ದೆಹಲಿ | ಅಪ್ರಾಪ್ತೆಯ ಭೀಕರ ಕೊಲೆ; ಆಪ್‌–ಬಿಜೆಪಿ ನಡುವೆ ಕೆಸರೆರಚಾಟ

Date:

  • ಕಾನೂನು ಸುವ್ಯವಸ್ಥೆ ಎಲ್‌ಜಿ ಅವರ ಜವಾಬ್ದಾರಿ ಎಂದ ಕೇಜ್ರಿವಾಲ್
  • ಆರೋಪಿ ಲವ್ ಜಿಹಾದ್ ಸದಸ್ಯ ಎಂದು ಟೀಕಿಸಿದ ದೆಹಲಿ ಬಿಜೆಪಿ ಅಧ್ಯಕ್ಷ

ನವದೆಹಲಿಯಲ್ಲಿ 16 ವರ್ಷದ ಅಪ್ರಾಪ್ತೆಯನ್ನು 20 ವರ್ಷದ ಯುವಕನೊಬ್ಬ ಬರ್ಬರವಾಗಿ ಹತ್ಯೆಗೈದ ನಂತರ ದೆಹಲಿಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಬಿಜೆಪಿ ನಡುವೆ ಕೆಸರೆರಚಾಟ ಪ್ರಾರಂಭವಾಗಿದೆ.

ಅಪ್ರಾಪ್ತೆಯೊಂದಿಗೆ ವಿವಾಹೇತರ ಸಹಜೀವನ ಹೊಂದಿದ್ದ 20 ವರ್ಷ ಸಾಹಿಲ್ ಭಾನುವಾರ (ಮೇ 28) ಭೀಕರವಾಗಿ ಹತ್ಯೆ ಮಾಡಿರುವುದನ್ನು ಒಂದೆಡೆ, ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟು ಎಂದು ಆಪ್ ನಾಯಕರು ಲೆಫ್ಟಿನಂಟ್ ಗವರ್ನರ್ ಆಡಳಿತವನ್ನು ಟೀಕಿಸಿದರೆ, ಮತ್ತೊಂದೆಡೆ ಬಿಜೆಪಿ ಕೊಲೆಯನ್ನು ಲವ್‌ ಜಿಹಾದ್‌ ಎಂದು ಆರೋಪಿಸಿದೆ.

ಬಾಲಕಿ ಹಾಗೂ ಆರೋಪಿಯ ನಡುವೆ ಜಗಳ ಉಂಟಾದ ನಂತರ ಆರೋಪಿಯು ಬಾಲಕಿಯನ್ನು ಹತ್ಯೆ ಮಾಡಿದ್ದಾನೆ. ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, “ದೆಹಲಿಯಲ್ಲಿ ಹಾಡಹಗಲೇ ಬಹಿರಂಗವಾಗಿ ಅಪ್ರಾಪ್ತೆಯ ಹತ್ಯೆಯಾಗಿದೆ. ಇದು ತುಂಬಾ ದುಃಖಕರ ಮತ್ತು ದುರದೃಷ್ಟಕರ. ಅಪರಾಧಿಗಳು ನಿರ್ಭೀತರಾಗಿದ್ದಾರೆ, ಅವರಿಗೆ ಪೊಲೀಸರ ಭಯವಿಲ್ಲ. ಎಲ್‌ಜಿ ಸರ್, ಕಾನೂನು ಸುವ್ಯವಸ್ಥೆ ನಿಮ್ಮ ಜವಾಬ್ದಾರಿ, ಏನಾದರೂ ಮಾಡಿ. ದೆಹಲಿಯ ಜನರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | 40 ಶಂಕಿತ ಉಗ್ರರ ಹತ್ಯೆ

ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ದೆಹಲಿ ಸಚಿವೆ ಆತಿಶಿ ಮರ್ಲೆನಾ, “ಈ ಭೀಕರ ಹತ್ಯೆಯನ್ನು ನೋಡಿದ ನಂತರ ನನ್ನ ಎದೆ ಝಲ್‌ ಎಂದು ನಡುಗಿತು. ದೆಹಲಿಯ ಜನರನ್ನು ರಕ್ಷಿಸುವ ಜವಾಬ್ದಾರಿಯನ್ನು ಸಂವಿಧಾನವು ಅವರಿಗೆ ನೀಡಿದೆ ಎಂಬುದನ್ನು ನಾನು ದೆಹಲಿ ಎಲ್‌ಜಿ ಅವರಿಗೆ ನೆನಪಿಸಲು ಬಯಸುತ್ತೇನೆ. ಎಲ್‌ಜಿ ಅವರು ಸರ್ಕಾರದ ಕೆಲಸವನ್ನು ನಿಲ್ಲಿಸುವುದರಲ್ಲಿ ತಮ್ಮ ಸಮಯವನ್ನು ಕಳೆಯುತ್ತಾರೆ. ದೆಹಲಿಯ ಮಹಿಳೆಯರ ಸುರಕ್ಷತೆಯ ಬಗ್ಗೆ ಗಮನ ಹರಿಸಲು ನಾನು ಎಲ್‌ಜಿ ಅವರನ್ನು ಕೈಮುಗಿದು ವಿನಂತಿಸಿಕೊಳ್ಳುತ್ತೇನೆ. ಇಂದು ದೆಹಲಿಯಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ” ಎಂದಿದ್ದಾರೆ.

ಪೊಲೀಸರು ಬಿಡುಗಡೆ ಮಾಡಿರುವ ಆರೋಪಿಯ ಛಾಯಾಚಿತ್ರವನ್ನು ಉಲ್ಲೇಖಿಸಿ ಹೇಳಿಕೆ ನೀಡಿರುವ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವಾ, “ಆರೋಪಿಯ ವಸ್ತ್ರವಿನ್ಯಾಸ ಗಮನಿಸಿದರೆ ಆತ ಲವ್ ಜಿಹಾದ್ ಗುಂಪಿನ ಸದಸ್ಯ ಎಂದು ಸ್ಪಷ್ಟವಾಗಿ ತೋರಿಸುತ್ತದೆ. ಇದೊಂದು ಯೋಜಿತ ಹತ್ಯೆ. ಸ್ಥಳೀಯರ ಮಾಹಿತಿಯ ಪ್ರಕಾರ, ಸಾಹಿಲ್ ಸರ್ಫರಾಜ್ ಕೊಲೆಯಾದ ಹುಡುಗಿಗೆ ದೀರ್ಘಕಾಲದಿಂದ ಕಿರುಕುಳ ನೀಡುತ್ತಿದ್ದ. ಆತ ಆಕೆಯ ಸುತ್ತಮುತ್ತಲಿನ ಇತರ ಹುಡುಗಿಯರನ್ನು ಎಚ್ಚರಿಸುವ ಸಲುವಾಗಿ ಕೊಲೆ ಮಾಡಿದ್ದಾನೆ. ದೆಹಲಿಯ ಮುಖ್ಯಮಂತ್ರಿಗಳು ಕ್ರೂರ ಹತ್ಯೆಯನ್ನು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿರುವುದು ವಿಷಾದನೀಯ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...