ತಮ್ಮ ಬಣದ ನಾಯಕರ ಜೊತೆ ಶರದ್ ಪವಾರ್ ಭೇಟಿಯಾದ ಅಜಿತ್ ಪವಾರ್

Date:

  • ಅಜಿತ್ ಪವಾರ್ ಸೇರಿದಂತೆ ಬಂಡಾಯ ನಾಯಕರ ಭೇಟಿ ಖಚಿತಪಡಿಸಿದ ಜಯಂತ್ ಪಾಟೀಲ್
  • ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಮುನ್ನಾ ದಿನ ಬಂಡಾಯ ನಾಯಕರ ಭೇಟಿ

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಅವರು ತಮ್ಮ ಕೆಲವು ನಿಷ್ಠಾವಂತ ಶಾಸಕರು ಹಾಗೂ ಎಲ್ಲ ಎನ್‌ಸಿಪಿ ಸಚಿವರ ಜತೆಗೂಡಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭಾನುವಾರ (ಜುಲೈ 16) ಭೇಟಿಯಾಗಿದ್ದಾರೆ.

ಪಕ್ಷದ ವಿರುದ್ಧವೇ ಬಂಡಾಯದ ಬಾವುಟ ಬೀಸಿ ಶಿವಸೇನಾ- ಬಿಜೆಪಿ ಸರ್ಕಾರದ ಜತೆ ಸೇರಿಕೊಂಡಿದ್ದ ನಾಯಕರು, ಈಗ ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭದ ಹಿಂದಿನ ದಿನ ಶರದ್ ಪವಾರ್ ಅವರ ಜತೆ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

“ಅಜಿತ್ ಪವಾರ್ ಅವರ ಜೊತೆಗೂಡಿ ಇಂದು ನಮ್ಮ ದೇವರು ಹಾಗೂ ನಮ್ಮ ನಾಯಕ ಶರದ್ ಪವಾರ್ ಅವರ ಆಶೀರ್ವಾದ ಪಡೆಯಲು ಅವರನ್ನು ಭೇಟಿ ಮಾಡಿದೆವು” ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಯಾವುದೇ ಸಮಯ ಕೇಳದೆ ಇಲ್ಲಿಗೆ ಬಂದಿದ್ದೇವೆ. ಸಭೆಯೊಂದರ ಸಲುವಾಗಿ ಶರದ್ ಪವಾರ್ ಅವರು ಇಲ್ಲಿಗೆ ಭೇಟಿ ನೀಡಿದ್ದಾರೆ ಎನ್ನುವುದು ನಮಗೆ ತಿಳಿದಿತ್ತು. ಹೀಗಾಗಿ ಅವರ ಆಶೀರ್ವಾದ ಪಡೆದುಕೊಳ್ಳಲು ನಾವೆಲ್ಲರೂ ಇಲ್ಲಿಗೆ ಬಂದಿದ್ದೇವೆ” ಎಂದು ತಿಳಿಸಿದ್ದಾರೆ.

“ನಿಮ್ಮನ್ನು ಎಲ್ಲರೂ ಗೌರವಿಸುತ್ತೇವೆ. ಆದರೆ ಎನ್‌ಸಿಪಿ ಒಂದಾಗಿ ಇರಬೇಕು. ಈ ಬಗ್ಗೆ ನೀವು ಸೂಕ್ತವಾಗಿ ಆಲೋಚಿಸಿ, ಭವಿಷ್ಯದಲ್ಲಿ ಸಲಹೆ ನೀಡಿ ಎಂದು ಮನವಿ ಮಾಡಿದ್ದೆ. ಆದರೆ ಇದಕ್ಕೆ ಶರದ್ ಪವಾರ್ ನಮಗೆ ಉತ್ತರ ನೀಡಲಿಲ್ಲ. ನಾವು ಏನು ಹೇಳುತ್ತಿದ್ದೆವೋ ಅವರು ಅದನ್ನು ಸುಮ್ಮನೆ ಆಲಿಸುತ್ತಾ ಇದ್ದರು. ಅವರನ್ನು ಭೇಟಿ ಮಾಡಿದ ಬಳಿಕ ನಾವು ವಾಪಸ್ ಹೋಗುತ್ತಿದ್ದೇವೆ” ಎಂದು ಪ್ರಫುಲ್ ಪಟೇಲ್ ತಿಳಿಸಿದ್ದಾರೆ.

