ಏರ್ ಇಂಡಿಯಾ ವಿಮಾನ ದುರಂತ; ಇಲ್ಲಿವರೆಗೆ ಏನೇನು?

Date:

ಕಳೆದ ಗುರುವಾರ (ಜೂ.12) ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಸಂಖ್ಯೆ AI 171 ದುರಂತ ಭಾರತದ ವಿಮಾನಯಾನ ಇತಿಹಾಸದಲ್ಲಿಯೇ ಒಂದು ಕರಾಳ ಅಧ್ಯಾಯವಾಗಿ ಉಳಿಯಲಿದೆ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ಭಾರಿ ಸಾವು-ನೋವುಗಳಾದ ಈ ದುರ್ಘಟನೆಗೆ ವಿವಿಧ ಆಯಾಮಗಳಿಂದ ಕಾರಣ ಕಂಡುಕೊಳ್ಳುವ ಪ್ರಕ್ರಿಯೆ ನಿರಂತರ ಸಾಗಿದೆ.

ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯವು (Ministry of Civil Aviation) ಏರ್ ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಷನ್ ಬ್ಯೂರೋ (AAIB) ನೇತೃತ್ವದಲ್ಲಿ ಈ ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಈ ತನಿಖಾ ಸಮಿತಿಯ ಮೊದಲ ಸಭೆ ನಿನ್ನೆ (ಜೂ.16) ನಡೆದಿದೆ.

ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್‌ (DFDR) ಮತ್ತು ಕಾಕ್‌ಪಿಟ್‌ ವಾಯ್ಸ್‌ ರೆಕಾರ್ಡರ್‌ (CVR) ಒಳಗೊಂಡಿರುವ ಬ್ಲ್ಯಾಕ್‌ಬಾಕ್ಸ್‌ಗಳನ್ನು ಅಧಿಕಾರಿಗಳ ಪತ್ತೆಹಚ್ಚಿದ್ದಾರೆ. ಈ ಬಾಕ್ಸ್‌ನಲ್ಲಿರುವ ಮಾಹಿತಿ ವಿಮಾನದ ಕಾರ್ಯಕ್ಷಮತೆ, ಪೈಲಟ್‌ಗಳ ಸಂಭಾಷಣೆ ಮತ್ತು ವಿಮಾನದ ಸ್ಥಿತಿಯ ಬಗ್ಗೆ ಮಹತ್ವದ ಸುಳಿವುಗಳನ್ನು ನೀಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 17 at 3.28.23 PM

ಪ್ರಾಥಮಿಕ ವರದಿಗಳ ಪ್ರಕಾರ, ಎರಡೂ ಎಂಜಿನ್‌ಗಳು ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಸ್ಥಗಿತಗೊಂಡಿರುವುದು ದುರಂತಕ್ಕೆ ಮುಖ್ಯ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಇದು ಯಾಂತ್ರಿಕ ದೋಷವೇ, ತಾಂತ್ರಿಕ ವೈಫಲ್ಯವೇ ಅಥವಾ ಇನ್ಯಾವುದಾದರೂ ಬಾಹ್ಯ ಕಾರಣವೇ ಎಂಬುದರ ಬಗ್ಗೆ ತನಿಖೆ ಮುಂದುವರೆದಿದೆ ಎಂದು ತನಿಖಾ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.

ಈ ತನಿಖೆಯಲ್ಲಿ ಅಮೆರಿಕದ ನ್ಯಾಷನಲ್ ಟ್ರಾನ್ಸ್‌ಪೋರ್ಟೇಷನ್ ಸೇಫ್ಟಿ ಬೋರ್ಡ್ (NTSB) ಮತ್ತು ಯುಕೆ ಯ ಏರ್ ಆಕ್ಸಿಡೆಂಟ್ ಇನ್ವೆಸ್ಟಿಗೇಷನ್ ಬ್ರಾಂಚ್ (AAIB) ತಂಡಗಳು ಭಾರತೀಯ ತನಿಖಾಧಿಕಾರಿಗಳಿಗೆ ನೆರವು ನೀಡಲು ಭಾರತಕ್ಕೆ ಆಗಮಿಸಿವೆ. ಬೋಯಿಂಗ್ ಕಂಪನಿಯ ತಜ್ಞರೂ ಸಹ ತನಿಖೆಯಲ್ಲಿ ಭಾಗಿಯಾಗಿದ್ದಾರೆ.

