ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ‘ಲ್ಯಾಂಡ್’ ಆಗುವಾಗ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾರಾಮತಿ ಜಿಲ್ಲೆಯಲ್ಲಿ ತುರ್ತು ಭೂಸ್ಪರ್ಶಕ್ಕೆ ವಿಮಾನ ಯತ್ನಿಸಿದೆ. ಆದರೂ, ರನ್ವೇಯಲ್ಲಿ ವಿಮಾನ ಪತನಗೊಂಡಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ವಿಮಾನವು ಲ್ಯಾಂಡ್ ಆಗುವ ಸಮಯಕ್ಕೂ ಮುನ್ನ ತಾಂತ್ರಿಕ ತೊಂದರೆಗಳು ಕಂಡುಬಂದಿವೆ. ಕೂಡಲೇ ವಿಮಾನವನ್ನು ತುರ್ತು ಭೂಸ್ಪರ್ಷಕ್ಕೆ ಯತ್ನಿಸಿದ್ದು, ಸಮಸ್ಯೆ ಉಲ್ಬಣಗೊಂಡಿದೆ. ಪರಿಣಾಮವಾಗಿ ರನ್ವೇಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣವನ್ನು ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಅಜಿತ್ ಪವಾರ್ ಅಲ್ಲದೆ, ಇನ್ನೂ ಯಾರೆಲ್ಲ ವಿಮಾನದಲ್ಲಿ ಇದ್ದರು ಎಂಬುದರ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಸುರಕ್ಷತಾ ಕ್ರಮವಾಗಿ ಬಾರಾಮತಿ ವಿಮಾನ ನಿಲ್ದಾಣದ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರದೇಶದ ಸುರಕ್ಷತೆ ಮತ್ತು ಪರಿಸ್ಥಿತಿಯ ನಿರ್ವಹಣೆಗಾಗಿ ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ.




