ದೆಹಲಿ: ದೀಪಾವಳಿಯ ನಂತರ ಶ್ವಾಸಕೋಶಗಳಿಗೆ ತೀವ್ರ ಹಾನಿ ಮಾಡುವ ಕಣಗಳು ದಾಖಲೆ ಮಟ್ಟದಲ್ಲಿ ಏರಿಕೆ

Date:

ದೀಪಾವಳಿ ಹಬ್ಬದ ಒಂದು ದಿನದ ನಂತರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಮತ್ತು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಪಾಯವನ್ನುಂಟುಮಾಡುವ ಮಾಲಿನ್ಯಕಾರಕ ಕಣಗಳು ಕಳೆದ 24 ಗಂಟೆಗಳಲ್ಲಿ ಶೇ 140 ರಷ್ಟು ಏರಿಕೆ ಕಂಡಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ವರದಿ ತಿಳಿಸಿದೆ.

ಪಿಎಂ 2.5 ಕಣವು ಗಾಳಿಯಲ್ಲಿರುವ ಎಲ್ಲ ಕಣಗಳಲ್ಲಿ ಅತ್ಯಂತ ಹಾನಿಕಾರಕವಾಗಿದ್ದು ಬೆಳಗ್ಗೆ 7 ಗಂಟೆಗೆ ಗಂಟೆಗೆ ಸರಾಸರಿ 200.8 ರಷ್ಟಿತ್ತು. ನ.12 ರಂದು ಬೆಳಗ್ಗೆ 83.5 ರಷ್ಟು ದಾಖಲಾಗಿತ್ತು.

ಐಟಿಒ, ದೆಹಲಿ ವಿಮಾನ ನಿಲ್ದಾಣ ಪ್ರದೇಶ ಸೇರಿದಂತೆ ಹೆಚ್ಚಿನ ಸ್ಥಳಗಳಲ್ಲಿ ಪಿಎಂ 2.5 ಮತ್ತು ಪಿಎಂ 10 ಮಾಲಿನ್ಯಕಾರಕ ಕಣಗಳು 500 ರಷ್ಟು ತಲುಪಿದೆ. ಲಜಪತ್ ನಗರ್ ಮತ್ತು ಜವಾಹರಲಾಲ್ ನೆಹರು ಸ್ಟೇಡಿಯಂ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಕ್ಯೂಐ 900 ಕ್ಕಿಂತ ಹೆಚ್ಚು ವರದಿಯಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳಲ್ಲಿ ತೋರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 7 ಸಾವು

ಗಾಳಿಯ ಗುಣಮಟ್ಟ ಸೂಚ್ಯಂಕವನ್ನು (ಎಕ್ಯೂಐ) ಗಾಳಿಯಲ್ಲಿರುವ ಆರು ಕಣಗಳು ಮತ್ತು ಅನಿಲ ರೂಪದ ಕಣಗಳಿಂದ ಪಡೆಯಲಾಗಿದೆ. ಇವುಗಳಲ್ಲಿ ಪಿಎಂ 2.5 ಮುಖ್ಯ ಅಂಶವಾಗಿದ್ದು ಅದು ಮೂಗು ಮತ್ತು ಗಂಟಲಿನ ತಡೆಗೋಡೆಯನ್ನು ದಾಟಿ ಶ್ವಾಸಕೋಶಕ್ಕೆ ಸೇರಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಪಿಎಂ 2.5 ಮತ್ತು ಸಣ್ಣ ಕಣಗಳು ಶ್ವಾಸಕೋಶಗಳು ಮತ್ತು ದೇಹದ ಉಳಿದ ಭಾಗಗಳನ್ನು ಹಾನಿಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ವೈದ್ಯರು ಹೇಳುತ್ತಾರೆ.

ಸಾಮಾನ್ಯವಾಗಿ ಎಕ್ಯೂಐ ಅನ್ನು ಶೂನ್ಯದಿಂದ 50 ರ ನಡುವೆ ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತ್ಯಂತ ಕಳಪೆ’, 401 ರಿಂದ 450 ‘ತೀವ್ರ’ ಮತ್ತು 450 ಕ್ಕಿಂತ ಹೆಚ್ಚಿನದನ್ನು ಗಂಭಿರ ಪರಿಣಾಮ ಎಂದು ಪರಿಗಣಿಸಲಾಗುತ್ತದೆ.

ವಿಶ್ವದ ಅತ್ಯಂತ ಕೆಟ್ಟ ಮಾಲಿನ್ಯ ನಗರಗಳಲ್ಲಿ ದೆಹಲಿ ಸೇರಿದಂತೆ ಭಾರತದ ಮೂರು ನಗರಗಳು ಮೊದಲು ಹತ್ತು ಸ್ಥಾನ ಪಡೆದಿವೆ. ಮೊದಲ ಸ್ಥಾನದಲ್ಲಿ ದೆಹಲಿ, ಕೋಲ್ಕತ್ತಾ ನಾಲ್ಕನೇ ಸ್ಥಾನ ಹಾಗೂ ಮುಂಬೈ ಎಂಟನೇ ಸ್ಥಾನದಲ್ಲಿದೆ.

ಸುಪ್ರೀಂ ಕೋರ್ಟ್ ಪ್ರತಿ ವರ್ಷವೂ ಭಾರತದಲ್ಲಿ ಪಟಾಕಿಗಳ ಮೇಲೆ ನಿಷೇಧವನ್ನು ಹೇರುತ್ತದೆ. ಆದರೆ ಅಪರೂಪವಾಗಿ ಮಾತ್ರ ರಾಜ್ಯ ಸರ್ಕಾರಗಳು ನಿಷೇಧವನ್ನು ಜಾರಿಗೊಳಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...