ಗುಜರಾತ್ | ನಕಲಿ ನ್ಯಾಯಾಲಯದ ನ್ಯಾಯಾಧೀಶನನ್ನು ಬಂಧಿಸಿದ ಪೊಲೀಸರು

Date:

ಗಾಂಧಿನಗರದಲ್ಲಿ ನಕಲಿ ಕೋರ್ಟ್ ಸ್ಥಾಪಿಸಿ, ನ್ಯಾಯಾಧೀಶನಂತೆ ನಟಿಸಿ ಹಲವು ನಕಲಿ ಆದೇಶಗಳನ್ನು ಹೊರಡಿಸಿದ್ದ ನಕಲಿ ನ್ಯಾಯಾಧೀಶನನ್ನು ಪೊಲೀಸರು ಬಂಧಿಸಿದ್ದಾರೆ.

ಮೋರಿಸ್ ಸ್ಯಾಮ್ಯುಯೆಲ್ ಎಂಬಾತ ಬಂಧಿತ ಆರೋಪಿ. ಈತ ನಕಲಿ ನ್ಯಾಯಾಲಯ ಸೃಷ್ಟಿಸಿ, 2019ರಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಕಕ್ಷಿದಾರನ ಪರವಾಗಿ ಪರವಾಗಿ ಆದೇಶವನ್ನು ನೀಡಿದ್ದಾನೆ. ಈ ನಕಲಿ ನ್ಯಾಯಾಲಯ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಭೂ ವಿವಾದಕ್ಕೆ ಸಂಬಂಧಿಸಿ ಬಾಕಿ ಇರುವ ಪ್ರಕರಣದಲ್ಲಿ ಕೆಲವು ಜನರನ್ನು ಬಲೆಗೆ ಬೀಳಿಸುತ್ತಿದ್ದ ಪ್ರಕರಣವನ್ನು ನಿಭಾಯಿಸಲು ಕಕ್ಷಿದಾರರಿಂದ ನಿರ್ದಿಷ್ಟ ಮೊತ್ತವನ್ನು ಪಡೆಯುತ್ತಿದ್ದ ಸ್ಯಾಮ್ಯುಯೆಲ್ ಮೊದಲು ನ್ಯಾಯಾಲಯದಿಂದ ನೇಮಕಗೊಂಡ ಅಧಿಕೃತ ಮಧ್ಯಸ್ಥಗಾರನಾಗಿ ತನ್ನನ್ನು ತಾನು ಪರಿಚಯಿಸಿಕೊಳ್ಳುತ್ತಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದಂತೆ ವಿನ್ಯಾಸಗೊಳಿಸಲಾದ ಗಾಂಧಿನಗರ ಮೂಲದ ತನ್ನ ಕಚೇರಿಗೆ ತನ್ನ ಕಕ್ಷಿದಾರರನ್ನು ಕರೆಸಿ ತನ್ನ ಕಕ್ಷಿದಾದಾರರಿಗೆ ಅನುಕೂಲವಾಗುವ ರೀತಿ ಆದೇಶವನ್ನು ನೀಡಿದ್ದಾನೆ. ಆತನ ಸಹಚರರು ನ್ಯಾಯಾಲಯದ ಸಿಬ್ಬಂದಿ ಅಥವಾ ವಕೀಲರಂತೆ ಕಲಾಪದಲ್ಲಿ ಭಾಗವಹಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

2019ರಲ್ಲಿ ಸ್ಯಾಮ್ಯುಯಲ್ ನಕಲಿ ನ್ಯಾಯಾಲಯ ಸೃಷ್ಟಿಸಿ ತನ್ನ ಕಕ್ಷಿದಾರರ ಪರವಾಗಿ ಆದೇಶವನ್ನು ಹೊರಡಿಸಿದ್ದ ಈ ಪ್ರಕರಣವು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಸರ್ಕಾರಿ ಜಮೀನಿಗೆ ಸಂಬಂಧಿಸಿತ್ತು. ಪಾಲಿ ಪ್ರದೇಶದಲ್ಲಿನ ಈ ಜಮೀನನ್ನು ತನ್ನ ಕಕ್ಷಿದಾರನಿಗೆ ಆರೋಪಿ ನೀಡಿದ್ದ ಸ್ಯಾಮ್ಯುಯೆಲ್ ಸರಕಾರದಿಂದ ನೇಮಿತ ಅಧಿಕೃತ ಮಧ್ಯಸ್ಥಗಾರ” ಎಂದು ಹೇಳಿಕೊಂಡು ನ್ಯಾಯಾಲಯದ ಕಲಾಪ ಆರಂಭಿಸಿ ತನ್ನ ಕಕ್ಷಿದಾರನ ಪರವಾಗಿ ಆದೇಶವನ್ನು ಹೊರಡಿಸಿದ್ದಾನೆ.

ತನ್ನ ಆದೇಶವನ್ನು ಜಾರಿಗೆ ತರಲು ಸ್ಯಾಮ್ಯುಯಲ್ ಮತ್ತೋರ್ವ ವಕೀಲನ ಮೂಲಕ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾನೆ ಮತ್ತು ಆದೇಶದ ಪ್ರತಿಯನ್ನು ಈ ವೇಳೆ ಲಗತ್ತಿಸಿದ್ದಾನೆ. ಆದರೆ, ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ಅವರು ಇದು ನಕಲಿ ಆದೇಶ ಎಂದು ಪತ್ತೆ ಹಚ್ಚಿ ಕಾರಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಹಿಂದೆ ಗುಜರಾತ್‌ನ ಮಾರ್ಬಿ ಜಿಲ್ಲೆಯಲ್ಲಿರುವ ಅಸಲಿ ಟೋಲ್ ಪ್ಲಾಜಾವನ್ನು ತಪ್ಪಿಸಿ, ಅದು ವಿಧಿಸುವ ನೈಜ ರಸ್ತೆ ಸುಂಕಕಿಂತಲೂ ಕಡಿಮೆ ದರದ ಸುಂಕ ವಿಧಿಸಿ ಖಾಸಗಿ ರಸ್ತೆಯ ಮೂಲಕ ಸಂಚರಿಸಲು ನಕಲಿ ಟೋಲ್ ಪ್ಲಾಜಾ ಮೂಲಕ ಅವಕಾಶ ಮಾಡಿಕೊಡುತ್ತಿದ್ದ ಆರೋಪದಡಿ ಗುಜರಾತ್ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ನಕಲಿ ಟೋಲ್ ಪ್ಲಾಜಾ ಮೂಲಕ ರೂ. 75 ಕೋಟಿಗೂ ಹೆಚ್ಚು ಮೊತ್ತವನ್ನು ವಾಹನಗಳಿಂದ ವಸೂಲಿ ಮಾಡಿರುವ ಈ ಪ್ರಕರಣವು ಸರ್ಕಾರವು ಮುಜುಗರಕ್ಕೀಡು ಮಾಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...