SIR | ಮತದಾರರ ಪಟ್ಟಿಯಿಂದ ಮಹಿಳೆಯರ ಹೆಸರುಗಳೇ ಅಧಿಕ ಮಾಯ!

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗಿದೆ. ಕರ್ನಾಟಕ ಸೇರಿದಂತೆ ಇನ್ನೂ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ನಡೆಸಲು ಚುನಾವಣಾ ಆಯೋಗ ಸಿದ್ದತೆ ನಡೆಸುತ್ತಿದೆ. ಈ ನಡುವೆ ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಿಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಬಹುತೇಕ ರಾಜ್ಯಗಳಲ್ಲಿ ಮತದಾದರ ಪಟ್ಟಿಯಿಂದ ಅಧಿಕವಾಗಿ ಮಹಿಳೆಯರ ಹೆಸರುಗಳೇ ಮಾಯವಾಗಿದೆ.

ಬಿಹಾರದಲ್ಲಿ ಎಸ್‌ಐಆರ್ ಬಳಿಕ ಲಿಂಗಾನುಪಾತವು ಪ್ರತಿ 1,000 ಪುರುಷರಿಗೆ 907 ಮಹಿಳೆಯರಿಂದ 892ಕ್ಕೆ ಕುಸಿದಿದೆ. ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಅದರಲ್ಲಿ ಮಹಿಳೆಯರ ಸಂಖ್ಯೆ ಗಮನಾರ್ಹವಾಗಿದೆ. ಸರಿಸುಮಾರು 22.7 ಲಕ್ಷದಿಂದ 23 ಲಕ್ಷದಷ್ಟು ಮಹಿಳೆಯರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಇದನ್ನು ಓದಿದ್ದೀರಾ? ಎಸ್ಐಆರ್ ಪ್ರಕ್ರಿಯೆ ಮುಂದೂಡಲು ಕೋರಿ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಉತ್ತರ ಪ್ರದೇಶದಲ್ಲಿ ಒಟ್ಟು 2.89 ಕೋಟಿ ಮತದಾರರನ್ನು ಕೈಬಿಡಲಾಗಿದ್ದು, ಈ ಪೈಕಿ1.55 ಕೋಟಿಯಷ್ಟು ಮಹಿಳೆಯರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದರಿಂದಾಗಿ ರಾಜ್ಯದ ಮತದಾರರ ಲಿಂಗ ಅನುಪಾತವು ಪ್ರತಿ 1,000 ಪುರುಷರಿಗೆ 877 ರಿಂದ 824ಕ್ಕೆ ಇಳಿಕೆಯಾಗಿದೆ. ತಮಿಳುನಾಡಿನಲ್ಲಿ ಎಸ್‌ಐಆರ್ ಬಳಿಕ 74 ಲಕ್ಷ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ಸುಮಾರು 49.9 ಲಕ್ಷಕ್ಕೂ ಹೆಚ್ಚು ಮಹಿಳೆಯರ ಹೆಸರು. ಕರಡು ಪಟ್ಟಿಯಲ್ಲಿ ಪುರುಷರಿಗಿಂತ 2.6 ಲಕ್ಷ ಹೆಚ್ಚು ಮಹಿಳಾ ಮತದಾರರನ್ನು ಕೈಬಿಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಒಟ್ಟು 63.66 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಈ ಪೈಕಿ ಸರಿಸುಮಾರು 32.9 ಲಕ್ಷಕ್ಕೂ ಹೆಚ್ಚು ಮಹಿಳೆಯರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಕರಡು ಪಟ್ಟಿಯಿಂದ ಕೈಬಿಡಲಾದವರಲ್ಲಿ 53.6% ಮಹಿಳೆಯರು ಆಗಿದ್ದಾರೆ.

ನಿರ್ದಿಷ್ಟವಾಗಿ ಮಹಿಳೆಯರು ಮತ್ತು ವಲಸಿಗರೇ ಅಧಿಕವಾಗಿ ಮತದಾನದ ಹಕ್ಕನ್ನು ಕಳೆದುಕೊಂಡಿರುವುದು ಯಾಕೆ ಎಂಬ ವಿಚಾರದಲ್ಲಿ ಸದ್ಯ ತೀವ್ರ ಚರ್ಚೆ ನಡೆಯುತ್ತಿದೆ. ಈ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆದಿಲ್ಲ ಎಂದು ವಿರೋಧ ಪಕ್ಷಗಳ ಆರೋಪವಾದರೆ, ದಾಖಲೆಗಳು ನೀಡದ ಕಾರಣದಿಂದಾಗಿ ಮತದಾನದ ಪಟ್ಟಿಯಿಂದ ಹೊರಬಿದ್ದಿದ್ದಾರೆ ಎಂಬುದು ಚುನಾವಣಾ ಆಯೋಗ ಅಧಿಕಾರಿಗಳ ಆರೋಪವಾಗಿದೆ. ಇನ್ನು ಎಸ್‌ಐಆರ್ ಬಳಿಕ ಲಿಂಗಾನುಪಾತವೂ ತೀವ್ರ ಪ್ರಮಾಣದಲ್ಲಿ ಕುಸಿದಿದೆ.

