್ಲಿ ಚಲನಚಿತ್ರ ಪ್ರಮಾಣೀಕರಣ ಮಂಡಳಿ ತನ್ನ ಜವಾಬ್ದಾರಿಯನ್ನು ಸೂಕ್ತವಾಗಿ ನಿರ್ವಹಿಸಿಲ್ಲ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

“ಆದಿಪುರುಷ್ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಿರುವುದು ಸಮಧಾನಕರ ಸಂಗತಿ. ಹನುಮಂತ ದೇವರು ಮತ್ತು ಸೀತಾ ದೇವಿಯನ್ನು ಭಿನ್ನವಾಗಿ ತೋರಿಸಲಾಗಿದೆ. ಇಂತಹ ಸಂಗತಿಗಳನ್ನು ಆರಂಭದಿಂದಲೇ ತೆಗೆದುಹಾಕಬೇಕು. ಸಿನಿಮಾದಲ್ಲಿನ ಕೆಲವು ದೃಶ್ಯಗಳು ವಯಸ್ಕರ ವರ್ಗಕ್ಕೆ ಸೇರಿದಂತಿವೆ. ಇಂತಹ ಸಿನಿಮಾಗಳನ್ನು ನೋಡುವುದು ತಂಬಾ ಕಷ್ಟಕರವಾಗಿದೆ” ಎಂದು ಪೀಠ ಉಲ್ಲೇಖಿಸಿದೆ.

“ನಾವು ಸಹಿಷ್ಣುವಾಗಿದ್ದರೆ ಅದನ್ನೂ ಪರೀಕ್ಷಿಸಲಾಗುತ್ತದೆ? ಸಿನಿಮಾದ ಆಕ್ಷೇಪಣೆಗಳ ಕುರಿತು ಪ್ರಮಾಣೀಕರಣ ಮಂಡಳಿ ಏನು ಮಾಡುತ್ತಿದೆ?” ಎಂದು ಪೀಠ ಪ್ರಶ್ನಿಸಿತು.

ಆಕ್ಷೇಪಾರ್ಹ ಸಂಭಾಷಣೆಗಳನ್ನು ಸಿನಿಮಾದಲ್ಲಿ ಈಗಾಗಲೇ ತೆಗೆದು ಹಾಕಲಾಗಿದೆ ಎಂದು ಉಪ ಸಾಲಿಸಿಟರ್‌ ಜನರಲ್‌ ಪೀಠಕ್ಕೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆಗೂ ಮುನ್ನ ಕೆಸಿಆರ್‌ಗೆ ಆಘಾತ: ಮಾಜಿ ಸಚಿವರು, ಶಾಸಕರು ಸೇರಿ 35 ಮಂದಿ ‘ಕೈ’ ಸೇರ್ಪಡೆಗೆ ಸಜ್ಜು

ವಿಚಾರಣೆ ಬುಧವಾರ (ಜೂನ್‌ 28) ಮುಂದೂಡಿಕೆಯಾಗಿದೆ.

ಚಿತ್ರದಲ್ಲಿ ಆಕ್ಷೇಪಾರ್ಹ ಸಂಭಾಷಣೆಗಳಿವೆ. ಇವು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತವೆ. ಆದ್ದರಿಂದ ಆದಿಪುರುಷ್ ಚಲನಚಿತ್ರ ನಿಷೇಧಿಸಬೇಕು ಎಂದು ಕೋರಿ ವಕೀಲ ಕುಲದೀಪ್‌ ತಿವಾರಿ ಅವರು ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...