ಗಾಳಿಯ ಗುಣಮಟ್ಟ ಕುಸಿತ: ದುಸ್ಥಿತಿಯಲ್ಲಿದೆ ದೆಹಲಿ; ಶಾಲೆಗಳು ಬಂದ್

Date:

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಭಾರೀ ಕಳಪೆಯಾಗಿದೆ. ನಗರ ವಾಸಿಗಳು ಉಸಿರಾಟ ಸಂಬಂಧಿತ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ದೆಹಲಿ ಭಾಗದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ರೈಲುಗಳ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಶಾಲೆಗಳನ್ನು ಮುಚ್ಚಲಾಗಿದ್ದು, ಆನ್‌ಲೈನ್ ತರಗತಿ ನಡೆಸಲಾಗುತ್ತಿದೆ.

ಮಂಗಳವಾರ ದೆಹಲಿ ಪ್ರದೇಶದಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕವು(AQI) 500ರ ಗಡಿ ಮಟ್ಟಿದೆ. ದೆಹಲಿಯಲ್ಲಿ 35 AQI ಮೇಲ್ವಿಚಾರಣಾ ಕೇಂದ್ರಗಳಿದ್ದು, ಬಹುತೇಕ ಕೇಂದ್ರಗಳಲ್ಲಿ ಸೂಚ್ಯಂಕವು 500 ದಾಟಿದೆ ಎಂದು ಸಿಸ್ಟಂ ಆಫ್ ಏರ್ ಕ್ವಾಲಿಟಿ ಮತ್ತು ವೆದರ್ ಫೋರ್ಕಾಸ್ಟಿಂಗ್ ಮತ್ತು ರಿಸರ್ಚ್(SAFAR) ಹೇಳಿದೆ.

ದೆಹಲಿ ಪ್ರದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರೈಲುಗಳ ಸಂಚಾರ ವಿಳಂಬವಾಗಿದ್ದು, ಸುಮಾರು 22 ರೈಲುಗಳ ಸಮಯಕ್ಕೆ ಸರಿಯಾಗಿ ದೆಹಲಿಯನ್ನು ತಲುಪಲು ಸಾಧ್ಯವಾಗಿಲ್ಲ. ಶಾಲೆಗಳನ್ನು ಮುಚ್ಚಲಾಗಿದ್ದು, ಆನ್‌ಲೈನ್‌ ತರಗತಿಗಳನ್ನು ನಡೆಸುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ. ದೈಹಿಕ ತರಗತಿಗಳನ್ನು ನಡೆಸದಂತೆ ನಿರ್ದೇಶನ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಲ್ ಸರ್ಕಲ್ಸ್‌ ಸಮೀಕ್ಷೆಯ ಪ್ರಕಾರ, ದೆಹಲಿ ಮತ್ತು ಸುತ್ತಲಿನ 69% ಕುಟುಂಬಗಳಲ್ಲಿ ಒಬ್ಬರು ಅಥವಾ ಹೆಚ್ಚಿನ ಸದಸ್ಯರು ಗಂಟಲು ನೋವು ಅಥವಾ ಕೆಮ್ಮು ಸಮಸ್ಯೆಯಿಂದ ಬಳಲುತ್ತಿದ್ದಾರೆ. 62% ಕುಟುಂಬಗಳಲ್ಲಿ ಕನಿಷ್ಠ ಒಬ್ಬರು ಕಣ್ಣು ಉರಿ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗೂ ದೆಹಲಿಯ ಒಟ್ಟು ಜನರಲ್ಲಿ 46% ಮಂದಿ ‘ಮೂಗು ಕಟ್ಟುವ’ ಬಾಧೆಗೆ ತುತ್ತಾಗಿದ್ದರೆ. ಸಮೀಕ್ಷೆಗೆ ಒಳಪಟ್ಟವರಲ್ಲಿ ಹಲವರು ಒಂದಕ್ಕಿಂತ ಹೆಚ್ಚು ರೋಗಲಕ್ಷಣಗಳನ್ನು ಹೊಂದಿದ್ದಾರೆ. ದೆಹಲಿಯಲ್ಲಿ 31% ಮಂದಿ ಉಸಿರಾಟದ ತೊಂದರೆ ಅಥವಾ ಆಸ್ತಮಾದಿಂದ ಬಳಲುತ್ತಿದ್ದಾರೆ. ಆತಂಕ (ಆ್ಯಂಸೈಟಿ)ಯಂತಹ ಸಮಸ್ಯೆಗೆ 23% ಮಂದಿ ತುತ್ತಾಗಿದ್ದರೆ, 15% ಮಂದಿ ನಿದ್ರಾಬಾಧೆ ಅನುಭವಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...