‘ವಿಮಾನ ಟಿಕೆಟ್‌ ದರ 35-39 ಸಾವಿರ ರೂ.ಗೆ ಏರಲು ಹೇಗೆ ಸಾಧ್ಯ?’ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Date:

ವಿಮಾನಗಳ ಟಿಕೆಟ್‌ ರವು 35-39 ಸಾವಿರ ರೂ.ಗಳಿಗೆ ಏರಿಕೆಯಾಗಲು ಹೇಗೆ ಸಾಧ್ಯ. ಇಂಡಿಗೋ ಬಿಕ್ಕಟ್ಟಿನಿಂದ ಉಂಟಾಗಿರುವ ಅವ್ಯವಸ್ಥೆಯ ಸಂದರ್ಭಗಳನ್ನು ನಿಭಾಯಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್‌ ಪ್ರಶ್ನಿಸಿದೆ. ಟಿಕೆಟ್‌ ದರಗಳು ಯದ್ವಾತದ್ವಾ ಏರಿಕೆಯಾಗುತ್ತಿದ್ದರೂ, ಅದನ್ನು ತಡೆಯುವಲ್ಲಿ ಸರ್ಕಾರ ಯಾಕೆ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದೆ.

“ಇಂಡಿಗೋ ಸಂಸ್ಥೆಯ ಬಿಕ್ಕಟ್ಟಿನ ಪರಿಸ್ಥಿತಿ ಏಕೆ ಸಂಭವಿಸಿತು? ಇಂಡಿಗೋ ವಿಮಾನಕ್ಕೆ ಟಿಕೆಟ್‌ ಬುಕ್‌ ಮಾಡಿದ್ದ ಪ್ರಯಾಣಿಕರಿಗೆ ಸಹಾಯ ಮಾಡಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ?” ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

“ಬಿಕ್ಕಟ್ಟು ಇರುವ ಸಮಯದಲ್ಲಿ ಇತರ ವಿಮಾನಯಾನ ಸಂಸ್ಥೆಗಳು ಲಾಭ ಪಡೆಯಲು ಅನುಮತಿಸಲು ಹೇಗೆ ಸಾಧ್ಯ? ವಿಮಾನ ಪ್ರಯಾಣದ ಟಿಕೆಟ್‌ಗಳ ಬೆಲೆ35-39 ಸಾವಿರದವರೆಗೆ ಏರಿಕೆಯಾಗುವುದು ಹೇಗೆ? ಇತರ ವಿಮಾನಯಾನ ಸಂಸ್ಥೆಗಳು ದುಬಾರಿ ಟಿಕೆಟ್‌ ಮಾರಾಟಲು ಮಾಡಲು ಹೇಗೆ ಪ್ರಾರಂಭಿಸಿದವು? ಎಂಬುದೇ ಗಂಭೀರ ಪ್ರಶ್ನೆಯಾಗಿದೆ” ಎಂದು ನ್ಯಾಯಮೂರ್ತಿ ಗೆಡೆಲಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈಕೋರ್ಟ್‌ ಪ್ರಶ್ನೆಗೆ ಉತ್ತರಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, “ವಿಮಾನಯಾನ ಸಂಸ್ಥೆಗೆ (ಇಂಡಿಗೋ) ಈಗಾಗಲೇ ಶೋ-ಕಾಸ್ ನೋಟಿಸ್ ನೀಡಲಾಗಿದೆ. ಸಂಸ್ಥೆಯು ಕ್ಷಮೆಯಾಚಿಸಿದೆ” ಎಂದು ಹೇಳಿದ್ದಾರೆ.

ಆದಾಗ್ಯೂ, “ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರಿಗೆ ನೀಡಲಾದ ಅಗತ್ಯ ನೆರವು ಮತ್ತು ಪ್ರಯಾಣಕ್ಕೆ ಒದಗಿಸುವ ವ್ಯವಸ್ಥೆಗಳ ಕುರಿತು ವಿವರಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠವು, “ಪರಿಸ್ಥಿತಿ ಈ ಹಂತವನ್ನು ತಲುಪಲು ನೀವು ಅವಕಾಶ ಮಾಡಿಕೊಟ್ಟಿದ್ದೀರಿ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...