ವಿರೋಧ ಪಕ್ಷಗಳು ಇದನ್ನು ಕೇವಲ ‘ತಪ್ಪು’ ಎಂದು ಕರೆಯದೆ, ಇದು ಆಡಳಿತಾರೂಢ ಪಕ್ಷದ ‘ವ್ಯವಸ್ಥಿತ ಸಂಚು’ ಎಂದು ಆರೋಪಿಸುತ್ತಿವೆ. ಕೆಲವು ನಿರ್ದಿಷ್ಟ ಸಮುದಾಯಗಳು ಮತ್ತು ವಿರೋಧ ಪಕ್ಷಗಳಿಗೆ ಬೆಂಬಲ ನೀಡುವ ಮತದಾರರು ಹೆಚ್ಚಿರುವ ಪ್ರದೇಶಗಳಲ್ಲಿ ಮಹಿಳೆಯರ ಹೆಸರುಗಳನ್ನು ಆಯ್ದು ತೆಗೆಯಲಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಪಕ್ಷೇತರವಾಗಿ ಆಲೋಚಿಸಿ ಮತ ಹಾಕುತ್ತಿರುವುದು ಹೆಚ್ಚಾಗಿದೆ. ಹಾಗಾಗಿ ಮಹಿಳೆಯರ ಶಕ್ತಿಯನ್ನು ಕುಗ್ಗಿಸಲು ಹೀಗೆ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ವಾದಿಸುತ್ತಿವೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಮತದಾರರ ಪಟ್ಟಿಯಿಂದ 42.74 ಲಕ್ಷ ಮತದಾರರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರು ತೆಗೆಯುವ ಮೊದಲು ಆ ವ್ಯಕ್ತಿಗೆ ಸರಿಯಾದ ನೋಟಿಸ್ ನೀಡಬೇಕು, ವಿಚಾರಣೆ ನಡೆಸಬೇಕು. ಆದರೆ ಹಲವೆಡೆ ನಿಯಮವನ್ನು ಗಾಳಿಗೆ ತೂರಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಯಾವ ಮಾನದಂಡದ ಮೇಲೆ ಇಷ್ಟು ದೊಡ್ಡ ಪ್ರಮಾಣದ ಮಹಿಳೆಯರ ಹೆಸರುಗಳನ್ನು ತೆಗೆಯಲಾಗಿದೆ ಎಂಬ ಪಟ್ಟಿಯನ್ನು ಬಹಿರಂಗಪಡಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಮುಖ್ಯವಾಗಿ ‘ಶಾಶ್ವತವಾಗಿ ಸ್ಥಳಾಂತರಗೊಂಡವರು’ ಎಂಬ ಕಾರಣ ನೀಡಿ ಕೈಬಿಡಲಾದವರಲ್ಲಿ ಶೇ.55ಕ್ಕೂ ಹೆಚ್ಚು ಮಂದಿ ಮಹಿಳೆಯರು. ಮದುವೆಯಾಗಿ ಬೇರೆ ಊರಿಗೆ ಹೋದಾಗ ಹಳೆಯ ವಿಳಾಸದಲ್ಲಿ ಹೆಸರು ಡಿಲೀಟ್ ಮಾಡಲಾಗುತ್ತದೆ. ಆದರೆ ಹೊಸ ವಿಳಾಸದಲ್ಲಿ ನೋಂದಣಿ ಸರಿಯಾಗಿ ನಡೆಯುತ್ತಿಲ್ಲ ಎಂಬ ಕಾರಣವನ್ನು ನೀಡಲಾಗುತ್ತಿದೆ. ಅದರಲ್ಲೂ 18 ರಿಂದ 40 ವರ್ಷದೊಳಗಿನ ಮಹಿಳೆಯರ ಹೆಸರುಗಳೇ ಹೆಚ್ಚಾಗಿ ಡಿಲೀಟ್ ಆಗುತ್ತಿರುವುದು ಆಘಾತಕಾರಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...