“ಅಜಿತ್ ಸೇರಿದಂತೆ ಬಂಡಾಯ ಶಾಸಕರು ಪಕ್ಷದ ಒಳಗೆ ಉಂಟಾಗಿರುವ ವಿಭಜನೆಗೆ ಪಶ್ಚಾತ್ತಾಪ ವ್ಯಕ್ತಪಡಿಸಿದರು. ಪಕ್ಷವು ಒಗ್ಗಟ್ಟಿನಿಂದ ಉಳಿಯುವಂತೆ ನೋಡಿಕೊಳ್ಳಲು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಹಿರಿಯ ನಾಯಕರಿಗೆ ಮನವಿ ಮಾಡಿದರು. ಶರದ್ ಪವಾರ್ ಇದನ್ನೆಲ್ಲ ಆಲಿಸಿದರು. ಆದರೆ ಅವರಿಗೆ ಏನನ್ನೂ ಹೇಳಲಿಲ್ಲ” ಎಂದು ಶರದ್ ಪವಾರ್ ಅವರ ಆಪ್ತ ಜಯಂತ್ ಪಾಟೀಲ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎನ್‌ಡಿಎ ಸಭೆಯಲ್ಲಿ ಭಾಗವಹಿಸಲು ಚಿರಾಗ್ ಪಾಸ್ವಾನ್‌ಗೆ ಆಹ್ವಾನ ನೀಡಿದ ಜೆ ಪಿ ನಡ್ಡಾ

“ಅಜಿತ್ ಪವಾರ್ ಸೇರಿದಂತೆ ಬಂಡಾಯ ನಾಯಕರ ಸಭೆಯು ದಿಢೀರನೆ ನಡೆದಿದೆ. ನಾವು ನಮ್ಮ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ನಾವು ಶರದ್ ಪವಾರ್ ಅವರ ಜತೆ ಕುಳಿತು ಇದನ್ನು ಮಾತನಾಡುತ್ತೇವೆ. ಇದರ ಬಳಿಕ ನಮಗೆ ಸ್ಪಷ್ಟ ಉತ್ತರ ನೀಡಲು ಸಾಧ್ಯವಾಗಲಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಾವು ಸರ್ಕಾರಕ್ಕೆ ಬೆಂಬಲ ನೀಡಿಲ್ಲ. ಹೀಗಾಗಿ ವಿರೋಧ ಪಕ್ಷಗಳ ಸಾಲಿನಲ್ಲಿ ನಮಗೆ ಸೂಕ್ತ ಸ್ಥಾನಕ್ಕೆ ಸ್ಪೀಕರ್ ವ್ಯವಸ್ಥೆ ಮಾಡಲಿದ್ದಾರೆ” ಎಂದು ಶರದ್ ಪವಾರ್ ಬಣದ ಜಯಂತ್ ಪಾಟೀಲ್ ತಿಳಿಸಿದ್ದಾರೆ.

ತಮ್ಮ ಬಳಿ 20 ಶಾಸಕರು ಇದ್ದಾರೆ. ಇನ್ನು ಕೆಲವರು ಎರಡೂ ಬಣಗಳನ್ನು ಬೆಂಬಲಿಸುತ್ತಿದ್ದಾರೆ. ಆದರೆ ಅವರೆಲ್ಲರೂ ಶರದ್ ಪವಾರ್ ಅವರ ಸಿದ್ಧಾಂತಗಳನ್ನು ಒಪ್ಪಿಕೊಳ್ಳುತ್ತಾರೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...