ಏರ್ ಇಂಡಿಯಾ ಹೊಂದಿರುವ ಎಲ್ಲಾ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನಗಳನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಆದೇಶಿಸಿದೆ.

ಹಲವು ದೇಶಗಳ ನಾಯಕರು ಸೇರಿದಂತೆ ಈ ದುರಂತಕ್ಕೆ ವಿಶ್ವವೇ ಸಂತಾಪ ಸೂಚಿಸುತ್ತಿದೆ. ಇನ್ನು ದುರಂತಕ್ಕೀಡಾದ ವಿಮಾನ ಸಂಖ್ಯೆ ʼAI 171ʼ ಅನ್ನು ಭವಿಷ್ಯದಲ್ಲಿ ಯಾವುದೇ ವಿಮಾನಕ್ಕೆ ಬಳಸದಿರಲು ಏರ್‌ ಇಂಡಿಯಾ ನಿರ್ಧರಿಸಿದೆ. ಈ ದುರಂತವು ಭಾರತದ ನಾಗರಿಕ ವಿಮಾನಯಾನ ಸುರಕ್ಷತಾ ಮಾನದಂಡಗಳನ್ನು ಮತ್ತೊಮ್ಮೆ ಪರಿಶೀಲಿಸಲು ಪ್ರೇರೇಪಿಸಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಮತ್ತು ವಿಮಾನಯಾನ ಸಂಸ್ಥೆಗಳಲ್ಲಿ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸುವ ಕಾರ್ಯವಿಧಾನಗಳನ್ನು ಬಲಪಡಿಸಲು ಹೊಸ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ತಜ್ಞರು ಚಿಂತಿಸುತ್ತಿದ್ದಾರೆ.

ಈವರೆಗೆ 119 ಡಿಎನ್ಎ ಮಾದರಿಗಳು ತಾಳೆಯಾಗಿದ್ದು, ನಿನ್ನೆ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮೃತದೇಹ ಸೇರಿದಂತೆ 76 ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

WhatsApp Image 2025 06 17 at 1.58.52 PM

ಅಪಘಾತಕ್ಕೀಡಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಪೈಲಟ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ಪಾರ್ಥಿವ ಶರೀರವನ್ನು ಇಂದು (ಜೂ.17) ಮುಂಬೈನ ಪೌವಾಯಿಯ ಜಲ ವಾಯು ವಿಹಾರ್‌ನಲ್ಲಿ ಇರುವ ಅವರ ನಿವಾಸಕ್ಕೆ ತಲುಪಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 56 ವರ್ಷದ ಸಭರ್ವಾಲ್ ಮುಂಬೈನಲ್ಲಿ ತಮ್ಮ ವೃದ್ಧ ಪೋಷಕರೊಂದಿಗೆ ವಾಸಿಸುತ್ತಿದ್ದರು.

ಈ ವಿಮಾನವನ್ನು ಕ್ಯಾಪ್ಟನ್ ಸಭರ್ವಾಲ್ ಮತ್ತು ಪ್ರಥಮ ಅಧಿಕಾರಿ ಕ್ಲೈವ್ ಕುಂದರ್ ನೇತೃತ್ವ ವಹಿಸಿದ್ದರು. ಸಭರ್ವಾಲ್ ಅವರಿಗೆ 8,200 ಗಂಟೆಗಳ ಹಾರಾಟದ ಅನುಭವವಿದ್ದರೆ, ಕುಂದರ್ ಅವರಿಗೆ 1,100 ಗಂಟೆಗಳ ಅನುಭವವಿತ್ತು ಎಂದು ಡಿಜಿಸಿಎ ತಿಳಿಸಿದೆ.

ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜಿನ ಆವರಣಕ್ಕೆ ಅಪ್ಪಳಿಸಿ, ವಿಮಾನದಲ್ಲಿದ್ದ 241 ಮಂದಿ ಮತ್ತು ವಿಮಾನ ಅಪ್ಪಳಿಸಿದ ಹಾಸ್ಟೆಲ್‌ ಮೆಸ್‌ನಲ್ಲಿದ್ದ ಸುಮಾರು 29 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಈವರೆಗೂ ಮೃತರ ಅಧಿಕೃತ ಅಂಕಿಅಂಶ ಬಿಡುಗಡೆಯಾಗಿಲ್ಲ.

