146 ಸಂಸದರ ಅಮಾನತು ವಾಪಸ್: ಪ್ರಲ್ಹಾದ್ ಜೋಷಿ

Date:

ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಉಭಯ ಸದನಗಳಿಂದ ಅಮಾನತುಗೊಂಡಿದ್ದ ವಿಪಕ್ಷಗಳ 146 ಸಂಸದರ ಅಮಾನತು ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದಿದೆ.

ಈ ಬಗ್ಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಷಿ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಮಾನತುಗೊಂಡಿದ್ದ ಸಂಸದರ ಅಮಾನತು ನಿರ್ಧಾರವನ್ನು ಹಿಂಪಡೆಯುವಂತೆ ಲೋಕಸಭೆ ಹಾಗೂ ರಾಜ್ಯಸಭೆಯ ಉಸ್ತುವಾರಿ ಅಧಿಕಾರಿಗಳಿಗೆ ಮನವಿ ಮಾಡಿದೆ ಎಂದು ತಿಳಿಸಿದರು.

ಜನವರಿ 31ರಂದು ಆರಂಭವಾಗುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷ ಸಭೆಯಲ್ಲಿ ಸಚಿವರು ಈ ವಿಷಯ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

“ಎಲ್ಲ ಸಂಸದರ ಅಮಾನತನ್ನು ವಾಪಸ್ ಪಡೆಯಲಾಗುವುದು. ಈ ಬಗ್ಗೆ ಲೋಕಸಭೆ ಸ್ಪೀಕರ್ ಹಾಗೂ ರಾಜ್ಯಸಭೆಯ ಅಧ್ಯಕ್ಷರೊಂದಿಗೆ ಮಾತನಾಡಿದ್ದೇವೆ. ಸರ್ಕಾರದ ಪರವಾಗಿ ಮನವಿ ಸಲ್ಲಿಸಿದ್ದೇವೆ. ಇದು ಸ್ಪೀಕರ್ ಹಾಗೂ ಸಭಾಧ್ಯಕ್ಷರ ವ್ಯಾಪ್ತಿಯಲ್ಲಿದೆ. ಹಾಗಾಗಿ ಉಭಯ ಸದನಗಳ ಇಬ್ಬರಿಗೂ ಹಕ್ಕು ಭಾದ್ಯತಾ ಸಮಿತಿಯೊಂದಿಗೆ ಮಾತನಾಡಿ ಅಮಾನತು ವಾಪಸ್ ಪಡೆದು ಸದನಗಳಿಗೆ ಹಾಜರಾಗಲು ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ” ಎಂದು ಪ್ರಲ್ಹಾದ್ ಜೋಷಿ ತಿಳಿಸಿದರು.

ನಾಳೆ ಸದನಕ್ಕೆ ಸದಸ್ಯರು ಬರಬಹುದೇ ಎಂಬ ಪ್ರಶ್ನೆಗೆ ಸಚಿವರು ಹೌದು ಎಂದು ಉತ್ತರಿಸಿದರು.

ಸರ್ವಪಕ್ಷ ಸಭೆಯಲ್ಲಿ 30 ಪಕ್ಷಗಳ 45 ನಾಯಕರು ಭಾಗವಹಿಸಿದ್ದರು. ಈ ಅಧಿವೇಶನವು 17ನೇ ಲೋಕಸಭೆಯ ಕೊನೆಯ ಅಧಿವೇಶನವಾಗಿದೆ. ನಾಳೆ ಆರಂಭವಾಗುವ ಬಜೆಟ್ ಅಧಿವೇಶನವು ಫೆ.09 ರಂದು ಕೊನೆಗೊಳ್ಳಲಿದೆ.

ಬಜೆಟ್‌ ಅಧಿವೇಶನದಲ್ಲಿ ಹಣದುಬ್ಬರ ಹಾಗೂ ನಿರುದ್ಯೋಗದ ಬಗ್ಗೆ ಪ್ರಸ್ತಾಪಿಸುವುದಾಗಿ ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...