ಫಲಿತಾಂಶದ ನಂತರ ಸರ್ಕಾರ ಉಳಿಸಲು ಹೆಣಗಾಡುತ್ತಿರುವ ಮೋದಿ : ರಾಹುಲ್ ಗಾಂಧಿ

Date:

ಲೋಕಸಭೆ ಚುನಾವಣೆಯ ನಂತರ ನರೇಂದ್ರ ಮೋದಿ 3.0 ಸರ್ಕಾರ ಬಹುಮತ ಪಡೆಯಲು ವಿಫಲವಾಗಿದ್ದು, ಅಧಿಕಾರ ಉಳಿಸಿಕೊಳ್ಳಲು ಹೆಣಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಇಂಗ್ಲೆಂಡ್‌ನ ಫೈನಾನ್ಷಿಯಲ್‌ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಅವಕಾಶವನ್ನು ಗಾಳಿಗೆ ತೂರಲಾಗಿದೆ. ಭಾರತದ ರಾಜಕೀಯದಲ್ಲಿ ಸ್ಥಾನ ಪಲ್ಲಟಗಳು ನಡೆಯಲಿವೆ. ಸಂಖ್ಯೆಗಳನ್ನು ಗಮನಿಸಿದರೆ ಅವರು ತುಂಬ ದುರ್ಬಲವಾಗಿದ್ದಾರೆ. ಸಣ್ಣ ಅಡಚಣೆಯು ಸರ್ಕಾರವನ್ನು ಬೀಳಿಸಬಹುದು ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಬಳಗದಲ್ಲಿಯೇ ದೊಡ್ಡ ಅಸಮಾಧಾನವಿದ್ದು, ಪಕ್ಷಾಂತರವಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಅವರಲ್ಲಿ ನಮ್ಮ ಸಂಪರ್ಕದಲ್ಲಿರುವವರು ಇದ್ದಾರೆ. ಮೂಲತಃ ಒಂದು ಒಕ್ಕೂಟದಲ್ಲಿ ಇರುವವರು ಮತ್ತೊಂದು ಕಡೆ ಆಗಮಿಸಬಹುದು ಎಂದು ರಾಹುಲ್ ಗಾಂಧಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ

2024ರ ಲೋಕಸಭೆ ಚುನಾವಣೆಯಲ್ಲಿ 543 ಸ್ಥಾನಗಳ ಪೈಕಿ ಎನ್‌ಡಿಎ ಒಕ್ಕೂಟ 293 ಸ್ಥಾನಗಳಿಸಿದೆಯಾದರೂ ಬಿಜೆಪಿಗೆ ಬಹುಮತದ ಸಂಖ್ಯೆ 272 ಸ್ಥಾನ ದೊರಕದೆ 240ನ್ನು ಮಾತ್ರ ಗಳಿಸಿಕೊಂಡಿದೆ. ಇಂಡಿಯಾ ಮೈತ್ರಿಕೂಟ 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಈ ನಡುವೆ ಎರೆಡು ಕ್ಷೇತ್ರಗಳಲ್ಲಿ ಗೆಲುವುಗಳಿಸಿದ್ದ ರಾಹುಲ್ ಗಾಂಧಿ ಕೇರಳದಲ್ಲಿನ ವಯನಾಡ್ ಕ್ಷೇತ್ರವನ್ನು ತೆರವುಗೊಳಿಸಿ ಉತ್ತರ ಪ್ರದೇಶದಲ್ಲಿನ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್ ಬರೇಲಿಯನ್ನು ಉಳಿಸಿಕೊಳ್ಳಲಿದ್ದಾರೆ.

ರಾಹುಲ್ ಗಾಂಧಿ ತೆರವುಗೊಳಿಸಲಿರುವ ವಯನಾಡ್ ಲೋಕಸಭಾ ಕ್ಷೇತ್ರದಿಂದ ಅವರ ಸಹೋದರಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ. ಈ ಮೂಲಕ ಅವರು ಕೊನೆಗೂ ಚುನಾವಣಾ ರಾಜಕಾರಣಕ್ಕೆ ಪ್ರವೇಶ ಮಾಡಲಿದ್ದಾರೆ.

ನಿಯಮಗಳ ಪ್ರಕಾರ, ಜೂನ್ 4 ರಂದು ಹೊರಬಿದ್ದ ಲೋಕಸಭೆಯ ಫಲಿತಾಂಶದ 14 ದಿನಗಳಲ್ಲಿ ರಾಹುಲ್ ಗಾಂಧಿ ಒಂದು ಸ್ಥಾನವನ್ನು ಖಾಲಿ ಮಾಡಬೇಕಾಗಿತ್ತು. ಇದೀಗ ರಾಹುಲ್ ಗಾಂಧಿ ರಾಯ್‌ಬರೇಲಿಯಲ್ಲಿ ಉಳಿಯಲು ಆಯ್ಕೆ ಮಾಡಿಕೊಂಡಿರುವುದರಿಂದ, ಅವರ ಸಹೋದರಿ ಪ್ರಿಯಾಂಕಾ ಅವರು ತೆರವಾದ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...