ಏತನ್ಮಧ್ಯೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಇಂದು (ಜೂ.17) ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ 159 ಅನ್ನು ರದ್ದುಗೊಳಿಸಲಾಗಿದೆ ಎಂದು ಸಿಎನ್‌ಎನ್ ನ್ಯೂಸ್ 18 ವರದಿ ಮಾಡಿದೆ.

WhatsApp Image 2025 06 17 at 3.08.11 PM

“ನಾನು ಮಧ್ಯಾಹ್ನ 1 ಗಂಟೆಗೆ ಕಾದಿರಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಲಂಡನ್‌ನ ಗ್ಯಾಟ್ವಿಕ್‌ಗೆ ಹೋಗುವವನಿದ್ದೆ. ಆದರೆ ವಿಮಾನ ರದ್ದಾಗಿದೆ ಎಂದು ನನಗೆ ಈಗಷ್ಟೇ ತಿಳಿಯಿತು. ವಿಮಾನ ರದ್ದತಿಗೆ ಯಾವುದೇ ಕಾರಣ ಅಥವಾ ಶುಲ್ಕ ಮರುಪಾವತಿಯ ವಿವರಗಳನ್ನು ಸಿಬ್ಬಂದಿ ಸದಸ್ಯರು ನೀಡಲು ಸಾಧ್ಯವಾಗಲಿಲ್ಲ” ಎಂದು AI-159 ವಿಮಾನದ ಪ್ರಯಾಣಿಕರೊಬ್ಬರು ANI ಗೆ ತಿಳಿಸಿರುವ ವಿಡಿಯೋ ವೈರಲ್‌ ಆಗಿದೆ.

AI 171 ವಿಮಾನ ದುರಂತವು ಭಾರತದ ನಾಗರಿಕ ವಿಮಾನಯಾನ ಕ್ಷೇತ್ರಕ್ಕೆ ತೀವ್ರ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಈ ಘಟನೆ ತಂತ್ರಜ್ಞಾನ, ನಿರ್ವಹಣಾ ಪ್ರಕ್ರಿಯೆಗಳು ಮತ್ತು ತುರ್ತು ಪ್ರತಿಕ್ರಿಯಾ ಸಾಮರ್ಥ್ಯದ ಪುನರ್ ಪರಿಶೀಲನೆಗೆ ದಾರಿ ಮಾಡಿಕೊಡಬೇಕಾಗಿದೆ. ಅಷ್ಟು ಮಂದಿಯನ್ನು ಹೊತ್ತಿದ್ದ ವಿಮಾನವೊಂದು ಕೆಲವೇ ಕ್ಷಣಗಳಲ್ಲಿ ಪತನಗೊಳ್ಳುವಷ್ಟು ತಾಂತ್ರಿಕವಾಗಿ ದೋಷಪೂರಿತವಾಗಿತ್ತೇ? ಹಾಗಿದ್ದರೂ ವಿಮಾನ ಹಾರಾಟಕ್ಕೆ ಅವಕಾಶ ಕೊಟ್ಟದ್ದಾದರೂ ಯಾಕೆ? ಅಥವಾ ಬಾಹ್ಯ ಕಾರಣಗಳೇನಾದರೂ ಇರುವ ಸಾಧ್ಯತೆ ಇದೆಯೇ?.. ಈ ಪ್ರಶ್ನೆಗಳಿಗೆಲ್ಲ ಉನ್ನತ ಮಟ್ಟದ ತನಿಖಾ ವರದಿಗಳಷ್ಟೇ ಉತ್ತರಿಸಬಹುದು. ಆದರೆ, ಈ ದುರಂತದಿಂದ ಕಲಿತ ಪಾಠಗಳು ಭವಿಷ್ಯದ ವಿಮಾನಯಾನ ವ್ಯವಸ್ಥೆಯನ್ನು ಇನ್ನಷ್ಟು ಸುರಕ್ಷಿತವಾಗಿಸಲು ನೆರವಾಗಲಿ ಎಂಬುದೇ ಆಶಯ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...