ಪ್ರಧಾನಿ ಹುದ್ದೆಗೆ ಖರ್ಗೆ ಹೆಸರು ಪ್ರಸ್ತಾಪ: ಬಿಕ್ಕಟ್ಟು ನಿವಾರಣೆಗೆ ನಿತೀಶ್‌ಗೆ ರಾಹುಲ್ ಕರೆ

Date:

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಮತ್ತಷ್ಟು ಬಿಕ್ಕಟ್ಟುಗಳು ತಲೆದೋರಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಿಗೇ ಗುರುವಾರ ಸಂಜೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ.

ಆದರೆ, ರಾಹುಲ್ ಗಾಂಧಿ ಕರೆ ಮಾಡಿದಾಗ ಸಂಯುಕ್ತ ಜನತಾ ದಳದ ಮುಖ್ಯಸ್ಥರಾದ ನಿತೀಶ್ ಕುಮಾರ್ ಸಭೆಯೊಂದರಲ್ಲಿ ಮಗ್ನರಾಗಿದ್ದರು ಹಾಗೂ ನಿತೀಶ್ ಕುಮಾರ್ ಅವರು ವಿಶ್ರಾಂತರಾಗಿದ್ದಾಗ, ರಾಹುಲ್ ಗಾಂಧಿ ಪಕ್ಷದ ಸಭೆಯೊಂದರಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಆದರೆ, ಈ ಇಬ್ಬರು ಇಂದು ಸಂಜೆ ಮಾತುಕತೆ ನಡೆಸುವ ನಿರೀಕ್ಷೆ ಇದೆ. ರಾಹುಲ್ ಗಾಂಧಿ ಕರೆಯ ವಿಷಯ ಏನು ಎಂಬುದು ಈವರೆಗೆ ತಿಳಿದು ಬಾರದಿದ್ದರೂ, ಬುಧವಾರ ನಡೆದ ಇಂಡಿಯಾ ಮೈತ್ರಿಕೂಟದ ಸಂಚಾಲಕ ಅಥವಾ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬಹುದು ಎಂಬ ನಿರೀಕ್ಷೆಯು ಬದಿಗೆ ಸರಿದಿರುವ ಕುರಿತು ಚರ್ಚೆಯಾಗಬಹುದು ಎಂಬ ಊಹಾಪೋಹಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ಈ ನಡುವೆ, ಇಂಡಿಯಾ ಮೈತ್ರಿಕೂಟಕ್ಕೆ ಆಗಬಹುದಾದ ಹಾನಿಯನ್ನು ಸರಿಪಡಿಸುವ ಭಾಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದರೆ, ರಾಹುಲ್ ಗಾಂಧಿ ಅವರು ಎನ್ಸಿಪಿ ವರಿಷ್ಠ ಶರದ್ ಪವಾರ್ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ಇಂಡಿಯಾ ಮೈತ್ರಿಕೂಟಕ್ಕೆ ಭಾರತ್ ಎಂದು ಮರು ನಾಮಕರಣ ಮಾಡುವ ಪ್ರಸ್ತಾವವೂ ಸೇರಿದಂತೆ ಬುಧವಾರ ನಡೆದ ಸಭೆಯಲ್ಲಿನ ಹಲವಾರು ವಿಷಯಗಳ ಕುರಿತು ನಿತೀಶ್ ಕುಮಾರ್ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ. ಈ ಪ್ರಸ್ತಾವವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡಾ ತಕ್ಷಣವೇ ತಳ್ಳಿ ಹಾಕಿದ್ದರು.

ನವೆಂಬರ್ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ತೋರಿರುವುದರಿಂದ ಮತದಾರರನ್ನು ಸೆಳೆಯುವ ಇಂಡಿಯಾ ಮೈತ್ರಿಕೂಟದ ಪ್ರಯತ್ನವೂ ನಿರರ್ಥಕವಾಗಿದೆ ಎಂದು ಕಾಂಗ್ರೆಸ್ ಪಕ್ಷವನ್ನು ನಿತೀಶ್  ತರಾಟೆಗೆ ತೆಗೆದುಕೊಂಡರು ಎಂಬ ಮಾತುಗಳೂ ಕೇಳಿ ಬಂದಿವೆ.

ಮೈತ್ರಿಕೂಟದ ಪಕ್ಷಗಳೊಂದಿಗೆ ಸೀಟು ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳನ್ನು ಎದುರಿಸಿದ ಕಾರಣಕ್ಕೆ ಕಾಂಗ್ರೆಸ್ ಪಕ್ಷವು ಛತ್ತೀಸ್ ಗಡ, ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಈ ಕುರಿತು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬಹಿರಂಗ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...