ಎಸ್‌ಐಆರ್‌ಗೆ ಪ್ರವೇಶ ಪತ್ರ, ತೇರ್ಗಡೆ ಪ್ರಮಾಣಪತ್ರವೂ ಗುರುತಿನ ಚೀಟಿ: ಸುಪ್ರೀಂ ಕೋರ್ಟ್

Date:

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‌ಐಆರ್) ವೇಳೆ ಗುರುತಿನ ಚೀಟಿಯಾಗಿ 10ನೇ ತರಗತಿ ಪರೀಕ್ಷೆಯ ಪ್ರವೇಶಪತ್ರ ಹಾಗೂ ತೇರ್ಗಡೆ ಪ್ರಮಾಣಪತ್ರವನ್ನು ಪೂರಕ ದಾಖಲೆಯಾಗಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಈ ವಿಚಾರದ ಕುರಿತಂತೆ ಹಿರಿಯ ವಕೀಲ ಡಿ.ಎಸ್‌. ನಾಯ್ಡು ಅವರು ಪ್ರಸ್ತಾಪಿಸುತ್ತಿದ್ದಂತಯೇ, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಹಾಗೂ ವಿಪುಲ್‌ ಪಂಚೋಲಿ ನೇತೃತ್ವದ ನ್ಯಾಯಪೀಠವು ಈ ಆದೇಶ ಹೊರಡಿಸಿದೆ. ‌

ಪರೀಕ್ಷಾ ಪ್ರವೇಶ ಪತ್ರವನ್ನು ಸ್ವತಂತ್ರ ಗುರುತಿನ ಚೀಟಿಯಾಗಿ ಮಾನ್ಯ ಮಾಡಲು ಅವಕಾಶ ನೀಡಲಾಗುತ್ತದೆಯೇ ಎಂಬುದರ ಕುರಿತು ವಕೀಲರು ತಮ್ಮ ಕಳವಳ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ನ್ಯಾಯಪೀಠ, ಪ್ರವೇಶ ಪತ್ರವನ್ನು ಪೂರಕ ದಾಖಲೆಯಾಗಿ ಪರಿಗಣಿಸಬೇಕು ಎಂದು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರೀಮಿಯಂ ಲೇಖನ | ಜಾಗತಿಕ ಆರ್ಥಿಕತೆಯ ಅವಳಿ ಅಸ್ತ್ರಗಳು: ಐಎಂಎಫ್, ವಿಶ್ವಬ್ಯಾಂಕ್‌ನ ಒಳಹೊರಗು

‘2026ರ ಫೆಬ್ರುವರಿ 3ರಂದು ಆದೇಶದಲ್ಲಿ ಪ್ಯಾರಾ 3 ರಲ್ಲಿ ಉಲ್ಲೇಖಿಸಲಾದ ದಾಖಲೆಗಳು ಇದುವರೆಗೂ ಅಪ್‌ಲೋಡ್‌ ಮಾಡಿಲ್ಲ. ಫೆಬ್ರುವರಿ 15ರವರೆಗೆ ಸ್ವೀಕರಿಸಲಾದ ಅರ್ಜಿಗಳು ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಗುರುವಾರ ಸಂಜೆ 5 ಗಂಟೆ ಒಳಗಾಗಿ ನ್ಯಾಯಾಂಗ ಅಧಿಕಾರಿಗಳ ಮುಂದೆ ಸಲ್ಲಿಸಬೇಕು. ಜನನ ಪ್ರಮಾಣಪತ್ರವಾಗಿ ಪ್ರವೇಶಪತ್ರದ ಜೊತೆಗೆ ತೇರ್ಗಡೆ ಪ್ರಮಾಣಪತ್ರವನ್ನು ಸಲ್ಲಿಸಬಹುದಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಹೆಚ್ಚುವರಿ ನ್ಯಾಯಾಧೀಶರ ನಿಯೋಜನೆ: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಲ್ಲಿ 80 ಲಕ್ಷ ಮತದಾರರ ಪಟ್ಟಿ ಅಳಿಸುವಿಕೆಯಿಂದ ಎದುರಿಸುತ್ತಿರುವ ಆಕ್ಷೇಪಣೆಗಳನ್ನು ಸಂಗ್ರಹಿಸಲು ಮಂಗಳವಾರ ಪಶ್ಚಿಮ ಬಂಗಾಳದ 250 ಮಂದಿ ನ್ಯಾಯಾಧೀಶರ ನಿಯೋಜನೆ ಜೊತೆಗೆ ಜಾರ್ಖಂಡ್‌ ಹಾಗೂ ಒಡಿಶಾದ ನ್ಯಾಯಾಧೀಶರನ್ನು ಹೆಚ್ಚುವರಿಯಾಗಿ ನಿಯೋಜಿಸಲು ಸುಪ್ರೀಂಕೋರ್ಟ್‌ ಸಮ್ಮತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...