ಹಿಟ್ ಆ್ಯಂಡ್ ರನ್ ಪ್ರಕರಣ: 36 ಗಂಟೆಗಳಲ್ಲಿ ಭೇದಿಸಲು ಮಹಾರಾಷ್ಟ್ರ ಪೊಲೀಸರಿಗೆ ಸಹಾಯ ಮಾಡಿದ AI!

Date:

ಹಿಟ್ ಆ್ಯಂಡ್ ರನ್ ಪ್ರಕರಣವನ್ನು 36 ಗಂಟೆಗಳಲ್ಲಿ ಭೇದಿಸಲು ಕೃತಕ ಬುದ್ಧಿಮತ್ತೆ ಅಥವಾ AI ಮಹಾರಾಷ್ಟ್ರ ಪೊಲೀಸರಿಗೆ ಸಹಾಯ ಮಾಡಿದೆ. ನಾಗ್ಪುರದಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ತನ್ನ ಪತ್ನಿ ಮೇಲೆ ಹರಿದ ಟ್ರಕ್ ಮೇಲೆ ಇದ್ದ ಕೆಂಪು ಗುರುತು ಬಿಟ್ಟು ಬೇರೆ ಯಾವ ನೆನೆಪೂ ಪತಿಗೆ ಇರಲಿಲ್ಲ. ಇಂತಹ ಸಂದರ್ಭದಲ್ಲೂ 36 ಗಂಟೆಗಳಲ್ಲೇ ಪ್ರಕರಣ ಭೇದಿಸಲು AI ಸಹಾಯ ಮಾಡಿದೆ.

ಆಗಸ್ಟ್ 9ರಂದು ನಾಗ್ಪುರದಲ್ಲಿ ಟ್ರಕ್ ಒಂದು ಬೈಕ್‌ಗೆ ಡಿಕ್ಕಿ ಹೊಡೆದು ಸಾಗಿತ್ತು. ಈ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದು, ತನ್ನ ಪತ್ನಿಯ ಮೃತದೇಹವನ್ನು ಪತಿ ಬೈಕ್‌ಗೆ ಕಟ್ಟಿ ಮಧ್ಯಪ್ರದೇಶಕ್ಕೆ ಸಾಗಿದ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆಘಾತಕ್ಕೆ ಒಳಗಾಗಿದ್ದ ವ್ಯಕ್ತಿಗೆ ಅಪಘಾತದ ಕನಿಷ್ಠ ಮಾಹಿತಿಯನ್ನೂ ನೀಡಲು ಸಾಧ್ಯವಾಗಿಲ್ಲ. ಆದರೂ AI ಸಹಾಯದಿಂದ ನಾವು ಆರೋಪಿಯ ಪತ್ತೆಹಚ್ಚಲು ಸಾಧ್ಯವಾಗಿದೆ ಎಂದು ನಾಗ್ಪುರ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಪೊದ್ದಾರ್ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಹಿಟ್ ಆ್ಯಂಡ್ ರನ್ ಪ್ರಕರಣ | ಜ.17 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ಸಂಘ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಸ್ಪರ 15-20 ಕಿ.ಮೀ ದೂರದಲ್ಲಿರುವ ಮೂರು ಪ್ರತ್ಯೇಕ ಟೋಟ್‌ಗಳ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಎರಡು AI ಅಲ್ಗಾರಿದಮ್‌ಗಳನ್ನು ಬಳಸಿ ವಿಶ್ಲೇಷಿಸಿದೆವು. ಇವೆರಡೂ ಕಂಪ್ಯೂಟರ್ ವಿಷುಯಲ್ ಎಂಬ ತಂತ್ರಜ್ಞಾನವನ್ನು ಆಧರಿಸಿವೆ. ಮೊದಲ ಅಲ್ಗಾರಿದಮ್ ಮೂಲಕ ಕೆಂಪು ಗುರುತುಗಳನ್ನು ಹೊಂದಿರುವ ಟ್ರಕ್‌ಗಳನ್ನು ಗುರುತಿಸಲಾಗಿದೆ. ಹಾಗೆಯೇ ಎರಡನೆಯದು ಈ ಎಲ್ಲಾ ಟ್ರಕ್‌ಗಳ ಸರಾಸರಿ ವೇಗವನ್ನು ವಿಶ್ಲೇಷಿಸಿ ಯಾವ ಟ್ರಕ್ ಭಾಗಿಯಾಗಿರಬಹುದು ಎಂಬುದರ ಕುರಿತು ನಮಗೆ ಎಚ್ಚರಿಕೆ ನೀಡಲು ಸಾಧ್ಯವಾಗುವಂತೆ ಮಾಡಿದೆ” ಎಂದು ತಿಳಿಸಿದ್ದಾರೆ.

“ಇದರ ಆಧಾರದ ಮೇಲೆ ಒಂದು ಟ್ರಕ್ ಅನ್ನು ಗುರುತಿಸಿದ್ದು ನಾಗ್ಪುರ ಗ್ರಾಮೀಣ ಪೊಲೀಸರ ತಂಡವು ಆರೋಪಿಗಳನ್ನು ಬಂಧಿಸಿದೆ. ನಾಗ್ಪುರದಿಂದ ಸುಮಾರು 700 ಕಿ.ಮೀ ದೂರದಲ್ಲಿರುವ ಗ್ವಾಲಿಯರ್-ಕಾನ್ಪುರ್ ಹೆದ್ದಾರಿಯಲ್ಲಿ ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ನಾವು ಈಗ ಆರೋಪಿಗಳನ್ನು ಬಂಧಿಸಿದ್ದೇವೆ. AI ಬಳಸಿ 36 ಗಂಟೆಗಳಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣವನ್ನು ಭೇದಿಸಲಾಗಿದೆ” ಎಂದು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...