ನಟ ನಾಗಾರ್ಜುನ ಒಡೆತನದ ಅದ್ದೂರಿ ಕನ್ವೆನ್ಷನ್‌ ಹಾಲ್ ಧ್ವಂಸ

Date:

ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ರಕ್ಷಣೆ (ಹೈಡ್ರಾ) ಅಧಿಕಾರಿಗಳು ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸೇರಿದ ಮಾದಾಪುರದಲ್ಲಿರುವ ಅದ್ದೂರಿ ಕನ್ವೆನ್ಷನ್‌ ಹಾಲ್ ಅನ್ನು ಧ್ವಂಸಗೊಳಿಸಿದ್ದಾರೆ.

ತುಮ್ಮಿಡಿ ಕುಂಟಾ ಹೊಂಡವನ್ನು ಒತ್ತುವರಿ ಮಾಡಿ ಕನ್ವೆನ್ಷನ್‌ ಹಾಲ್ ನಿರ್ಮಿಸಿದ್ದಾರೆ ಎಂಬ ಆರೋಪ ನಾಗಾರ್ಜುನ ಮೇಲಿದೆ. ಆದರೆ ಜಮೀನು ಪಟ್ಟಾ ಜಮೀನಾಗಿದ್ದು, ಒಂದು ಇಂಚು ತುಮ್ಮಿಡಿ ಕುಂಟಾ ಹೊಂಡ ಕೂಡ ಒತ್ತುವರಿಯಾಗಿಲ್ಲ ಎಂದು ನಟ ಹೇಳಿದ್ದಾರೆ.

“ಹೈಡ್ರಾ ಅಧಿಕಾರಿಗಳು ಇಂದು ಬೆಳಿಗ್ಗೆ ಎನ್ ಕನ್ವೆನ್ಷನ್‌ ಹಾಲ್ ಅನ್ನು ಕೆಡವಲು ಪ್ರಾರಂಭಿಸಿದ್ದಾರೆ. ಭೂಮಿ ಎಫ್‌ಟಿಎಲ್ ವಲಯಕ್ಕೆ ಸೇರಿದ್ದಾಗಿರುವುದರಿಂದ ನೆಲಸಮ ಮಾಡುವ ಕಾರ್ಯವು ಸುಗಮವಾಗಿ ನಡೆಯಲು ನಾವು ಪೊಲೀಸ್ ಪಡೆಗಳನ್ನು ಅಲ್ಲಿ ನಿಯೋಜಿಸಿದ್ದೇವೆ” ಎಂದು ಮಾದಾಪುರ ಡಿಸಿಪಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದ್ದಿದ್ದೀರಾ? ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ನಟ ನಾಗಾರ್ಜುನ, “ತಡೆಯಾಜ್ಞೆಗಳು ಮತ್ತು ನ್ಯಾಯಾಲಯದ ಪ್ರಕರಣಗಳ ನಡುವೆಯೂ ಎನ್ ಕನ್ವೆನ್ಷನ್‌ ಅನ್ನು ಕಾನೂನುಬಾಹಿರ ರೀತಿಯಲ್ಲಿ ಕೆಡವಿರುವುದು ನೋವಾಗಿದೆ” ಎಂದಿದ್ದಾರೆ.

“ನನ್ನ ಪ್ರತಿಷ್ಠೆಯನ್ನು ರಕ್ಷಿಸಲು ಕೆಲವು ಸಂಗತಿಗಳನ್ನು ದಾಖಲಿಸಲು ಮತ್ತು ಕಾನೂನನ್ನು ಉಲ್ಲಂಘಿಸುವ ಯಾವುದೇ ಕ್ರಮಗಳನ್ನು ನಾವು ಮಾಡಿಲ್ಲ ಎಂದು ಸೂಚಿಸಲು ಈ ಹೇಳಿಕೆಯನ್ನು ನೀಡುವುದು ಸೂಕ್ತವೆಂದು ನಾನು ಭಾವಿಸಿದೆ. ಜಮೀನು ಪಟ್ಟಾ ಜಮೀನಾಗಿದ್ದು, ಒಂದು ಇಂಚು ಕೂಡಾ ಟ್ಯಾಂಕ್ ಭೂಮಿ ಒತ್ತುವರಿಯಾಗಿಲ್ಲ” ಎಂದು ತಿಳಿಸಿದ್ದಾರೆ.

“ಖಾಸಗಿ ಜಮೀನಿನೊಳಗೆ ನಿರ್ಮಿಸಲಾದ ಕಟ್ಟಡವನ್ನು ಅಕ್ರಮವೆಂದು ಹೇಳಿ ಕಟ್ಟಡ ಕೆಡವಲು ಮುಂದಾದ ಈ ಹಿಂದಿನ ಎಲ್ಲಾ ನೋಟಿಸ್‌ಗೆ ತಡೆಯಾಜ್ಞೆ ಆದೇಶವಿದೆ. ಆದರೆ ಸ್ಪಷ್ಟವಾಗಿ, ತಪ್ಪು ಮಾಹಿತಿಯ ಆಧಾರದ ಮೇಲೆ ಈಗ ಕೆಡವಲಾಗಿದೆ” ಎಂದು ಹೇಳಿದ್ದಾರೆ.

“ಇಂದು ಬೆಳಗ್ಗೆ ಕೆಡವುವ ಮುನ್ನ ಯಾವುದೇ ಸೂಚನೆ ನೀಡಿಲ್ಲ. ಕಾನೂನು ಪಾಲಿಸುವ ಪ್ರಜೆಯಾಗಿ, ಪ್ರಕರಣದ ವಿಚಾರಣೆ ಬಾಕಿ ಇರುವ ನ್ಯಾಯಾಲಯವು ನನ್ನ ವಿರುದ್ಧ ತೀರ್ಪು ನೀಡಿದ್ದರೆ, ನಾನೇ ಧ್ವಂಸಗೊಳಿಸುತ್ತಿದ್ದೆ” ಎಂದು ಆರೋಪಿಸಿದ್ದಾರೆ.

“ನಾನು ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದೇನೆ ಎಂಬ ತಪ್ಪು ಅಭಿಪ್ರಾಯವನ್ನು ಸರಿಪಡಿಸುವ ಉದ್ದೇಶದಿಂದ ನಾನು ಈ ಮಾಹಿತಿ ನೀಡುತ್ತಿದ್ದೇನೆ. ಅಧಿಕಾರಿಗಳು ನಡೆಸಿದ ತಪ್ಪು ಕ್ರಮಗಳಿಗೆ ಸಂಬಂಧಿಸಿದಂತೆ ನಾವು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆ” ಎಂದು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...