ಗಗನಸಖಿ ಗೀತಿಕಾ ಶರ್ಮ ಆತ್ಮಹತ್ಯೆ ಪ್ರಕರಣ | ಮಾಜಿ ಶಾಸಕ ಗೋಪಾಲ್ ಗೋಯಲ್ ಕಾಂಡ ಖುಲಾಸೆ

Date:

ಗಗನಸಖಿ ಗೀತಿಕಾ ಶರ್ಮ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಿಂದ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡ ಅವರನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಖುಲಾಸೆಗೊಳಿಸಿದೆ.

ಕಾಂಡಾ ಅವರ ಒಡೆತನದ ಎಂಎಲ್‌ಡಿಆರ್ ಏರ್‌ಲೈನ್ಸ್‌ನಲ್ಲಿ ಗೀತಿಕಾ ಶರ್ಮ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು. ದೆಹಲಿಯ ಅವರ ಅಶೋಕ್ ವಿಹಾರ್ ಮನೆಯಲ್ಲಿ 2012ರ ಆಗಸ್ಟ್ 5ರಂದು ಗೀತಿಕಾರ ಮೃತದೇಹ ಪತ್ತೆಯಾಗಿತ್ತು. ಕಾಂಡ ಅವರ ಕಿರುಕುಳಕ್ಕೆ ಬೇಸತ್ತು ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್ ಬರೆದಿಟ್ಟಿದ್ದರು.  

ಹರಿಯಾಣದ ಸಿರ್ಸಾ ಕ್ಷೇತ್ರದ ಶಾಸಕರಾಗಿದ್ದ ಗೋಪಿನಾಥ್ ಗೋಯಲ್ ಕಾಂಡ, ಭೂಪೇಂದರ್ ಹೂಡಾ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಗೀತಿಕಾ ಶರ್ಮ ಆತ್ಮಹತ್ಯೆ ಪ್ರಕರಣದ ನಂತರ ಅವರು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರ ಚುನಾವಣೆಯಲ್ಲಿ ಬಿಜೆಪಿ ಗೋಪಾಲ್ ಕಾಂಡ ಅವರ ಜೊತೆ ಮಾತುಕತೆಗೆ ಮುಂದಾಗಿತ್ತು. ಅವರ ಮೂಲಕ ಸ್ವತಂತ್ರ ಶಾಸಕರನ್ನು ಸೆಳೆಯುವುದು ಬಿಜೆಪಿ ಉದ್ದೇಶವಾಗಿತ್ತು. ನಂತರ ಪಕ್ಷದೊಳಗೆ ಅದರ ಬಗ್ಗೆ ಭಿನ್ನಮತ ವ್ಯಕ್ತವಾಗಿದ್ದರಿಂದ ಬಿಜೆಪಿ ಆ ಪ್ರಸ್ತಾವನೆಯಿಂದ ಹಿಂದೆ ಸರಿದಿತ್ತು.     

ಗೀತಿಕಾ ಶರ್ಮ ಅವರ ಸಾವಿನ ದುಃಖದಲ್ಲಿಯೇ ಅವರ ತಾಯಿ ಅನುರಾಧ ಕೂಡ 2013ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಸತ್ತಿದ್ದರು. ಮಗಳು ಸತ್ತ ಕೋಣೆಯಲ್ಲಿಯೇ ಅದೇ ರೀತಿ ತಾಯಿ ಕೂಡ ತಮ್ಮ ಜೀವನ ಅಂತ್ಯ ಮಾಡಿಕೊಂಡಿದ್ದರು.              

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...