ಸಂಗೀತ ಮಾಂತ್ರಿಕ ಪದ್ಮಭೂಷಣ ರಶೀದ್ ಖಾನ್ ನಿಧನ

Date:

ಸಂಗೀತ ಮಾಂತ್ರಿಕ ಪದ್ಮಭೂಷಣ ಉಸ್ತಾದ್ ರಶೀದ್ ಖಾನ್ ಬುಧವಾರ ನಿಧನರಾಗಿದ್ದಾರೆ. 55 ವರ್ಷ ವಯಸ್ಸಿನ ಕಲಾವಿದ ಖಾನ್ ಅವರು ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಕೋಲ್ಕತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜನವರಿ 9ರಂದು ಬುಧವಾರ ಇಹಲೋಕ ತ್ಯಜಿಸಿದ್ದಾರೆ.

ದೀರ್ಘಕಾಲದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಶೀದ್ ಅವರ ಆರೋಗ್ಯವು, ಕಳೆದ ತಿಂಗಳು ಸೆರೆಬ್ರಲ್ ಅಟ್ಯಾಕ್ ನಂತರ ತೀವ್ರವಾಗಿ ಕುಸಿಯಿತು. ಆರಂಭದಲ್ಲಿ ಅವರು ಮುಂಬೈನ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ತೆರಳಿದರು.

ರಶೀದ್ ಅವರ ಸಾವಿನ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ವ್ಯಕ್ತಪಡಿಸಿದ್ದು, “ರಶೀದ್ ಖಾನ್ ನಿಧನ ಇಡೀ ದೇಶಕ್ಕೆ ಮತ್ತು ಸಂಪೂರ್ಣ ಸಂಗೀತ ಕ್ಷೇತ್ರಕ್ಕೆ ಆದ ದೊಡ್ಡ ನಷ್ಟವಾಗಿದೆ. ರಶೀದ್  ಇನ್ನಿಲ್ಲ ಎಂದು ನನ್ನಿಂದ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ. ನನಗೆ ತುಂಬಾ ನೋವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ಬದಾಯುನ್‌ನಲ್ಲಿ ಜನಿಸಿದ ರಶೀದ್ ಖಾನ್, ಉಸ್ತಾದ್ ಗುಲಾಮ್ ಮುಸ್ತಫಾ ಖಾನ್ ಅವರ ಸೋದರಳಿಯ. ತಮ್ಮ ತಾತ ಉಸ್ತಾದ್ ನಿಸಾರ್ ಹುಸೇನ್ ಖಾನ್ ಅವರಿಂದ ಆರಂಭಿಕ ತರಬೇತಿ ಪಡೆದರು. ಅವರಲ್ಲಿನ ಸಂಗೀತ ಪ್ರತಿಭೆಯನ್ನು ಮೊದಲು ಗುರುತಿಸಿದ್ದು ಅವರ ಚಿಕ್ಕಪ್ಪ ಗುಲಾಮ್ ಮುಸ್ತಫಾ ಖಾನ್. ಹೀಗಾಗಿ ವಾಣಿಜ್ಯ ನಗರಿ ಮುಂಬೈನಲ್ಲಿ ಅವರಿಗೆ ಆರಂಭಿಕ ತರಬೇತಿ ಕೊಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಕೇವಲ 11 ವರ್ಷದವರಾಗಿದ್ದಾಗಲೇ ಸಂಗೀತ ಕಛೇರಿ ನಡೆಸಿದ ಕೀರ್ತಿ ಅವರದ್ದು, 1994 ರ ಹೊತ್ತಿಗೆ ಅವರು ಸಂಗೀತಗಾರರಾಗಿ ಮನ್ನಣೆ ಗಳಿಸಿದ್ದರು. ಬಾಲ್ಯದಿಂದಲೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಿಂದ ಆಳವಾಗಿ ಪ್ರಭಾವಿತರಾದ ರಶೀದ್ ಅವರು ತಮ್ಮ ಅಜ್ಜ ಇನಾಯತ್ ಹುಸೇನ್ ಖಾನ್ ಅವರ ಮಾರ್ಗದರ್ಶನದಲ್ಲಿ ಸಂಗೀತ ಪಾಠಗಳನ್ನು ಪ್ರಾರಂಭಿಸಿದರು.

ಸಂಗೀತ ಕ್ಷೇತ್ರದಲ್ಲಿ, ರಾಂಪುರ-ಸಹಸ್ವಾನ್ ಗಾಯಕಿ ಗ್ವಾಲಿಯರ್ ಘರಾನಾ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಉಸ್ತಾದ್ ಅಮೀರ್ ಖಾನ್ ಮತ್ತು ಪಂಡಿತ್ ಭೀಮಸೇನ್ ಜೋಶಿಯಂತಹ ಗುರುಗಳಿಂದ ಆಳವಾಗಿ ಪ್ರಭಾವಿತರಾಗಿದ್ದಾರೆ.

ಹಿಂದೂಸ್ತಾನಿ ಗಾಯನದಲ್ಲಿ ಮಿಂಚುತ್ತಿರುವಾಗಲೇ, ರಶೀದ್ ಅವರು ಹಿನ್ನೆಲೆ ಸಂಗೀತದಲ್ಲಿ ತಮ್ಮ ಪ್ರಾವೀಣ್ಯತೆಯನ್ನು ಪ್ರದರ್ಶಿಸಿದ್ದಾರೆ. ಬಾಲಿವುಡ್ ಸಿನಿಮಾಗಳಾದ “ಮೈ ನೇಮ್ ಈಸ್ ಖಾನ್,” “ಜಬ್ ವಿ ಮೆಟ್,” “ಇಸಾಕ್,” “ಮಂಟೋ,” “ಮೌಸಮ್,” “ಬಾಪಿ ಬಾರಿ ಜಾ”, “ಕಾದಂಬರಿ,” ಮುಂತಾದ ಸಿನಿಮಾಗಳಿಗೆ ಕೊಡುಗೆ ನೀಡಿದ್ದಾರೆ.

ನೂರಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ರಶೀದ್  ಅವರಿಗೆ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿಗಳಲ್ಲದೆ, 2012 ರಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ರಾಜ್ಯ ಗೌರವವಾದ ಬಂಗಭೂಷಣವನ್ನು ನೀಡಿ ಗೌರವಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...