ಉತ್ತರಕಾಶಿ ಪ್ರವಾಹ | ಆ. 5ರಿಂದ ನಾಪತ್ತೆಯಾಗಿರುವ 43 ಮಂದಿ ಪತ್ತೆಗಾಗಿ ಮುಂದುವರೆದ ಶೋಧ

Date:

ಆಗಸ್ಟ್‌ 5ರಂದು ಉತ್ತರಪ್ರದೇಶದ ಉತ್ತರಕಾಶಿಯಲ್ಲಿ ಸಂಭವಿಸಿದ ಹಠಾತ್‌ ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾದ 43 ಮಂದಿಯ ಸುಳಿವು ಇನ್ನೂ ಪತ್ತೆಯಾಗಿಲ್ಲ ಎಂದು ಉತ್ತರಾಖಂಡ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. 43 ಮಂದಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವಿನಯಶಂಕರ ಪಾಂಡೆ “ಧಾರಾಲಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅವಶೇಷಗಳ ಅಡಿ ಸಿಲುಕಿರುವವರ ಪತ್ತೆ ಮಾಡುವುದು ಜಿಲ್ಲಾಡಳಿತದ ಮೊದಲ ಆದ್ಯತೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ, ಇಂಡೋ ಟಿಬೆಟಿಯನ್‌ ಗಡಿ ಪೊಲೀಸ್‌, ಭೂಗರ್ಭಶಾಸ್ತ್ರಜ್ಞರ ತಂಡಗಳು ಜಂಟಿಯಾಗಿ ವಿಪತ್ತು ಪ್ರದೇಶದಲ್ಲಿ ಶೋಧ ಕಾರ್ಯ ನಿರ್ವಹಿಸುತ್ತಿವೆ” ಎಂದರು.

ಇದನ್ನು ಓದಿದ್ದೀರಾ? ಉತ್ತರಕಾಶಿಯಲ್ಲಿ ಪ್ರವಾಹ: 100ಕ್ಕೂ ಹೆಚ್ಚು ಮಂದಿ ನಾಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಣೆಯಾಗಿರುವ 43 ಮಂದಿಯಲ್ಲಿ ಒಂಬತ್ತು ಸೇನಾ ಸಿಬ್ಬಂದಿ, ಎಂಟು ಮಂದಿ ಧಾರಾಲಿ ಸ್ಥಳೀಯರು, ಐದು ಮಂದಿ ನೆರೆಯ ಗ್ರಾಮಸ್ಥರು ಹಾಗೂ ತೆಹ್ರಿ, ಬಿಹಾರ, ಉತ್ತರಪ್ರದೇಶ ಮತ್ತು ನೇಪಾಳದ ಜನರೂ ಸೇರಿದ್ದಾರೆ” ಎಂದು ಹೇಳಿದ್ದಾರೆ.

“29 ಮಂದಿ ನೇಪಾಳಿ ಕಾರ್ಮಿಕರ ಪೈಕಿ ಐವರ ಸಂಪರ್ಕ ಸಾಧ್ಯವಾಗಿದೆ. ಆದರೆ ಉಳಿದವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಇಲ್ಲಿಯವರೆಗೆ ಇಬ್ಬರ ಮೃತ ದೇಹವನ್ನು ಮಾತ್ರ ಹೊರತೆಗೆಯಲಾಗಿದೆ. ರಸ್ತೆಗಳಲ್ಲಿ ಬಿರುಕು ಮತ್ತು ಭೂ ಕುಸಿತ ಉಂಟಾಗಿರುವ ಪರಿಣಾಮವಾಗಿ ಕಾರ್ಯಾಚರಣೆ ನಡೆಸುವುದು ಸವಾಲಾಗಿದೆ” ಎಂದು ತಿಳಿಸಿದ್ದಾರೆ.

“ನಿರಾಶ್ರಿತರ ಪರಿಹಾರ ವಾಹನಗಳ ನಿಯಮಿತ ಸಂಚಾರ ಮತ್ತು 300 ಮಂದಿ ಮಾತ್ರವೇ ಧಾರಾಲಿಯಲ್ಲಿ ಉಳಿದಿದ್ದಾರೆ. ಉಳಿದ ಕುಟುಂಬಗಳನ್ನು ಉತ್ತರಕಾಶಿ ಮತ್ತು ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ಈವರೆಗೆ ಒಟ್ಟು 1,278 ಮಂದಿಯನ್ನು ಸ್ಥಳಾಂತರಿಸಲಾಗಿದ್ದು, ಅದರಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದ್ದಾರೆ” ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...