ರಜೆ ಘೋಷಿಸಿ ನಿರ್ಧಾರ ಬದಲಿಸಿದ ದೆಹಲಿಯ ಏಮ್ಸ್ ಆಸ್ಪತ್ರೆ

Date:

ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ ಆಸ್ಪತ್ರೆಯು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆಗಾಗಿ ಅರ್ಧ ದಿನ ರಜೆ ಘೋಷಿಸಿ ನಂತರ ತನ್ನ ನಿರ್ಧಾರ ಬದಲಿಸಿದೆ.

ಮೊದಲು ರಜೆ ಘೋಷಿಸಿದ್ದ ಆಸ್ಪತ್ರೆಯು ನಂತರ ತನ್ನ ನಿರ್ಧಾರ ಬದಲಿಸಿ ಪ್ರಕಟಣೆ ಹೊರಡಿಸಿದೆ. ಅನಾನುಕೂಲತೆ ತಡೆಗಟ್ಟುವ ಸಲುವಾಗಿ ರೋಗಿಗಳ ಆರೈಕೆಯನ್ನು ಸಲುಭಗೊಳಿಸಲು ಜನವರಿ 22ರ ದಿನದಂದು ಪೂರ್ವಾನುಮತಿ ಹೊಂದಿರುವ ರೋಗಿಗಳಿಗಾಗಿ ಆಸ್ಪತ್ರೆಯ ಹೊರ ರೋಗಿಯ ವಿಭಾಗವು ತೆರೆದಿರುತ್ತದೆ. ಇದರ ಜೊತೆ ಎಲ್ಲ ತುರ್ತು ಚಿಕಿತ್ಸಾ ಸೇವಾ ಕೇಂದ್ರಗಳು ಕೂಡ ಕಾರ್ಯಾಚರಣೆ ನಡೆಸುತ್ತವೆ ಎಂದು ತಿಳಿಸಲಾಗಿದೆ.

ಈ ಮೊದಲು ದೆಹಲಿಯ ಏಮ್ಸ್ ಆಸ್ಪತ್ರೆಯು ತನ್ನ ಸುತ್ತೋಲೆಯಲ್ಲಿ ಸರ್ಕಾರ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಯ ದಿನದ ಅಂಗವಾಗಿ ಸರ್ಕಾರ ರಜೆ ಘೋಷಿಸಿದ ಹಿನ್ನೆಲೆ ಆಸ್ಪತ್ರೆ ಸೇವೆ ಸ್ಥಗಿತಗೊಳಿಸುವುದಾಗಿ ತಿಳಿಸಿತ್ತು. ಆದಾಗ್ಯೂ ತುರ್ತು ಚಿಕಿತ್ಸಾ ಸೇವಾ ಕೇಂದ್ರಗಳು ಕಾರ್ಯಾಚರಣೆ ನಡೆಸಲಿವೆ ಎಂದು ತಿಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಏಮ್ಸ್‌ನ ಅರ್ಧ ದಿನದ ರಜೆ ನಿರ್ಧಾರವನ್ಬು ಹಲವು ವಿರೋಧ ಪಕ್ಷದ ನಾಯಕರು ಟೀಕಿಸಿದ್ದರು, ಈ ನಿರ್ಧಾರದಿಂದಾಗಿ “ಆರೋಗ್ಯ ಸೇವೆಗಳು” ಅಸ್ತವ್ಯಸ್ತಗೊಳ್ಳುತ್ತವೆ ಎಂದು ಹೇಳಿದ್ದರು.

ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ, , “ಏಮ್ಸ್‌ ದಯವಿಟ್ಟು ಜನವರಿ 22 ರಂದು ವೈದ್ಯಕೀಯ ಸೇವೆ ರದ್ದುಗೊಳಿಸಿ ತುರ್ತುಸ್ಥಿತಿಯನ್ನು ತಂದೊಡ್ಡಬೇಡಿ. ನೀವು ಮಧ್ಯಾಹ್ನ 2 ಗಂಟೆಯ ಸೇವೆಯನ್ನು ನಿಗದಿಪಡಿಸಿದರೆ ಆರೋಗ್ಯ ಸೇವೆಗಳಿಗೆ ಅಡ್ಡಿಯಾಗುತ್ತದೆ. ಭಗವಂತ ಇದನ್ನು ಒಪ್ಪುವುದಿಲ್ಲ” ಎಂದು ಟೀಕಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರು ನಿರ್ಧಾರವನ್ನು ಕಟುವಾಗಿ ಟೀಕಿಸಿದರು, “ಜನರು ಪೂರ್ವಾನುಮತಿಗಾಗಿ ಕಾಯುತ್ತಿದ್ದು, ಏಮ್ಸ್ ದ್ವಾರಗಳಲ್ಲಿ ಚಳಿಯಲ್ಲಿ ಹೊರಗೆ ಮಲಗಿದ್ದಾರೆ. ಬಡವರು ಮತ್ತು ಸಾಯುತ್ತಿರುವವರು ಕಾಯಬಹುದು. ಏಕೆಂದರೆ ಕ್ಯಾಮೆರಾಗಳು ಮತ್ತು ಪಿಆರ್‌ಗಳು ಮೋದಿಯವರ ಹತಾಶೆಗೆ ಆದ್ಯತೆ ನೀಡಲಾಗುತ್ತದೆ” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...