12 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಳಿಕ, ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

Date:

ಪತ್ನಿಯನ್ನು ಸುಟ್ಟು ಕೊಂದಿದ್ದಾನೆಂಬ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, 12 ವರ್ಷ ಜೈಲುವಾಸ ಅನುಭವಿಸಿದ ಬಳಿಕ, ತಮಿಳುನಾಡಿನ ವ್ಯಕ್ತಿಯನ್ನು ನಿರ್ದೋಷಿ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಆತನನ್ನು ಪ್ರಕರಣದಿಂದ ಖುಲಾಲೆಗೊಳಿಸಿ ತೀರ್ಪು ನೀಡಿದೆ. ಮೃತ ಮಹಿಳೆಯು ಸಾವನ್ನಪ್ಪಿದ ಸಮಯದಲ್ಲಿ ನೀಡಿದ್ದ ಹೇಳಿಕೆಗಳು ಅಸಂತವಾಗಿವೆ ಎಂಬ ಅಭಿಪ್ರಾಯದ ಮೇಲೆ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ.

ತಮಿಳುನಾಡಿನಲ್ಲಿ, ಸುಮಾರು 13 ವರ್ಷಗಳ ಹಿಂದೆ ಮಹಿಳೆಯೊಬ್ಬರು ಬೆಂಕಿ ಹೊತ್ತಿಕೊಂಡು ಸಾವನ್ನಪ್ಪಿದ್ದರು. ಗಂಭೀರ ಸುಟ್ಟ ಗಾಯಗಳಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಕೆ ಸಾವನ್ನಪ್ಪುವುದಕ್ಕೂ ಮುನ್ನ, ಹೇಳಿಕೆಗಳನ್ನು ನೀಡಿದ್ದರು. ಆದರೆ, ಆಕೆ ಎರಡು ರೀತಿಯ ಹೇಳಿಕೆ ನೀಡಿದ್ದರಿಂದ, ಮಹಿಳೆಯ ಹೇಳಿಕೆಯಲ್ಲಿ ವಿರೋಧಾಭಾಸಗಳಿದ್ದವು.

ಮೃತ ಮಹಿಳೆ ತನ್ನ ಮೊದಲ ಹೇಳಿಕೆಯಲ್ಲಿ ತನ್ನ ಗಂಡನ ವಿರುದ್ಧ ಯಾವುದೇ ಆರೋಪ ಮಾಡಿರಲಿಲ್ಲ. ಬದಲಾಗಿ, ಅಡುಗೆ ಮಾಡುವಾಗ ತನಗೆ ಅರಿವಿಲ್ಲದೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಿದ್ದರು. ಆದರೆ, ಎರಡನೇ ಹೇಳಿಕೆಯಲ್ಲಿ ತನ್ನ ಪತಿಯೇ ತಮಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಿದ್ದರು. ಇನ್ನು, ಆಕೆಗೆ ಚಿಕಿತ್ಸೆ ನೀಡಿದ್ದ ಮತ್ತು ಪರೀಕ್ಷಿಸಿದ್ದ ವೈದ್ಯರು, ‘ಮಹಿಳೆಯನ್ನು ಆಸ್ಪತ್ರೆಗೆ ಕರೆತಂದಾಗ ಆಕೆಯ ದೇಹದಿಂದ ಸೀಮೆಎಣ್ಣೆ ವಾಸನೆ ಬರುತ್ತಿರಲಿಲ್ಲ’ ಎಂದು ಹೇಳಿದ್ದರು. ವೈದ್ಯರ ವರದಿಯು ಮಹಿಳೆಯ 2ನೇ ಹೇಳಿಕೆಗೆ ಪೂರಕವಾಗಿ ಇರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಕಾರಣಕ್ಕಾಗಿ, ಮಹಿಳೆಯ ಹೇಳಿಕೆಗಳು ಅಸಂತವಾಗಿವೆ ಮತ್ತು ಆಕೆಯ ಪತಿಯೇ ಅಪರಾಧ ಎಸಗಿದ್ದಾನೆ ಎಂಬುದನ್ನು ಸಾಬೀತುಪಡಿಸಲು ಬೇರೆ ಯಾವುದೇ ಪುರಾವೆಗಳಿಲ್ಲ ಎಂಬುದನ್ನು ಗಮನಿಸಿದರುವ ಸುಪ್ರೀಂ ಕೋರ್ಟ್‌, ಆರೋಪಿ ಪತಿಯನ್ನು ಆರೋಪಮುಕ್ತ ಎಂದು ಘೋಷಿಸಿದೆ.

ಈ ವರದಿ ಓದಿದ್ದೀರಾ?: ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕು; ಲಿಂಗತ್ವ ಅಲ್ಪಸಂಖ್ಯಾತ ಮಗುವಿಗೆ ಇಲ್ಲವೇ?

“ಮೃತ ಮಹಿಳೆಯು ಮರಣಕ್ಕೂ ಮುನ್ನ ನೀಡಿದ ಹೇಳಿಕೆಗಳಲ್ಲಿ ಪ್ರಮುಖ ವಿರೋಧಾಭಾಸಗಳಿದ್ದರೆ ಮತ್ತು ಆರೋಪಿ ವಿರುದ್ಧ ಯಾವುದೇ ಗಣನೀಯ ಪುರಾವೆಗಳು ಇಲ್ಲದಿದ್ದರೆ ಶಿಕ್ಷೆ ವಿಧಿಸಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠ ಹೇಳಿದೆ.

“ಮರಣಕ್ಕೂ ಮುನ್ನ ನೀಡುವ ಹೇಳಿಕೆಗಳು ಅನುಮಾನದಿಂದ ಕೂಡಿದ್ದರೆ ಅಥವಾ ಅಸಮಂಜಸವಾಗಿದ್ದರೆ ಯಾವ ಹೇಳಿಕೆಯನ್ನು ನಂಬಬೇಕು ಎಂಬುದನ್ನು ಗುರುತಿಸಲು ನ್ಯಾಯಾಲಯಗಳು ದೃಢೀಕರಣ ಪುರಾವೆಗಳನ್ನು ಹುಡುಕಬೇಕಾಗುತ್ತದೆ. ಅಂತಹ ಪ್ರಕರಣಗಳಲ್ಲಿ ನ್ಯಾಯಾಲಯಗಳು ಎಚ್ಚರಿಕೆಯಿಂದ ವರ್ತಿಸಬೇಕಾಗುತ್ತದೆ. ಈ ಪ್ರಕರಣವೂ ಅಂತಹದ್ದೇ ಪ್ರಕರಣವಾಗಿದೆ. ಪ್ರಕರಣದಲ್ಲಿ, ಮೃತ ಮಹಿಳೆ ಎರಡು ಹೇಳಿಕೆಗಳನ್ನು ನೀಡಿದ್ದಾರೆ. ಎರಡೂ ವಿಭಿನ್ನವಾಗಿವೆ. ವಿಭಿನ್ನ ಹೇಳಿಕೆಗಳ ಆಧಾರದ ಮೇಲೆ ಮೇಲ್ಮನವಿದಾರನನ್ನು ತಪ್ಪಿತಸ್ಥನೆಂದು ಘೋಷಿಸಲಾಗದು” ಎಂದು ಪೀಠ ಹೇಳಿದೆ. ಮದ್ರಾಸ್ ಹೈಕೋರ್ಟ್‌ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದ್ದು, ಆರೋಪಿಯನ್ನು ಖುಲಾಸೆಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...