ಅಫ್ಘಾನ್‌ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಪತ್ರಿಕಾಗೋಷ್ಠಿಗೆ ಮಹಿಳೆಯರಿಗೆ ನಿಷೇಧ: ವ್ಯಾಪಕ ವಿರೋಧ

Date:

ಭಾರತಕ್ಕೆ ಮಹತ್ವದ ಆರು ದಿನಗಳ ಪ್ರವಾಸ ಕೈಗೊಂಡಿರುವ ಅಫ್ಘಾನಿಸ್ತಾನದ ಪ್ರಭಾರ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತೆಯರಿಗೆ ಭಾಗವಹಿಸಲು ಅನುಮತಿ ನಿರಾಕರಿಸಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ದಿ ಇಂಡಿಪೆಂಡೆಂಟ್ ಪತ್ರಿಕೆಯ ವರದಿಗಾರ್ತಿ ಹಾಗೂ ಪ್ರಮುಖ ಸುದ್ದಿವಾಹಿನಿಗಳ ಹಿರಿಯ ವರದಿಗಾರ್ತಿಯರು ಸೇರಿದಂತೆ ಮಹಿಳಾ ಪತ್ರಕರ್ತೆಯರಿಗೆ ಪತ್ರಿಕಾಗೋಷ್ಠಿಗೆ ಪ್ರವೇಶ ನಿರಾಕರಿಸಲಾಗಿತ್ತು. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಿದ ಬಳಿಕ ಮುತ್ತಾಕಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಅಫ್ಘಾನ್‌ನ ಪ್ರಭಾರ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಗೆ ಮಹಿಳಾ ಪತ್ರಕರ್ತೆಯರ ನಿಷೇಧವನ್ನು ಪತ್ರಕರ್ತರು ಖಂಡಿಸಿದ್ದಾರೆ. ತಾಲಿಬಾನ್‌ನ ಸ್ತ್ರೀವಿರೋಧಿ ನಿಲುವಿನ ಪ್ರತಿಫಲನ ಇದಾಗಿದೆಯೆಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಡಿಕಲ್‌ ಮಾಫಿಯಾಗೆ ಅಮಾಯಕ ಮಕ್ಕಳು ಬಲಿ; ಸರ್ಕಾರಗಳೇ ಜವಾಬ್ದಾರಿ

ದೇಶದಲ್ಲಿ ಇಂತಹ ತಾರತಮ್ಯವಾದಿ ನೀತಿಗಳಿಗೆ ದೇಶದಲ್ಲಿ ಅವಕಾಶ ನೀಡಿದ್ದಕ್ಕಾಗಿ ಭಾರತ ಸರಕಾರವನ್ನು ಕೂಡಾ ಪತ್ರಕರ್ತರು ಖಂಡಿಸಿದ್ದಾರೆ.

‘‘ಭಾರತ ಸರಕಾರದ ಮೂಗಿನ ನೇರದಲ್ಲೇ, ದೇಶದ ರಾಜಧಾನಿಯ ಹೃದಯಭಾಗದಲ್ಲಿ ಅಫ್ಘಾನ್ ವಿದೇಶಾಂಗ ಸಚಿವರ ಮುತ್ತಾಕಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು, ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಹೊರಗಿಟ್ಟಿದ್ದಾರೆ. ಇದಕ್ಕೆ ಅವಕಾಶ ನೀಡಲು ಹೇಗೆ ಸಾಧ್ಯ? ಇದಕ್ಕೆ ಯಾರು ಅನುಮೋದನೆ ನೀಡಿದರು?’’ ಎಂದು ಲೇಖಕಿ ಹಾಗೂ ಪತ್ರಕರ್ತೆ ನಯನಿಮಾ ಬಸು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...