ಅದಾನಿ ಗದ್ದಲ | ಉಭಯ ಸದನಗಳ ಸಂಸತ್ತು ಕಲಾಪ ಏಪ್ರಿಲ್‌ 5ಕ್ಕೆ ಮುಂದೂಡಿಕೆ

Date:

  • ಏಪ್ರಿಲ್ 6 ವರೆಗೆ ನಡೆಯಲಿರುವ ಸಂಸತ್ತು ಕಲಾಪ
  • ಮಾರ್ಚ್ 13ರಿಂದ ಆರಂಭವಾಗಿರುವ ಅಧಿವೇಶನ

ಅದಾನಿ ಹಿಂಡನ್ ಬರ್‍ಗ್ ಸಂಶೋಧನಾ ವರದಿ ಸೋಮವಾರ (ಏಪ್ರಿಲ್ 3) ರಂದು ಆರಂಭವಾದ ಸಂಸತ್ತು ಕಲಾಪದಲ್ಲಿ ಮತ್ತೆ ಸದ್ದು ಮಾಡಿದೆ. ಇದರಿಂದ ರಾಜ್ಯಸಭೆಯ ಕಲಾಪವನ್ನು ಸೋಮವಾರದ ವರೆಗೂ (ಏಪ್ರಿಲ್‌ 5) ಮುಂದೂಡಲಾಗಿದೆ.

ಅದಾನಿ ಸಮೂಹ ಹಗರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ಬೆಳಗ್ಗೆ 11 ಗಂಟೆಗೆ ಆರಂಭವಾದ ರಾಜ್ಯಸಭೆ ಕಲಾಪದಲ್ಲಿ ಪ್ರತಿಪಕ್ಷಗಳು ಗದ್ದಲ ಸೃಷ್ಟಿಸಿದವು. ಇದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಲಾಗಿತ್ತು.

ಇತ್ತೀಚೆಗೆ ನಿಧನ ಹೊಂದಿದ ಪುಣೆ ಸಂಸದ ಗಿರೀಶ್ ಬಾಪಟ್ ಮತ್ತು ಕೇರಳದ ಮಾಜಿ ಸಂಸದ ಇನ್ನೋಸೆಂಟ್ ವರೀದ್ ಅವರಿಗೆ ಸಂತಾಪ ಸೂಚಕವಾಗಿ ಲೋಕಸಭೆ ಕಲಾಪವೂ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಾಹ್ನ ಕಲಾಪ ಸೇರಿದಾಗ ಪ್ರತಿಪಕ್ಷಗಳು ಘೋಷಣೆ ಕೂಗಿದವು. ಇದರಿಂದ ಕಲಾಪಕ್ಕೆ ಅಡ್ಡಿಯುಂಟಾಯಿತು. ಇದರಿಂದ ಲೋಕಸಭೆಯ ಕಲಾಪವನ್ನೂ ಸೋಮವಾರದವರೆಗೆ ಮುಂದೂಡಲಾಯಿತು.

ಪುಣೆಯ ಹಾಲಿ ಬಿಜೆಪಿ ಸಂಸದರಾಗಿದ್ದ ಬಾಪಟ್ ಅವರು ಮಾರ್ಚ್ 29 ರಂದು ನಿಧನರಾದರು ಮತ್ತು ತ್ರಿಶೂರ್ ನ ಚಾಲಕುಡಿ ಕ್ಷೇತ್ರದ ಮಾಜಿ ಸಂಸದ ಇನೋಸೆಂಟ್ ಮಾರ್ಚ್ 26 ರಂದು ನಿಧನರಾದರು.

ಮಾರ್ಚ್ 13 ರಿಂದ ಸಂಸತ್ತು ಬಜೆಟ್ ಅಧಿವೇಶನ ಆರಂಭವಾದಾಗಿನಿಂದ ಅದಾನಿ ಸಮೂಹದ ವಿರುದ್ಧದ ಷೇರು ಅಕ್ರಮದ ಆರೋಪಗಳ ಕುರಿತು ಜೆಪಿಸಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸದನದಲ್ಲಿ ಕೋಲಾಹಲ ಸೃಷ್ಟಿಸುತ್ತಿವೆ.

ಇದರ ಜತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹ ವಿಚಾರವೂ ಗದ್ದಲ ಉಂಟು ಮಾಡಿದೆ. ಇದರಿಂದ ಸಂಸತ್ತು ಉಭಯ ಸದನಗಳು ಹಲವು ಬಾರಿ ಮುಂದೂಡಿಕೆಯಾಗಿವೆ. ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಯಾವುದೇ ಚರ್ಚೆ ಇಲ್ಲದೆ ಬಜೆಟ್ ಅನುಮೋದನೆಯಾಗಿದೆ. ಅಲ್ಲದೆ ಹಲವು ಮಸೂದೆಗಳು ಮಂಡನೆಯಾಗಿವೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಬಂದಿದ್ದರು. ಟಿಎಂಸಿ ಸದಸ್ಯರು ಕಪ್ಪು ಮುಖವಾಡಗಳನ್ನು ಧರಿಸಿದ್ದರು. ಪ್ರತಿಪಕ್ಷಗಳ ಸಂಸದರು ಕಲಾಪ ಆರಂಭವಾಗುತ್ತಿದ್ದಂತೆ ಚರ್ಚೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಕೂಡಲೇ ಧನಕರ್ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಪ್ರಧಾನಿ ವಿರುದ್ಧ ಹೇಳಿಕೆಗೆ ಕಾಂಗ್ರೆಸ್‌ನ ಸಚಿನ್‌ ಚೌಧರಿ ವಿರುದ್ಧ ಪ್ರಕರಣ

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆಯ ಸಂಕೇತವಾಗಿ ಪ್ರತಿಪಕ್ಷಗಳ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮೋದಿ-ಅದಾನಿ ಭಾಯ್-ಭಾಯ್ ಎಂದು ಘೋಷಣೆ ಕೂಗಿದರು.

ಸಂಸತ್ತು ಬಜೆಟ್ ಅಧಿವೇಶನದ ಎರಡನೇ ಭಾಗವು ಏ.6ರ ವರೆಗೆ ನಡೆಯಲಿದೆ.

3fc71c934f523957b32c0dd3d0e48cbcbd9cdd59923741ff837bb405a2b7ba0f?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...