ಮುಂಗಾರು ಅಧಿವೇಶನ: ಇಂದು ಸಂಸತ್ತಿನಲ್ಲಿ ‘ಆಪರೇಷನ್‌ ಸಿಂಧೂರ’ ಕುರಿತ ಚರ್ಚೆ

Date:

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪುನರಾರಂಭ ಆಗಲಿದ್ದು, ಲೋಕಸಭೆಯಲ್ಲಿ ‘ಆಪರೇಷನ್‌ ಸಿಂಧೂರ’ ಕುರಿತು ಕಾವೇರಿದ ಚರ್ಚೆ ನಡೆಯಲಿದೆ.

ವಿರೋಧ ಪಕ್ಷಗಳು ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತೂ ಧ್ವನಿಯೆತ್ತುವ ನಿರೀಕ್ಷೆಗಳಿವೆ.

ರಾಜ್ಯಸಭೆಯಲ್ಲಿ ‘ಆಪರೇಷನ್‌ ಸಿಂಧೂರ’ ಕುರಿತ ಮಂಗಳವಾರ ಚರ್ಚೆಗೆ 16 ಗಂಟೆಗಳ ಕಾಲವನ್ನು ಮೀಸಲಿಡಲಾಗಿದೆ. ಎರಡೂ ಸದನಗಳಲ್ಲಿ ಈ ವಿಷಯ ಕುರಿತು ಚರ್ಚಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿರೋಧ ಪಕ್ಷಗಳು ತಮ್ಮ ಹಿರಿಯ ನಾಯಕರನ್ನು ಹೆಸರಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಭಯೋತ್ಪಾದನೆ ಮತ್ತು ‘ಆಪರೇಷನ್‌ ಸಿಂಧೂರ’ದ ಕುರಿತುಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲಿದ್ದಾರೆ. ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೂ ಮಧ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ರಾಜಕೀಯ ಮೈತ್ರಿ ಬಗ್ಗೆ ರಾಜ್‌ ಠಾಕ್ರೆ ಜೊತೆ ಉದ್ಧವ್ ಮಾತುಕತೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌, ತೃಣಮೂಲ ಕಾಂಗ್ರೆಸ್‌ನ ಅಭಿಷೇಕ್‌ ಬ್ಯಾನರ್ಜಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಸರ್ಕಾರವನ್ನು ಕಟ್ಟಿಹಾಕಲು ಪ್ರಯತ್ನಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸರ್ವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು, ಮೊದಲಿಗೆ, ‘ಆಪರೇಷನ್‌ ಸಿಂಧೂರ’ ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ವಿವರಿಸಲಿದ್ದಾರೆ. ಭಾರತ– ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ, ಕದನ ವಿರಾಮ ಮತ್ತು ಸಂಘರ್ಷ ಶಮನಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಹಿಸಿದ ಪಾತ್ರದ ಕುರಿತು ಸದನದಲ್ಲಿ ಹೇಳುವ ಸಾಧ್ಯತೆಗಳಿವೆ. ಸೇನಾ ಸಂಘರ್ಷದಲ್ಲಿ ಭಾರತ ಕಳೆದುಕೊಂಡ ಯುದ್ಧ ವಿಮಾನಗಳ ವಿವರಗಳನ್ನು ರಕ್ಷಣಾ ಸಚಿವರು ನೀಡುತ್ತಾರೆಯೇ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.

ಸದನದಲ್ಲಿ ಚರ್ಚೆಯ ವೇಳೆ ತನ್ನ ಕಾರ್ಯತಂತ್ರ ಹೇಗಿರಬೇಕು ಎಂಬುದನ್ನು ಅಂತಿಮಗೊಳಿಸಲು ವಿರೋಧ ಪಕ್ಷಗಳ ‘ಇಂಡಿಯಾ’ ಕೂಟವು ಇಂದು ಅಧಿವೇಶನಕ್ಕೂ ಮುನ್ನ ಸಭೆ ನಡೆಸಲಿದೆ ಎಂದು ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...