ಜಾಹೀರಾತು ಪ್ರಕರಣ | ರಾಮ್‌ದೇವ್‌ಗೆ ಸುಪ್ರೀಂ ಸಮನ್ಸ್ ಬೆನ್ನಲ್ಲೇ ಕ್ಷಮೆಯಾಚಿಸಿದ ಪತಂಜಲಿ

Date:

ಆಧುನಿಕ ವೈದ್ಯಕೀಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವ ಪತಂಜಲಿ ಆಯುರ್ವೇದ ಸಂಸ್ಥೆ ಹಾಗೂ ಸಂಸ್ಥೆಯ ಸಹ-ಸಂಸ್ಥಾಪಕ, ಯೋಗ ಗುರು ರಾಮ್‌ ದೇವ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ. ಇದಾದ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ನಲ್ಲಿ ಪತಂಜಲಿ ಕ್ಷಮೆಯಾಚಿಸಿದೆ.

ದಾರಿತಪ್ಪಿಸುವ ಜಾಹೀರಾತುಗಳ ಮೇಲಿನ ನೋಟಿಸ್‌ಗೆ ಪ್ರತಿಕ್ರಿಯಿಸದ ಪತಂಜಲಿ ಆಯುರ್ವೇದ ಸಂಸ್ಥೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿತ್ತು. ಇದಾದ ಒಂದು ದಿನದ ನಂತರ, ಅಫಿಡವಿಟ್ ಸಲ್ಲಿಸಿರುವ ಪತಂಜಲಿ ಕ್ಷಮೆಯಾಚಿಸಿದೆ.

ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಏಪ್ರಿಲ್ 2 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬಾಲಕೃಷ್ಣ ಮತ್ತು ರಾಮ್‌ದೇವ್‌ಗೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ದಾರಿ ತಪ್ಪಿಸುವ ಜಾಹೀರಾತು ನಿಲ್ಲಿಸದಿದ್ದರೆ ಭಾರೀ ದಂಡ: ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಎಚ್ಚರಿಕೆ

ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಾಲಕೃಷ್ಣ ಅವರು ಕಾನೂನು ಸುವ್ಯವಸ್ಥೆ ಮೇಲೆ ತಾನು ಗೌರವ ಹೊಂದಿರುವುದಾಗಿ ಹೇಳಿದ್ದು ಬೇಷರತ್ತಾಗಿ ಕ್ಷಮೆ ಕೇಳಿದ್ದಾರೆ. “ಭವಿಷ್ಯದಲ್ಲಿ ಅಂತಹ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಪತಂಜಲಿಯ “ಉತ್ಪನ್ನಗಳನ್ನು ಸೇವಿಸುವ ಮೂಲಕ ಆರೋಗ್ಯಕರ ಜೀವನ ನಡೆಸಲು ಈ ದೇಶದ ನಾಗರಿಕರನ್ನು ಉತ್ತೇಜಿಸುವುದು” ಮಾತ್ರ ಎಂದು ಬಾಲಕೃಷ್ಣ ತಿಳಿಸಿದ್ದಾರೆ. “ಪ್ರಾಚೀನ ಆಯುರ್ವೇದದ ಕುರಿತಾದ ಸಂಶೋಧನೆಯ ಬೆಂಬಲದೊಂದಿಗೆ ತಯಾರಿಸಲಾದ ಪತಂಜಲಿ ಉತ್ಪನ್ನಗಳನ್ನು ಸೇವಿಸಿ ಆರೋಗ್ಯಕರ ಜೀವನ ನಡೆಸಿ ಎಂದು ಜನರಿಗೆ ಸಲಹೆ ನೀಡುವ ಉದ್ದೇಶವಷ್ಟೇ ನಮ್ಮದು” ಎಂದಿದ್ದಾರೆ.

ರಾಮ್‌ದೇವ್ ಮತ್ತು ಬಾಲಕೃಷ್ಣ 2006 ರಲ್ಲಿ ಸ್ಥಾಪಿಸಿದ ಪತಂಜಲಿ ಆಯುರ್ವೇದ ಬಹುರಾಷ್ಟ್ರೀಯ ಕಂಪನಿಯಾಗಿದೆ. ಇದು ಆಯುರ್ವೇದ ಔಷಧದಿಂದ ಹಿಡಿದು ಸೌಂದರ್ಯವರ್ಧಕ, ಆಹಾರ ಪದಾರ್ಥಗಳವರೆಗೆ ಉತ್ಪನ್ನಗಳನ್ನು ತಯಾರಿಸುತ್ತದೆ. ತಮ್ಮ ಉತ್ಪನ್ನಗಳ ಪರಿಣಾಮಕಾರಿತ್ವದ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತು ನೀಡಿ ಸಂಸ್ಥೆ ಕೋರ್ಟ್ ಛಾಟಿಯೇಟಿಗೆ ಗುರಿಯಾಗಿದೆ.

ಮಂಗಳವಾರ, ಸುಪ್ರೀಂ ಕೋರ್ಟ್ ಪತಂಜಲಿ ಸಂಸ್ಥೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ರಾಮ್‌ದೇವ್ ಮತ್ತು ಬಾಲಕೃಷ್ಣ ಸುಪ್ರೀಂ ಕೋರ್ಟ್‌ ಮುಂದೆ ಹಾಜರಾಗುವಂತೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...