ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ; ಹಲವರಿಗೆ ಗಾಯ

Date:

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಝೋಮಿ ಮತ್ತು ಹ್ಮಾರ್ ಜನಾಂಗದ ಜನರ ನಡುವೆ ಚುರಚಂದ್‌ಪುರ ಜಿಲ್ಲೆಯಲ್ಲಿ ಘರ್ಷಣೆ ನಡೆಸಿದೆ. ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ರಾತ್ರಿ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ. ಉಭಯ ಜನಾಂಗದ ಪ್ರಮುಖ ಸಮಿತಿಯ ಜೊತೆ ಮಾತುಕತೆ ನಡೆಸಿ ಶಾಂತಿ ಒಪ್ಪಂದ ನಡೆದ ಕೆಲವೇ ಗಂಟೆಗಳ ಬಳಿಕ ಈ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಅಧಿವೇಶನ ಆರಂಭ; ರಾಜ್ಯಸಭೆಯಲ್ಲಿಂದು ಮಣಿಪುರ ಬಜೆಟ್ ಚರ್ಚೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟದಲ್ಲಿದ್ದ ಝೋಮಿ ಪಡೆಯ ಧ್ವಜವನ್ನು ಕೆಲವು ಯುವಕರ ಗುಂಪು ಪ್ರಯತ್ನಿಸಿದಾಗ ಈ ಘರ್ಷಣೆ ನಡೆದಿದೆ. ಘರ್ಷಣೆ ಹೆಚ್ಚಾಗುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಭದ್ರತಾ ಸಿಬ್ಬಂದಿಗಳು ಅಶ್ರುವಾಯು ಪ್ರಯೋಗಿಸಿದ್ದಾರೆ ಮತ್ತು ಗುಂಪನ್ನು ಚದುರಿಸಲು ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುಮಾರು ಎರಡು ವರ್ಷಗಳ ಅವಧಿಯಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಸರ್ಕಾರವು ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲಾಗಿದೆ. ಇದಾದ ಬಳಿಕ ಪೊಲೀಸ್ ಶಸ್ತ್ರಾಗಾರದಿಂದಲೇ ಕದ್ದಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಸ್ತ್ರಾಸ್ತ್ರಗಳು ವಾಪಾಸ್ ಲಭಿಸಿಲ್ಲ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಪ್ರತ್ಯೇಕ ರಾಜ್ಯಕ್ಕೆ ಪಟ್ಟು ಹಿಡಿದ ಕುಕಿ ಸಮುದಾಯ

ಹಾಗೆಯೇ ಶಾಂತಿ ಒಪ್ಪಂದ ಮಾತುಕತೆಗಳನ್ನೂ ಕೂಡಾ ನಡೆಸಲಾಗುತ್ತಿದೆ. ಆದರೆ ಇನ್ನೂ ಕೂಡಾ ಹಿಂಸಾಚಾರವನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ನಿನ್ನೆ ನಡೆದ ಹಿಂಸಾಚಾರದಲ್ಲಿ ಕೆಲವರು ಗುಂಡು ಕೂಡಾ ಹಾರಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಯಾರು ಗುಂಡು ಹಾರಿಸಿದ್ದಾರೆ ಎಂಬುದು ಖಚಿತವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...